Home / ಕವನ / ಕವಿತೆ / ಅವಿರತ ಯಜ್ಞ

ಅವಿರತ ಯಜ್ಞ

ಭುವಿಯ ಚೇತನಾಗ್ನಿಯಲ್ಲಿ
ಸೂರ್‍ಯ ಬಲಿಯು ನೀಡುವ;
ಅಮೃತಗರ್ಭನಾದ ಸೋಮ
ಸೋಮರಸವನೂಡುವ.

ಅಗಣಿತ ಗ್ರಹ-ತಾರಕಾಳಿ
ಮಧುಹೋಮವ ನಡೆಸಿವೆ;
ಮೋಡ- ಗುಡುಗು, ಮಿಂಚು-ಸಿಡಿಲು
ಉದಧಿಗರ್ಘ್ಯ ಕೊಡುತಿವೆ!

ಸಾಗರ ಹೋತಾರನಾಗಿ
ಸೂರ್ಯಗೆ ಬಲಿ ನೀಡುವ;
ಸೂರ್ಯನು ದಾತಾರನಾಗಿ
ಮೇಘಕೆ ಹನಿ ಹಾಕುವ.

ಮೇಘ ಯಾಗಕರ್ತೃವಾಗಿ
ಮಳೆಗೆ ನೀರ ಬೇಳ್ವುದು.
ಮಳೆಯು ಯಾಜಮಾನ್ಯ ವಹಿಸಿ
ಇಳೆಗೆ ಬಾಳನೆರೆವುದು.


ಪಾತಾಳದ ಶಕ್ತಿಮೂರ್ತಿ
ಭೂತಳದೀ ಭೂತಗಣಕೆ
ಸಾತ್ತ್ವಾಹುತಿ ಕೊಡುತಿದೆ;
ಸತ್ತ್ವಹವನ ಮಹಾಫಲವೆ
ಸಸ್ಯಗಳಲಿ ರೂಪುಗೊಂಡು,
ಜೀವಕೆ ಕೂಳಿಡುತಿದೆ.

ಜೀವ ಕೂಳನುಣುತಿವೆ;
ಜೀವನ ಬಲ ಕೊಳುತಿವೆ;
ಊಟ ಆಟ ಅರಿತಿವೆ-
ಅದರೊಳೆ ಮೈ ಮರೆತಿವೆ


‘ಪ್ರತಿಜೀವವು ಪಡೆಯಬೇಕು
ಯಾಜಮಾನ್ಯ ದೀಕ್ಷೆ!’
ಎಂದಿರುವುದು ಯಜ್ಞಪ್ರಿಯ-
ಸೃಷ್ಟಿಯ ಸದಪೇಕ್ಷೆ!

ಒಂದು ಜೀವಿಗೊಂದು ಜೀವ
ವಹ್ನಿಯು ಯಜಮಾನ-
ಆಗಬೇಕು; ಆದರೆಯೇ
ಶಾಂತಿ, ಸಮಾಧಾನ!


ಯಜ್ಞಸೂತ್ರದಲಿಯೆ ಕೋದು
ಲೋಕ-ಲೋಕ ನಿಂತಿವೆ ;
ಎಂದೆಂದಿಗು ಚ್ಯುತಿಯು ಇರದ
ಸಮಗತಿಗಳನಾಂತಿವೆ

ಅದೋ ಅಲ್ಲಿ, ಇದೋ ಇಲ್ಲಿ
ಎಲ್ಲೆಲ್ಲಿಯು ಯಜ್ಞ !
ಯಜ್ಞವ್ಯಾಪ್ತಿಯೆಂತಹದಿದು !
ಅರಿತವನೇ ಪ್ರಾಜ್ಞ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...