ನಮಸ್ತೇ!

ಹೋಗಿ ಬರುವೆನು ನನ್ನ ಎಳೆಗನಸುಗಳೆ! ನಿಮ್ಮ
ತಳಿರ್‍ಗೆಂಪು ಹೂಗಂಪು ತಂಗಾಳಿ ಮುಗಿದು
ಸಮರವನು ಸಾರಿಹುದು ಅಮರ ಶಕ್ತಿಯದೊಂದು,
ಎದೆಮನವ ತಣಿಸಿರುವ ದಿನಗಳನೆ ಹುಗಿದು!
ನಿಂತಿರುವದೆದುರಾಳಿಯಾಗಿ ನನಸಿನ ಕಹಿಯು,
ಪ್ರಾಣಗಳ ಗಂಟೆಯನು ಗಣಗಣನೆ ಬಡಿದು;
ಪಾಪಸಂಚಯವೆಲ್ಲವಾಗಿ ಕೋಪಿಸಿದಹಿಯು
ಮಲೆತು ನಿಂತಿಹುದೀಗ ಮುಗಿಲುದ್ದ ತಡೆದು:
ಸಾಕಿನ್ನು ಕನಸಿಗನ ದಿವ್ಯ ದೀವಟಿಗೆ!
ಸಾಕು ವಂದನೆಯನ್ನು ಒಲವೆಂಬ ನಟಿಗೆ!
ಹೋಗಿ ಬರುವೆನು ಕನಸೆ! ಹೋಗಿ ಬರುವೆನು ಸೊಗಸೆ!
ನನ್ನ ಮರೆಯಲಿ ನಿನ್ನ ಕಂಗಳಾ ಬೊಗಸೆ !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏರಿತು ಗಗನಕೆ ನಮ ಧ್ವಜ!
Next post ಪುಟ್ಟೂ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…