Home / ಕವನ / ಕವಿತೆ / ಜೀವನ ಕಾವ್ಯ

ಜೀವನ ಕಾವ್ಯ

ಮನುಷ್ಯರು ಏನನ್ನೋ ಕಂಡು
ಹಿಡಿಯುತ್ತಾರೆ.  ಅದಕ್ಕಾಗಿ ಪ್ರಕೃತಿಯನ್ನು
ಉಪಯೋಗಿಸುತ್ತಾರೆ.  ಈ ಎಲ್ಲಾ ಪ್ರಯತ್ನಗಳು
ಮಾನವ ಕಲ್ಯಾಣಕ್ಕಾಗಿ ಎಂದೇ ಭಾವಿಸುತ್ತಾರೆ.
ಇದರ ಪರಿಣಾಮವಾಗಿ ಇಂದು ಪೃಥ್ವಿ
ಮಾಲಿನ್ಯಗೊಂಡಿದೆ.  ಮಾನವನ ಅಭಿವೃದ್ಧಿ
ವಿಚಾರಗಳು ಗೊಂದಲಮಯವಾಗಿದೆ.
ಅಧ್ವಾನದ ಆಧುನಿಕ ದಿನಗಳಿಗೆ
ಆಹ್ವಾನವಿತ್ತಾಗಿದೆ.

ಈ ತೋಟದಲ್ಲಿ ನಾವು ಶ್ರಮ ರಹಿತ
ಕೃಷಿ ಮಾಡುತ್ತಿದ್ದೇವೆ ಪರಿಪೂರ್ಣವಾದ,
ಸ್ವಾದಯುಕ್ತ ಧಾನ್ಯಗಳನ್ನು ಮತ್ತು ಹಣ್ಣುಗಳನ್ನು
ತಿನ್ನುತ್ತೇವೆ.  ಇದರಿಂದ ನಮ್ಮೆಲ್ಲ ಚಟುವಟಿಕೆಗಳ
ಹಿಂದಿರುವ ಜಗತ್ತಿನ ಹೃದಯಕ್ಕೆ ನಾವು
ಹತ್ತಿರವಾಗುತ್ತೇವೆ.  ಬದುಕು
ಅರ್ಥಪೂರ್ಣವಾಗುವುದು.  ಆತ್ಮತೃಪ್ತಿ
ದೊರೆಯುವದು.  ಜೀವನ ಒಂದು ಕಾವ್ಯ.

*****
(ಮೂಲ- ಮಸನೊಬು ಫುಕವೊಕ)

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...