Home / ಕವನ / ಕವಿತೆ / ದೀವಳಿಗೆಯ ದರ್ಶನ

ದೀವಳಿಗೆಯ ದರ್ಶನ

– ಪಲ್ಲವಿ –

ಕುಣಿಯುತ ಬಂದಿದೆ ದೀವಳಿಗೆ- ಝಣ-
ಝಣಿರೆನೆ ನೂಪುರ ಅಡಿಗಡಿಗೆ !
ತಣಿವನು ಹಂಚಲು ಎಡೆಯೆಡೆಗೆ- ಕುಣಿ-
ಕುಣಿಯುತ ಬಂದಿದೆ ದೀವಳಿಗೆ !


ಮುಸುಕಿದ ಮೋಡವು ಮಸುಳಿತಿದೇನು ?
ಹಸನು ಹಸನು ಬೆಳುಗಾಲದ ಬಾನು !
ನಸುನಗುತಿಹ ಬಿಸುಪಿಲ್ಲದ ಭಾನು,
ರಸಮಯವಾಗಿದೆ ಬದುಕಿನ ಜೇನು!

ತಂದಿದ ಚೆಲುವನು ದೀವಳಿಗೆ-ಇದೊ
ತಂದಿದೆ ಚೆಲುವನು ದೀವಳಿಗೆ !….
ಚೆಂದದ ಹಸುಗೆಯು ಮನೆ-ಮನೆಗೆ !


ತಿಳಿವಿನ ಬೀಜದ ಎಳಮೊಳಕೆಗಳೋ !
ಬೆಳಕಿನ ಬಳ್ಳಿಯ ನವಕಳಿಕೆಗಳೋ !
ತೊಳಗುವುವಿವು ದೀವಿಗೆಗಳ ಸಾಲೋ !
ಅಳಿಗತ್ತಲೆಗಿರುಳಲ್ಲಿಯು ಸೋಲೋ !

ತಂದಿದೆ ಪ್ರಭೆಯನು ದೀವಳಿಗೆ-ಕರೆ-
ತಂದಿದೆ ಪ್ರಭೆಯನು ದೀವಳಿಗೆ….
ಚೆಂದದ ಹಂದರ ಮನಮನೆಗೆ!


ತಳೆದಿದೆ ಪರಿಸರ ಪರಿಜವನೊಲವು !
ಬೆಳಗಿ ಶುಭಾರತಿ ಬೆಳಸಿದ ನಲಿವು !
ಕಲಕಿದ ಎದೆ-ಮನಗಳ ಕಹಿನೋವು-
ತೊಲಗಿ, ಮೊಳಗುತಿದೆ ಒಸಗೆಯ ಸೋವು !

ತಂದಿದೆ ಒಲವನು ದೀವಳಿಗೆ-ಇದೊ
ತಂದಿದೆ ಒಲವನು ದೀವಳಿಗೆ…
ಕುಂದದ ಸಂತಸ ಮನೆ-ಮನೆಗೆ!


ಶರದದ ಸಿದೇವಿಯ ಹೊಸ ಮೇಳ
ಸರಿಗಮದೊಂದಿಗೆ ಹಾಕುತ ತಾಳ,
ಸ್ವರವೇರಿಸಿ ಮಂಗಲಗೀತಗಳಽ
ಒರೆದು ಹುರುಳ ತುಂಬಿರುವುವು ಬಾಳ !

ಬಂದಿದೆ ತಂದಿದೆ ದೀವಳಿಗೆ-ಇದೊ
ಬಂದಿದೆ ತಂದಿದ ದೀವಳಿಗೆ….
ನಂದದನಂದನ ಮನೆ-ಮನೆಗೆ!


ವಧುಗಳು ಮರೆತರು ವಿರಹದ ಕಾಟ,
ಹೃದ-ಹೃದಯದಿ ಪ್ರಣಯದ ಚೆಲ್ಲಾಟ!
ಸದನ-ಸದನದಲಿ ಸವಿ-ಸುಖದೂಟ-
ಇದುವೇ ದೀವಳಿಗೆಯ ಮರೆಮಾಟ!

ಕುಣಿಯುತ ಬಂದಿದೆ ದೀವಳಿಗೆ,-ಕುಣಿ
ಕುಣಿಯುತ ಬಂದಿದ ದೀವಳಿಗೆ
ತಣಿವನು ಬೀರಿದೆ ಜನಗಳಿಗೆ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...