Home / ಕವನ / ಕವಿತೆ / ಮಹಾತ್ಮರಿಗೆ

ಮಹಾತ್ಮರಿಗೆ

ಒಡದು ಕರ್ಮದ ಕಟ್ಟು – ಜಗದ ಮೋಹವ ಸುಟ್ಟು
ಪಡೆದು ಸತ್ಯದ ದೃಷ್ಟಿ – ಜನಕೆ ತಿಳಿವನು ಕೊಟ್ಟು
ಜಡ ಶರೀರದ ಮಮತೆ – ಕಾಮ ಮದಗಳ ಬಿಟ್ಟು
ನುಡಿ ನುಡಿಗಹಿಂಸೆಯನ್ನು ಬೋಧಿಸುವೆ ಕೃಪೆಯಿಟ್ಟು.

ಎಲ್ಲ ಹೃದಯವ ಹೊಕ್ಕು – ಅಳೆದು ಜನುಮಗಳನ್ನು
ಎಲ್ಲ ಶೂಲೆಯನರಿದು – ಎರೆದು ಓಷಧಿಗಳನು
ಎಲ್ಲ ಹಿಂಸೆಯ ತೊಡೆದು – ಮುರಿದು ದುರ್ಗುಣಗಳನು
ಸೊಲ್ಲು ಸೊಲ್ಲಿಗೆ ಸತ್ಯ – ಕಾಣಿಸುವ ಗುರು ಶರಣು.

ನೀನು ನಡೆದುದೆ ಧರ್ಮ- ನೀನು ನುಡಿದುದೆ ಸತ್ಯ.
ನೀನಹಂಕಾರಗಳ – ಮೋಹ ರೋಷದ ಮಿಥ್ಯ
ಮಾನಾಭಿಮಾನಗಳ – ಹಾಯ್ದು ಕಂಡಿಹೆ ಸತ್ಯ.
ನೀನು ಪ್ರೇಮದ ಮೂರ್ತಿ – ಜಾಗ್ರತನು ನೀ ನಿತ್ಯ.

ಕೃಷ್ಣಟನಾಡಿತಮೆಲ್ಲ – ಹಾಸುಹೊಕ್ಕಾಗಿಹುದು
ಕೃಷ್ಣ ನೀನಾಗಿರಲು – ವಿಜಯರಾವಹುದಹುದು
ಈ ಕುರುಕ್ಷೇತ್ರದಲಿ – ನೀನು ಸಾರಥಿಯಾಗಿ
ಲೋಕ ರಕ್ಷಿಸು ಗಾಂಧಿ – ಸನ್ಮಹಾತ್ಮನೆ ಸಾಗಿ.

ಸತ್ವರಜತಮಗುಣವ – ಹಸುರು ಬಿಳಿ ಕೆಂಪುಗಳ
ನಿತ್ಯಕೇತನವೆತ್ತಿ – ಸ್ನೇಹದಿಂ ಲೋಕಗಳ
ಅತ್ಯಧಿಕ ವಾತ್ಸಲ್ಯ – ಅಭಯ ವಿಶ್ವಾಸಗಳ
ಸ್ತುತ್ಯ ಮೂರುತಿ ಶರಣು – ನೆನೆವೆ ನಿನ್ನಂಘ್ರಿಗಳ.

ಹತ್ತು ದಿಕ್ಕುಗಳಲ್ಲಿ – ಕರುಣವಾಹಿನಿ ಹರಿಸಿ
ಮತ್ತೆ ಬಿಂಬಿಸಿ ನಿನ್ನ – ನೆಲ್ಲ ಹೃದಯದೊಳಿರಿಸಿ
ಓ ಹಸನ್ಮುಖಿ ಬಾರ – ಶಾಂತಿ ಲೋಕದಿ ಸುರಿಸಿ
ಶ್ರೀಹಸಾದವ ನೀಡು- ಓ ಮಹಾತ್ಮನೆ ಹರಸಿ-

ವಾಣಿಯಲ್ಲಿ ಶ್ರೀರಾಮ – ರಾಮಚಂದ್ರನನಾಮ
ಕ್ಷೋಣಿಯಲಿ ರಘುರಾಮ – ನಾಮ ಪಾವನನಾಮ
ಸಕಲಕೆಲ್ಲಕು ಮರ್ದು – ರಾಂ ರಹೀಮರನಾಮ
ನಿಖಿಳದೇವರ ನಿಜವ – ನೊರೆವ ಸಾಧು ಸನಾಮ.

ನಿನ್ನ ಬಾಳೀ ಜಗದ- ರಕ್ಷಣೆಗೆ ಮುಡುಪಾಯ್ತು
ಸನ್ನುತನೆ ಭಾರತಿಯ – ಬಿಡುಗಡೆಗೆ ಎಡೆಯಾಯ್ತು
ಉನ್ನತಾಮಲ ಕೀರ್ತಿ – ಮಾನಿನಿಗೆ ಚಿರಮಾಯ್ತು.
ಮುನ್ನ ಸ್ವಾತಂತ್ರ್ಯಕ್ಕೆ – ಸುಸ್ಥಿರದ ಜಯಮಾಯ್ತು.

ಲೋಕವೇ ನಿನದಾಯ್ತು – ನೀನು ಸರ್ವರೊಳಿರಲು
ಶ್ರೀಕರಾಂಘ್ರಿಯ ರೇಣು – ಎಮ್ಮ ಶಿರದೊಳಗಿರಲು
ಸಾಕು ನಿನ್ನ ಸ್ಮರಣೆ – ಸಕಲರನ್ನೆಬ್ಬಿಸಲು
ಶೋಕದಳಿವುದು ದೇವ – ನಿನ್ನ ಕೃಪೆಯೊಂದಿರಲು.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...