ಜವಾಹರಲಾಲ ನೆಹರೂ

ಮೋತಿಲಾಲ್ ಕೈಮುತ್ತು ಭಾರತಿಯ ಪದಕಿತ್ತು
ಸ್ವಾತಂತ್ರ್ಯದೊಡವೆಯಂ ಮಾಡಿ ತೇಜಮನಿತ್ತು
ಪೋದನಾ ಸಾಹಸಿಗ ಸಗ್ಗಮಂ ಸಾರಿದನ್
ಸಾಧಿಸಿದ ರಾಜ್ಯಮನ್ ಕೆರ್ಚಾಳು ಕೊನೆಗರ್ದ
ಸತ್ಯಾಸಿಧಾರೆಯಿಂ ಧರ್ಮಕವಚವನುಟ್ಟು
ಭಾರತಿಯ ಬಿಡುಗಡೆಗೆ ವೀರಪಣಮಂ ತೊಟ್ಟು
ಧಾವಿಸಿದ ವೀರನದೊ ಸಿಂಹನಾದಂ ಗೆಯ್ದು
ಪಾವನದಹಿಂಸೆಯಿಂ ಜಯಸಿರ್ದ ಭುಜಹೊಯ್ದು.

ಭಾರತಿಯ ವಿಜಯದಲಿ ಮೆರೆಯಿಸುತ ಸಿಂಗರಿಸಿ
ಯೋಧನುಂ ತಾನಾಗಿ ಲೋಕಮನ್ನೇ ನಗಿಸಿ
ಇದಿರಿಸುವ ಶತ್ರುಗಳನೊಲುಮೆಯಿಂದಲೆ ಗೆಲಿದು
ಒದವಿರುವ ಕಷ್ಟಗಳ ಬಗೆಹಾಯ್ದು ಮುಂದರಿದು
ನಲವತ್ತು ಕೋಟಿ ಜನನಾಯಕಂ ತಾನೊದವಿ
ತೊಳಗುತಿಹನಾ ಜವಾಹರಲಾಲನಹರುರವಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗತ್ವ ಅಸಮಾನತೆ ಮತ್ತು ಭಾರತೀಯ ಸಮಾಜ
Next post ಸತ್ಯ ಸಾಕ್ಷಾತ್ಕಾರ

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys