Home / ಕವನ / ಕವಿತೆ / ಮಹಾತ್ಮರಿಗೆ

ಮಹಾತ್ಮರಿಗೆ

ಒಡದು ಕರ್ಮದ ಕಟ್ಟು – ಜಗದ ಮೋಹವ ಸುಟ್ಟು
ಪಡೆದು ಸತ್ಯದ ದೃಷ್ಟಿ – ಜನಕೆ ತಿಳಿವನು ಕೊಟ್ಟು
ಜಡ ಶರೀರದ ಮಮತೆ – ಕಾಮ ಮದಗಳ ಬಿಟ್ಟು
ನುಡಿ ನುಡಿಗಹಿಂಸೆಯನ್ನು ಬೋಧಿಸುವೆ ಕೃಪೆಯಿಟ್ಟು.

ಎಲ್ಲ ಹೃದಯವ ಹೊಕ್ಕು – ಅಳೆದು ಜನುಮಗಳನ್ನು
ಎಲ್ಲ ಶೂಲೆಯನರಿದು – ಎರೆದು ಓಷಧಿಗಳನು
ಎಲ್ಲ ಹಿಂಸೆಯ ತೊಡೆದು – ಮುರಿದು ದುರ್ಗುಣಗಳನು
ಸೊಲ್ಲು ಸೊಲ್ಲಿಗೆ ಸತ್ಯ – ಕಾಣಿಸುವ ಗುರು ಶರಣು.

ನೀನು ನಡೆದುದೆ ಧರ್ಮ- ನೀನು ನುಡಿದುದೆ ಸತ್ಯ.
ನೀನಹಂಕಾರಗಳ – ಮೋಹ ರೋಷದ ಮಿಥ್ಯ
ಮಾನಾಭಿಮಾನಗಳ – ಹಾಯ್ದು ಕಂಡಿಹೆ ಸತ್ಯ.
ನೀನು ಪ್ರೇಮದ ಮೂರ್ತಿ – ಜಾಗ್ರತನು ನೀ ನಿತ್ಯ.

ಕೃಷ್ಣಟನಾಡಿತಮೆಲ್ಲ – ಹಾಸುಹೊಕ್ಕಾಗಿಹುದು
ಕೃಷ್ಣ ನೀನಾಗಿರಲು – ವಿಜಯರಾವಹುದಹುದು
ಈ ಕುರುಕ್ಷೇತ್ರದಲಿ – ನೀನು ಸಾರಥಿಯಾಗಿ
ಲೋಕ ರಕ್ಷಿಸು ಗಾಂಧಿ – ಸನ್ಮಹಾತ್ಮನೆ ಸಾಗಿ.

ಸತ್ವರಜತಮಗುಣವ – ಹಸುರು ಬಿಳಿ ಕೆಂಪುಗಳ
ನಿತ್ಯಕೇತನವೆತ್ತಿ – ಸ್ನೇಹದಿಂ ಲೋಕಗಳ
ಅತ್ಯಧಿಕ ವಾತ್ಸಲ್ಯ – ಅಭಯ ವಿಶ್ವಾಸಗಳ
ಸ್ತುತ್ಯ ಮೂರುತಿ ಶರಣು – ನೆನೆವೆ ನಿನ್ನಂಘ್ರಿಗಳ.

ಹತ್ತು ದಿಕ್ಕುಗಳಲ್ಲಿ – ಕರುಣವಾಹಿನಿ ಹರಿಸಿ
ಮತ್ತೆ ಬಿಂಬಿಸಿ ನಿನ್ನ – ನೆಲ್ಲ ಹೃದಯದೊಳಿರಿಸಿ
ಓ ಹಸನ್ಮುಖಿ ಬಾರ – ಶಾಂತಿ ಲೋಕದಿ ಸುರಿಸಿ
ಶ್ರೀಹಸಾದವ ನೀಡು- ಓ ಮಹಾತ್ಮನೆ ಹರಸಿ-

ವಾಣಿಯಲ್ಲಿ ಶ್ರೀರಾಮ – ರಾಮಚಂದ್ರನನಾಮ
ಕ್ಷೋಣಿಯಲಿ ರಘುರಾಮ – ನಾಮ ಪಾವನನಾಮ
ಸಕಲಕೆಲ್ಲಕು ಮರ್ದು – ರಾಂ ರಹೀಮರನಾಮ
ನಿಖಿಳದೇವರ ನಿಜವ – ನೊರೆವ ಸಾಧು ಸನಾಮ.

ನಿನ್ನ ಬಾಳೀ ಜಗದ- ರಕ್ಷಣೆಗೆ ಮುಡುಪಾಯ್ತು
ಸನ್ನುತನೆ ಭಾರತಿಯ – ಬಿಡುಗಡೆಗೆ ಎಡೆಯಾಯ್ತು
ಉನ್ನತಾಮಲ ಕೀರ್ತಿ – ಮಾನಿನಿಗೆ ಚಿರಮಾಯ್ತು.
ಮುನ್ನ ಸ್ವಾತಂತ್ರ್ಯಕ್ಕೆ – ಸುಸ್ಥಿರದ ಜಯಮಾಯ್ತು.

ಲೋಕವೇ ನಿನದಾಯ್ತು – ನೀನು ಸರ್ವರೊಳಿರಲು
ಶ್ರೀಕರಾಂಘ್ರಿಯ ರೇಣು – ಎಮ್ಮ ಶಿರದೊಳಗಿರಲು
ಸಾಕು ನಿನ್ನ ಸ್ಮರಣೆ – ಸಕಲರನ್ನೆಬ್ಬಿಸಲು
ಶೋಕದಳಿವುದು ದೇವ – ನಿನ್ನ ಕೃಪೆಯೊಂದಿರಲು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...