ಅವಿರತ ಯಜ್ಞ

ಭುವಿಯ ಚೇತನಾಗ್ನಿಯಲ್ಲಿ
ಸೂರ್‍ಯ ಬಲಿಯು ನೀಡುವ;
ಅಮೃತಗರ್ಭನಾದ ಸೋಮ
ಸೋಮರಸವನೂಡುವ.

ಅಗಣಿತ ಗ್ರಹ-ತಾರಕಾಳಿ
ಮಧುಹೋಮವ ನಡೆಸಿವೆ;
ಮೋಡ- ಗುಡುಗು, ಮಿಂಚು-ಸಿಡಿಲು
ಉದಧಿಗರ್ಘ್ಯ ಕೊಡುತಿವೆ!

ಸಾಗರ ಹೋತಾರನಾಗಿ
ಸೂರ್ಯಗೆ ಬಲಿ ನೀಡುವ;
ಸೂರ್ಯನು ದಾತಾರನಾಗಿ
ಮೇಘಕೆ ಹನಿ ಹಾಕುವ.

ಮೇಘ ಯಾಗಕರ್ತೃವಾಗಿ
ಮಳೆಗೆ ನೀರ ಬೇಳ್ವುದು.
ಮಳೆಯು ಯಾಜಮಾನ್ಯ ವಹಿಸಿ
ಇಳೆಗೆ ಬಾಳನೆರೆವುದು.


ಪಾತಾಳದ ಶಕ್ತಿಮೂರ್ತಿ
ಭೂತಳದೀ ಭೂತಗಣಕೆ
ಸಾತ್ತ್ವಾಹುತಿ ಕೊಡುತಿದೆ;
ಸತ್ತ್ವಹವನ ಮಹಾಫಲವೆ
ಸಸ್ಯಗಳಲಿ ರೂಪುಗೊಂಡು,
ಜೀವಕೆ ಕೂಳಿಡುತಿದೆ.

ಜೀವ ಕೂಳನುಣುತಿವೆ;
ಜೀವನ ಬಲ ಕೊಳುತಿವೆ;
ಊಟ ಆಟ ಅರಿತಿವೆ-
ಅದರೊಳೆ ಮೈ ಮರೆತಿವೆ


‘ಪ್ರತಿಜೀವವು ಪಡೆಯಬೇಕು
ಯಾಜಮಾನ್ಯ ದೀಕ್ಷೆ!’
ಎಂದಿರುವುದು ಯಜ್ಞಪ್ರಿಯ-
ಸೃಷ್ಟಿಯ ಸದಪೇಕ್ಷೆ!

ಒಂದು ಜೀವಿಗೊಂದು ಜೀವ
ವಹ್ನಿಯು ಯಜಮಾನ-
ಆಗಬೇಕು; ಆದರೆಯೇ
ಶಾಂತಿ, ಸಮಾಧಾನ!


ಯಜ್ಞಸೂತ್ರದಲಿಯೆ ಕೋದು
ಲೋಕ-ಲೋಕ ನಿಂತಿವೆ ;
ಎಂದೆಂದಿಗು ಚ್ಯುತಿಯು ಇರದ
ಸಮಗತಿಗಳನಾಂತಿವೆ

ಅದೋ ಅಲ್ಲಿ, ಇದೋ ಇಲ್ಲಿ
ಎಲ್ಲೆಲ್ಲಿಯು ಯಜ್ಞ !
ಯಜ್ಞವ್ಯಾಪ್ತಿಯೆಂತಹದಿದು !
ಅರಿತವನೇ ಪ್ರಾಜ್ಞ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಾತಃ ಸ್ಮರಣೀಯ ಬಸವಣ್ಣನವರು
Next post ಕನ್ನಡ ಕಾವ್ಯದ ಅಭಿಮನ್ಯು

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…