ದೀವಳಿಗೆಯ ದರ್ಶನ

– ಪಲ್ಲವಿ –

ಕುಣಿಯುತ ಬಂದಿದೆ ದೀವಳಿಗೆ- ಝಣ-
ಝಣಿರೆನೆ ನೂಪುರ ಅಡಿಗಡಿಗೆ !
ತಣಿವನು ಹಂಚಲು ಎಡೆಯೆಡೆಗೆ- ಕುಣಿ-
ಕುಣಿಯುತ ಬಂದಿದೆ ದೀವಳಿಗೆ !


ಮುಸುಕಿದ ಮೋಡವು ಮಸುಳಿತಿದೇನು ?
ಹಸನು ಹಸನು ಬೆಳುಗಾಲದ ಬಾನು !
ನಸುನಗುತಿಹ ಬಿಸುಪಿಲ್ಲದ ಭಾನು,
ರಸಮಯವಾಗಿದೆ ಬದುಕಿನ ಜೇನು!

ತಂದಿದ ಚೆಲುವನು ದೀವಳಿಗೆ-ಇದೊ
ತಂದಿದೆ ಚೆಲುವನು ದೀವಳಿಗೆ !….
ಚೆಂದದ ಹಸುಗೆಯು ಮನೆ-ಮನೆಗೆ !


ತಿಳಿವಿನ ಬೀಜದ ಎಳಮೊಳಕೆಗಳೋ !
ಬೆಳಕಿನ ಬಳ್ಳಿಯ ನವಕಳಿಕೆಗಳೋ !
ತೊಳಗುವುವಿವು ದೀವಿಗೆಗಳ ಸಾಲೋ !
ಅಳಿಗತ್ತಲೆಗಿರುಳಲ್ಲಿಯು ಸೋಲೋ !

ತಂದಿದೆ ಪ್ರಭೆಯನು ದೀವಳಿಗೆ-ಕರೆ-
ತಂದಿದೆ ಪ್ರಭೆಯನು ದೀವಳಿಗೆ….
ಚೆಂದದ ಹಂದರ ಮನಮನೆಗೆ!


ತಳೆದಿದೆ ಪರಿಸರ ಪರಿಜವನೊಲವು !
ಬೆಳಗಿ ಶುಭಾರತಿ ಬೆಳಸಿದ ನಲಿವು !
ಕಲಕಿದ ಎದೆ-ಮನಗಳ ಕಹಿನೋವು-
ತೊಲಗಿ, ಮೊಳಗುತಿದೆ ಒಸಗೆಯ ಸೋವು !

ತಂದಿದೆ ಒಲವನು ದೀವಳಿಗೆ-ಇದೊ
ತಂದಿದೆ ಒಲವನು ದೀವಳಿಗೆ…
ಕುಂದದ ಸಂತಸ ಮನೆ-ಮನೆಗೆ!


ಶರದದ ಸಿದೇವಿಯ ಹೊಸ ಮೇಳ
ಸರಿಗಮದೊಂದಿಗೆ ಹಾಕುತ ತಾಳ,
ಸ್ವರವೇರಿಸಿ ಮಂಗಲಗೀತಗಳಽ
ಒರೆದು ಹುರುಳ ತುಂಬಿರುವುವು ಬಾಳ !

ಬಂದಿದೆ ತಂದಿದೆ ದೀವಳಿಗೆ-ಇದೊ
ಬಂದಿದೆ ತಂದಿದ ದೀವಳಿಗೆ….
ನಂದದನಂದನ ಮನೆ-ಮನೆಗೆ!


ವಧುಗಳು ಮರೆತರು ವಿರಹದ ಕಾಟ,
ಹೃದ-ಹೃದಯದಿ ಪ್ರಣಯದ ಚೆಲ್ಲಾಟ!
ಸದನ-ಸದನದಲಿ ಸವಿ-ಸುಖದೂಟ-
ಇದುವೇ ದೀವಳಿಗೆಯ ಮರೆಮಾಟ!

ಕುಣಿಯುತ ಬಂದಿದೆ ದೀವಳಿಗೆ,-ಕುಣಿ
ಕುಣಿಯುತ ಬಂದಿದ ದೀವಳಿಗೆ
ತಣಿವನು ಬೀರಿದೆ ಜನಗಳಿಗೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಷ್ಟ
Next post ವಿಶ್ವಾಮಿತ್ರ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys