ಪುಟ್ಟೂ

ಪುಟ್ಟೂ

ಮೈಸೂರಲ್ಲಿ ನವರಾತ್ರಿ ಬಂತು. ಶಾಲೆಗಳನ್ನೆಲ್ಲಾ ಮುಚ್ಚಿದರು. ಮುಚ್ಚುವ ದಿನಸ ಉಪಾಧ್ಯಾಯರು-ಬಂದು “ನಾಡಿದ್ದು ಶ್ರಿಮನ್ಮಹಾರಾಜರು ಒಂಭತ್ತು ಘಂಟೆ ಸರಿಯಾಗಿ ಸಿಂಹಾಸನದ ಮೇಲೆ ಕುಳಿತು ಕೊಳ್ಳುವರು. ಆ ವೇಳೆಯಲ್ಲಿ “ನಾವೆಲ್ಲರೂ ಹೋಗಿ ಆ ಮಹೋತ್ಸವವನ್ನು ನೋಡಲಿ’ ಎಂದು ಅರಮನೆಯ ಮುಂದೆ ಮರದ ಮೆಟ್ಟಲು ಹಾಕಿಸಿರುವರು. ನಾವು ಅಲ್ಲಿ ಹೋಗಿ ಕುಳಿತುಕೊಳ್ಳ ಬೇಕಾದರೆ ಎಂಟಕ್ಕೆ ಸರಿಯಾಗಿ ಹೋಗಬೇಕು. ನೀವೆಲ್ಲರೂ ಸರಿಯಾಗಿ ಇಲ್ಲಿಗೆ ಏಳೂವರೆ ಘಂಟೆಗೆ ಬಂದು ಬಿಡಿ. ಹೊತ್ತಾಗಿ ಬಂದವರಿಗೆ ನೋಟವು ತಪ್ಪಿ ಹೋಗುವುದು” ಎಂದು ಹೇಳಿದರು.

ನವರಾತ್ರಿಯ ಪಾಡ್ಯದ ದಿನ ಎಲ್ಲರೂ ಸರಿಯಾಗಿ ಏಳೂವರೆಗೆ ಬಂದರು. ಪುಟ್ಟೂಗೆ ನೋಟವನ್ನು ನೋಡಲು ಹೋಗುವೆನೆಂಬ ಸಂತೋಷ. ಕಂಡಕಂಡವರಿಗೆಲ್ಲ “ಮಹಾರಾಜರು ಸಿಂಹಾಸನದ ಮೇಲೆ ಕುಳಿತುಕೊಳ್ಳುವುದನ್ನು ನೋಡಲು ನಾವೆಲ್ಲ ಹೋಗುತ್ತೇವೆ” ಎಂದು ಹೇಳಿಕೊಂಡು ಹೊರಟನು. ಇವನು ಶಾಲೆಗೆ ಬರುವುದರೊಳಗೆ ಎಂಟುಘಂಟೆ ಆಗಿ ಹೋಯಿತು. ಎಲ್ಲಾ ಹುಡುಗರನ್ನೂ ಕರೆದುಕೊಂಡು ಉಪಾಧ್ಯಾಯರು ಹೊರಟು ಹೋಗಿದ್ದರು. ಪುಟ್ಟೂಗೆ ಬಹಳ ದುಃಖವಾಯಿತು. ಅರಮನೆಯ ಮುಂದಕ್ಕಾದರೂ ಹೋಗೋಣ ಎಂದುಕೊಂಡು ಆತುರದಿಂದ ಓಡಿಹೋದನು. ಅಲ್ಲಿಯೂ ಹೊತ್ತಾಗಿ ಹೋಗಿತ್ತು. ಉಪಾಧ್ಯಾಯರು ಎಲ್ಲರನ್ನೂ ಕರೆದುಕೊಂಡು ಹೋಗಿ ಮರದ ಮೆಟ್ಟಿಲಿನ ಮೇಲೆ ಕುಳಿತುಬಿಟ್ಟಿದ್ದರು. ಎಲ್ಲಿ ನೋಡಿದರೂ ಜನ. ಎತ್ತಲಾಗಿ ಹೋದರೂ ಪೋಲೀಸಿನವರು. ಇವನನ್ನು ಕೇಳುವವರೇ ಇಲ್ಲ. ಪುಟ್ಟೂ ಪೆಚ್ಚು ಮುಖ ಹಾಕಿಕೊಂಡು ಎಲ್ಲಿಯೋ ನಿಂತಿದ್ದು ಮನೆಗೆ ಹೋದನು.

ಆವತ್ತು ತಾನು ಪಟ್ಟ ದುಃಖವನ್ನು ಮರೆಯಲಿಲ್ಲ. ಅಂದಿನಿಂದ ಅವನು ಎಲ್ಲಿಗೆ ಹೋಗಬೇಕಾಗಿರಲಿ ಹೊತ್ತಿಗೆ ಸರಿಯಾಗಿ ಹೋಗುವನು. ಶಾಲೆಗಂತೂ ಅವನು ಯಾವತ್ತೂ ಹೊತ್ತು ಮೀರಿ ಹೋಗಲಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮಸ್ತೇ!
Next post ಇಷ್ಟು ಕೊರತೆಗಳಿದ್ದೂ ನನ್ನೆದೆಯನ್ನಾಳುವ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…