ಕನ್ನಡ ಎಂದರೆ ಬರಿ ನುಡಿ ಅಲ್ಲ
ಮುತ್ತಿನ ಮಣಿ ಸಾಲು
ಕನ್ನಡ ಎನ್ನಲು ನಿನ ಕೊರಳಲ್ಲಿ
ಸಂಗೀತದ ಹೊನಲು
ಕನ್ನಡ ಎನುವ ಮೂರಕ್ಷರದಿ
ಎನಿತೋ ಅರ್ಥವಿದೆ
ಕನ್ನಡತನವ ಮೈಗೂಡಿಸಿದರೆ
ಬಾಳಿಗೆ ಸತ್ವವಿದೆ
ಕವಿ ಕೋಗಿಲೆಗಳು ಹಾಡಿವೆಯೆಂದರೆ
ಕನ್ನಡದೇ ಮೊದಲು
ಹಾಡಲು ಸೊಂಪು ಕೇಳಲು ಇಂಪು
ಇಲ್ಲ ಇಲ್ಲಿ ಅಳಲು
ದೇವಿ ಶಾರದೆಯ ಭಾಷೆಗಳಲ್ಲಿ
ಕನ್ನಡವೇ ಮೊದಲು
ಹಲವು ಭಾಷೆಗೆ ಒಲವು ತೋರಿರೆ
ಕನ್ನಡಕೇ ಮಿಗಿಲು
ಕನ್ನಡ ನೆಲದಲಿ ಹುಟ್ಟಿದೆಯೆಂದರೆ
ಹಿಂದಿನ ಪುಣ್ಯಫಲ
ಕಾವೇರೀ ಜಲ ಕುಡಿದೆಯೆಂದರೆ
ಅಮೃತಕೆಲ್ಲಿ ಬಲ?
*****
Related Post
ಸಣ್ಣ ಕತೆ
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಬೆಟ್ಟಿ
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…