ಬೆಳಕಿಗೆ ಸ್ವಾಗತ

– ಪಲ್ಲವಿ –

ಬಾ, ತರಣಿಯ ತುಂಬಿದ ಹೊಂಬೆಳಕೇ,
ಈ ತಮವನು ತೊಳೆಯಲು ನೆಲಕೆ!


‘ಕಾರಿರುಳನು ಬಿಡಿ, ಬೆಳಕಿಗೆ ಕಾಲಿಡಿ!
ಸಾರುತಿದೆಯಿಂತು ದೈವದ ತಿಳಿನುಡಿ;
ಆರಯ್ಯುವುದಿಳೆ ನಿನ್ನ ಬರವಿನಡಿ,
ತೂರುತ ಕಿರಣವ ಕೆಲಕೆಲಕೆ….
ಬಾ, ತರಣಿಯ ತುಂಬಿದ ಹೊಂಬೆಳಕೆ !


ಹೊರಗೊಳಗು ಕಳ್ತಲೆಯೆ ತುಂಬಿಹುದೋ!
ಕಿರುಸೊಡರ ಮಿಣುಕುಮನೆಯೆಂತಹದೋ !
ಉರಿ-ಪಂಜುಗಳನೆಂತು ನಂಬುವುದೋ!
ನೀ ಬೇಕೆಂಬುದ ಎಲ್ಲರ ಬಯಕೆ….
ಬಾ, ತರಣಿಯ ತುಂಬಿದ ಹೊಂಬೆಳಕೇ !


ಹೊರಟಿಡೆ ಎಲ್ಲುಳಿಯಿತೊ, ಕಾಣದಿದೆ !
ತೆರಳ್ವೆಡೆಯೆಲ್ಲಿದೆಯೋ ಮರೆಯಲಿದೆ !
ನೆರೆ-ಹೊರೆಗಳ ನೆಲೆಯೂ ತಿಳಿಯದಿದೆ !
ತಿರುಗುತಲಿಹೆ ಏನನೊ ಹುಡುಕಲಿಕೆ….
ಬಾ, ತರಣಿಯ ತುಂಬಿದ ಹೊಂಬೆಳಕೇ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧ್ಯಾನ ಸರಪಳಿ
Next post ಅಶ್ವಾರೋಹಿ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ತಾಯಿ-ಬಂಜೆ

    "ಅಯ್ಯೋ! ಅಮ್ಮ!... ನೋವು... ನೋವು... ಸಂಕಟ.... ಅಮ್ಮ!-" ಒಂದೇ ಸಮನಾಗಿ ನರಳಾಟ. ಹೊಟ್ಟೆಯನ್ನು ಕಡೆಗೋಲಿನಿಂದ ಕಡದಂತಾಗುತ್ತಿತ್ತು. ಈ ಕಲಕಾಟದಿಂದ ನರ ನರವೂ ಕಿತ್ತು ಹೋದಂತಾಗಿ ಮೈಕೈಯೆಲ್ಲಾ ನೋವಿನಿಂದ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…