ಬೆಳಕಿಗೆ ಸ್ವಾಗತ

– ಪಲ್ಲವಿ –

ಬಾ, ತರಣಿಯ ತುಂಬಿದ ಹೊಂಬೆಳಕೇ,
ಈ ತಮವನು ತೊಳೆಯಲು ನೆಲಕೆ!


‘ಕಾರಿರುಳನು ಬಿಡಿ, ಬೆಳಕಿಗೆ ಕಾಲಿಡಿ!
ಸಾರುತಿದೆಯಿಂತು ದೈವದ ತಿಳಿನುಡಿ;
ಆರಯ್ಯುವುದಿಳೆ ನಿನ್ನ ಬರವಿನಡಿ,
ತೂರುತ ಕಿರಣವ ಕೆಲಕೆಲಕೆ….
ಬಾ, ತರಣಿಯ ತುಂಬಿದ ಹೊಂಬೆಳಕೆ !


ಹೊರಗೊಳಗು ಕಳ್ತಲೆಯೆ ತುಂಬಿಹುದೋ!
ಕಿರುಸೊಡರ ಮಿಣುಕುಮನೆಯೆಂತಹದೋ !
ಉರಿ-ಪಂಜುಗಳನೆಂತು ನಂಬುವುದೋ!
ನೀ ಬೇಕೆಂಬುದ ಎಲ್ಲರ ಬಯಕೆ….
ಬಾ, ತರಣಿಯ ತುಂಬಿದ ಹೊಂಬೆಳಕೇ !


ಹೊರಟಿಡೆ ಎಲ್ಲುಳಿಯಿತೊ, ಕಾಣದಿದೆ !
ತೆರಳ್ವೆಡೆಯೆಲ್ಲಿದೆಯೋ ಮರೆಯಲಿದೆ !
ನೆರೆ-ಹೊರೆಗಳ ನೆಲೆಯೂ ತಿಳಿಯದಿದೆ !
ತಿರುಗುತಲಿಹೆ ಏನನೊ ಹುಡುಕಲಿಕೆ….
ಬಾ, ತರಣಿಯ ತುಂಬಿದ ಹೊಂಬೆಳಕೇ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧ್ಯಾನ ಸರಪಳಿ
Next post ಅಶ್ವಾರೋಹಿ

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys