ಪುಟ್ಟೂ

ಮೈಸೂರಲ್ಲಿ ನವರಾತ್ರಿ ಬಂತು. ಶಾಲೆಗಳನ್ನೆಲ್ಲಾ ಮುಚ್ಚಿದರು. ಮುಚ್ಚುವ ದಿನಸ ಉಪಾಧ್ಯಾಯರು-ಬಂದು “ನಾಡಿದ್ದು ಶ್ರಿಮನ್ಮಹಾರಾಜರು ಒಂಭತ್ತು ಘಂಟೆ ಸರಿಯಾಗಿ ಸಿಂಹಾಸನದ ಮೇಲೆ ಕುಳಿತು ಕೊಳ್ಳುವರು. ಆ ವೇಳೆಯಲ್ಲಿ “ನಾವೆಲ್ಲರೂ ಹೋಗಿ ಆ ಮಹೋತ್ಸವವನ್ನು ನೋಡಲಿ’ ಎಂದು ಅರಮನೆಯ ಮುಂದೆ ಮರದ ಮೆಟ್ಟಲು ಹಾಕಿಸಿರುವರು. ನಾವು ಅಲ್ಲಿ ಹೋಗಿ ಕುಳಿತುಕೊಳ್ಳ ಬೇಕಾದರೆ ಎಂಟಕ್ಕೆ ಸರಿಯಾಗಿ ಹೋಗಬೇಕು. ನೀವೆಲ್ಲರೂ ಸರಿಯಾಗಿ ಇಲ್ಲಿಗೆ ಏಳೂವರೆ ಘಂಟೆಗೆ ಬಂದು ಬಿಡಿ. ಹೊತ್ತಾಗಿ ಬಂದವರಿಗೆ ನೋಟವು ತಪ್ಪಿ ಹೋಗುವುದು” ಎಂದು ಹೇಳಿದರು.

ನವರಾತ್ರಿಯ ಪಾಡ್ಯದ ದಿನ ಎಲ್ಲರೂ ಸರಿಯಾಗಿ ಏಳೂವರೆಗೆ ಬಂದರು. ಪುಟ್ಟೂಗೆ ನೋಟವನ್ನು ನೋಡಲು ಹೋಗುವೆನೆಂಬ ಸಂತೋಷ. ಕಂಡಕಂಡವರಿಗೆಲ್ಲ “ಮಹಾರಾಜರು ಸಿಂಹಾಸನದ ಮೇಲೆ ಕುಳಿತುಕೊಳ್ಳುವುದನ್ನು ನೋಡಲು ನಾವೆಲ್ಲ ಹೋಗುತ್ತೇವೆ” ಎಂದು ಹೇಳಿಕೊಂಡು ಹೊರಟನು. ಇವನು ಶಾಲೆಗೆ ಬರುವುದರೊಳಗೆ ಎಂಟುಘಂಟೆ ಆಗಿ ಹೋಯಿತು. ಎಲ್ಲಾ ಹುಡುಗರನ್ನೂ ಕರೆದುಕೊಂಡು ಉಪಾಧ್ಯಾಯರು ಹೊರಟು ಹೋಗಿದ್ದರು. ಪುಟ್ಟೂಗೆ ಬಹಳ ದುಃಖವಾಯಿತು. ಅರಮನೆಯ ಮುಂದಕ್ಕಾದರೂ ಹೋಗೋಣ ಎಂದುಕೊಂಡು ಆತುರದಿಂದ ಓಡಿಹೋದನು. ಅಲ್ಲಿಯೂ ಹೊತ್ತಾಗಿ ಹೋಗಿತ್ತು. ಉಪಾಧ್ಯಾಯರು ಎಲ್ಲರನ್ನೂ ಕರೆದುಕೊಂಡು ಹೋಗಿ ಮರದ ಮೆಟ್ಟಿಲಿನ ಮೇಲೆ ಕುಳಿತುಬಿಟ್ಟಿದ್ದರು. ಎಲ್ಲಿ ನೋಡಿದರೂ ಜನ. ಎತ್ತಲಾಗಿ ಹೋದರೂ ಪೋಲೀಸಿನವರು. ಇವನನ್ನು ಕೇಳುವವರೇ ಇಲ್ಲ. ಪುಟ್ಟೂ ಪೆಚ್ಚು ಮುಖ ಹಾಕಿಕೊಂಡು ಎಲ್ಲಿಯೋ ನಿಂತಿದ್ದು ಮನೆಗೆ ಹೋದನು.

ಆವತ್ತು ತಾನು ಪಟ್ಟ ದುಃಖವನ್ನು ಮರೆಯಲಿಲ್ಲ. ಅಂದಿನಿಂದ ಅವನು ಎಲ್ಲಿಗೆ ಹೋಗಬೇಕಾಗಿರಲಿ ಹೊತ್ತಿಗೆ ಸರಿಯಾಗಿ ಹೋಗುವನು. ಶಾಲೆಗಂತೂ ಅವನು ಯಾವತ್ತೂ ಹೊತ್ತು ಮೀರಿ ಹೋಗಲಿಲ್ಲ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...