ಮಾಯದ ನೋವು

(ಶೋಕಗೀತ)


ಶಕ್ತಿದೈವತದ ಬಲಗೈಯ ಕರವಾಲವೇ,
ಯುಕ್ತಿಯಲಿ ಹಗೆಯ ಬಂಧಿಸುವಿಂದ್ರಜಾಲವೇ,
ದಿಕ್ಕು-ದಿಕ್ಕುಗಳ ರಕ್ಷಿಸಿದೇಕ ದಿಗ್ಗಜವೆ,
ಭರತರಾಷ್ಟ್ರದ ಧೈರ್ಯಪುರುಷ ಕೀರ್ತಿಧ್ವಜವೆ!
ಭಾಯಿ, ವಲ್ಲಭಭಾಯಿ ಭಾರತಿಯ ಕಣ್ಮಣಿ-
ನಿನ್ನನೂ ಕಬಳಿಸಿದಳೇ ಮೃತ್ಯುರಾಣಿ ?


ಓ, ಮೃತ್ಯು ದೇವತೆಯೆ ನಿರ್ದಯೇ, ನಿನ್ನನೂ
ದೇವಿಯರ ಶ್ರೇಣಿಯಲ್ಲಿ ಸೇರಿಸಿದನಾವನು ?
ನಿನಗೆ ಕಣ್ಣಿವೆಯೇನು ? ನಿನಗೆ ಕರುಳಿದೆಯೇನು ?
ಕನಸೊಳಾದರು ಲೋಕಹಿತವ ಬಗೆದಿಹೆಯೇನು ?
ಲೋಕಹಿತಕಿರದವಳು ನೀನೆಂತು ದೇವತೆಯು ?
ಲೌಕಿಕರ ದುಃಖದಲಿ ನೂಕುವುದೆ ಸತ್ಕೃತಿಯು ?


ಓ! ಮೃತ್ಯುರಾಣೇಽಽ! ಬಾ, ನೋಡು ಬಾರಿಲ್ಲಿ,
ನೀನಿಂದು ಗೆಯ್ದ ತಾಂಡವದ ಪರಿಣಾಮವನು !
ಎಂಥ ಜೀವದ ಹೂವ ತುಳಿ-ತುಳಿದು ಬಳಲಿಸಿದೆ?
ಆ ಹೂವ ಬಯಸುವರ ಎದೆಯೆದೆಯನಳಲಿಸಿದೆ!
ನಾಡಿನಲಿ ಹರಿಯುತಿದೆ ಕಂಬನಿಯ ಹೊನಲು
ಚಳಿಗಾಳಿಯೂ ಚೆಲ್ಲುತಿದೆ ಬಿಸಿಯ ಸುಯಿಲು!


ಉಕ್ಕಿನೆದೆಯವನೆಂದು ಹೆಸರಾಂತ ಧೀರಾ !
ಉಕ್ಕಿನೆದೆಯನ್ನು ಕಾಯಲಿಕೆಂದು ಮೈಯನೂ
ಉಕ್ಕಿನದೆ ಪಡೆದುಕೊಂಡಿರ್ದ್ದೆಯೆಂದಿರ್ದ್ದೆವೈ !
ನಿನ್ನ ಉಕ್ಕಿನ ಜೀವ ಭಾರತದ ರಕ್ಷಣೆಗೆ
ಬನ್ನವಿಲ್ಲದ ಕವಚವೆಂದು ಬಗೆದಿರ್ದ್ದೆವೈ !
ಬಂಧು, ವಲ್ಲಭರಾಜ, ನಿನ್ನ ಮರಣವಿದು-
ನಮ್ಮ ನಂಬುಗೆಗೆಂಥ ಹಾರೆಯಿಕ್ಕಿದುದು !


ನಿರ್ಜೀವದಲ್ಲಿ ಜೀವವನೂದಿದವ ನೀನು,
ಬೆಂಡುಗಳಲೂ ಬಲದ ಸಾರವರೆದವನು ;
ಬಯಲಲ್ಲಿ ಧೈರ್ಯಮೇರುವ ಮೆರಸಿದವ ನೀನು
ಭಯವನ್ನು ಶೌರ್ಯದಲಿ ಮಾರ್ಪಡಿಸಿದವನು!
ಓ, ಅಣ್ಣ ವಲ್ಲಭಾ, ನೀನು ಸಾಹಸಮಲ್ಲ,
ನಿನಗೆ ಸಾವೇ ? ಸುಳ್ಳು ಸುಳ್ಳು! ಹುಸಿಮಾತೆಲ್ಲ!


ಅಯ್ಯೋ, ಏನಿದು ಭ್ರಮೆಯು! ದುಃಖದುನ್ಮಾದ!
ಭಾರತದಿ ತುಂಬಿರುವ ಈ ಆರ್ತನಾದ….
ಕಿವಿಗೆ ಕೇಳುತಲಿಹುದು, ಮನಕೆ ಕಾಣುತಲಿಹುದು,
ಸುಳ್ಳು ಎಂತಾಗುವುದು ವಲ್ಲಭನ ಮರಣವದು !
ನಿಜವೆ, ಅಂತಾದೊಡಾ ಧೀರನಾ ಸಾವು ?
ಅಯ್ಯೊ, ನಾಡಿನ ಜನಕೆ ಮಾಯದಾ ನೋವು!


ಅಕ್ಕಟಾ!
ಭಾರತದ ಕಾಪಿಂಗೆ ಕೋಟೆಯಿನ್ನಾರು ?
ಹಗೆಯ ಗುಂಡಿಗೆಯೊಡೆವ ಗುಡುಗು ಇನ್ನಾರು ?
ಕಂಗೆಟ್ಟ ಜನಕುಲಕೆ ಕಣ್ಣು ಇನ್ನಾರು ?
ಸಿಡಿಲುನುಡಿಯಿಂದ ಭಯವನು ಜಡಿವರಾರು ?
ಯಾರಿಹರು ? ಯಾರಿಹರು ? ಯಾರು, ಇನ್ನಾರು ?
ಈ ಕೇಳ್ಕೆಗುತ್ತರವ ಕೊಡುವರಾರಿಹರು ?


ಶಕ್ತಿದೈವತದ ಬಲಗೈಯ ಕರವಾಲವೆ ?
ಯುಕ್ತಿಯಲಿ ಹಗೆಯ ಬಂಧಿಸುವಿಂದ್ರಜಾಲವೆ?
ದಿಕ್ಕು-ದಿಕ್ಕುಗಳ ರಕ್ಷಿಸಿದೇಕ ದಿಗ್ಗಜವೆ!
ಭರತರಾಷ್ಟ್ರದ ಧೈರ್ಯಪುರುಷ ಕೀರ್ತಿಧ್ವಜವೆ?
ಭಾಯಿ, ವಲ್ಲಭಭಾಯಿ, ಭಾರತದ ಕಣ್ಮಣಿ,
ನಿನ್ನನೂ ಕಬಳಿಸಿದಳೇ ಮೃತ್ಯರಾಣಿ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪದ್ಯಗದ್ಯಗಳ ರಾಷ್ಟ್ರೀಯತೆ
Next post ಮಾಸತಿ

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…