Home / ಕವನ / ಕವಿತೆ / ನೂಲು ಸುತ್ತುವ ಹಾಡು

ನೂಲು ಸುತ್ತುವ ಹಾಡು

ಸಣ್ಣ ಖಂಡಿಽಕ್ಹಿಡಿದು ಕನ್ನಿ ತಾ ಬರತಾಳಽಽ|
ಚೆನ್ನಮಲ್ಲೈನ ನೆನಽವೂತ ||
ಚೆನ್ನಮಲ್ಲೈನ ನೆನವೂತೀ ಕಳಸಕಽಽ|
ಛೆಂದಾಗಿ ನೂಲಾ ತೊಡಽಽಸವ್ವಾ ||೧||

ಹಸರ ಖಂಡಿಽಕ್ಹಿಡಿದು ಕುಸುಮಲ್ಲಿ ತಾ ಬರತಾಳಽಽ|
ಬಸವೇಸುರನಿಂಗನ ನೆನವೂತ||
ಬಸವೇಸುರನಿಂಗನ ನೆನವೂತೀ ಕಳೆಸಾಕಽಽ|
ಹಸನಾಗಿ ನೂಲಾ ತೊಡಽಽಸವ್ವಾ ||೨||

ಆ ನಾಡದ ಬಡಗ್ಯಾ ಮಾಡಽಬಲ್ಲದ ಮಣಿಯಽಽ|
ಮಾಡುತ ಮಾಣಿಽಕ ಜಡಽದಾರ ||
ಮಾಡುತ ಮಾಣಿಽಕ ಜಡಿಸಿ ತಂದಾ ಮಣಿಯಽಽ|
ಯಾವಲ್ಲಿ ಇಡವೂನ ಹಡದವ್ವಾ ||೩||

ಆ ನಾಡದ ಬಡಗ್ಯಾ ಮಾಡಽಬಲ್ಲದ ಮಣಿಯಽಽ|
ಕೆತ್ತೂತ ಮುತ್ತಾ ಜಡಽದಾರ||
ಕೆತ್ತೂತ ಮುತ್ತಾ ಜಡೆಸಿ ತಂದಾ ಮಣಿಯಽಽ|
ಯಾವಲ್ಲಿ ಇಡವೂನ ಹಡೆದವ್ವಾ ||೪||

ಅಲ್ಲಂಬ್ಹರಿವ್ಯಾಗ ಗಿಲ್ಲಂಬು ಮಗಿನ್ಹಾಕಿ|
ನಿಲ್ಲದಲೆ ನೀರ ಬೆರಽಸ್ಯಾರ ||
ನಿಲ್ಲದಲೆ ನೀರ ಬೆರಸ್ಯಾರ ತಂಗೆವನಽಽ|
ಫಿಲ್ಲ್ಯಾದ ಕಾಲ ಕೆಸರಾಗೆ ||೫||
*****

ಲಗ್ನದಲ್ಲಿ ವಿಧಿಪೂರ್ವಕವಾಗಿ ಸ್ನಾನಮಾಡಿಸುವ ಪ್ರಸಂಗಗಳು ಎರಡು ಸಾರೆ ಬರುತ್ತವೆ. ಒಮ್ಮೆ ಅರಿಸಿಣ ಹಚ್ಚುವಾಗ; ಇನ್ನೊಮ್ಮೆ ಅಕ್ಷತೆಯ ಕಾಲಕ್ಕೆ. ಆಗ ನಾಲ್ಕು ಮೂಲೆಗೆ ನಾಲ್ಕು ತಂಬಿಗೆಗಳನ್ನಿಟ್ಟು, ಅವುಗಳ ಸುತ್ತು ಮುತ್ತು ಮೇರೆಯಂತೆ ನೂಲು ಸುತ್ತಿ, ನಟ್ಟ ನಡುವೆ ಮಣೆಗಳನ್ನಿಟ್ಟು ಮದುಮಕ್ಕಳಿಗೆ ಎರೆಯುತ್ತಾರೆ. ಆಗಿನ ಕಾಲಕ್ಕೆ ನೂಲು ಸುತ್ತುವ ಹಾಡಿದು.

ಛಂದಸ್ಸು:— ತ್ರಿಪದಿ.

ಶಬ್ದ ಪ್ರಯೋಗಗಳು:- ಖಂಡಿಕಿ=ನೂಲಿನ ಕುಕ್ಕುಡಿ, ಹಸನ=ಸ್ವಚ್ಛ. ಅಲ್ಲ್‌ ಮತ್ತು ಗಿಲ್ಣ್=ನೀರಿನ ಸಪ್ಪಳ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...