Home / ಕವನ / ಕವಿತೆ / ಕನ್ನಡ್ ಪದಗೊಳು

ಕನ್ನಡ್ ಪದಗೊಳು

ಯೆಂಡ ಯೆಡ್ತಿ ಕನ್ನಡ್ ಪದಗೊಳ್
ಅಂದ್ರೆ ರತ್ನಂಗ್ ಪ್ರಾಣ!
ಬುಂಡೇನ್ ಎತ್ತಿ ಕುಡದ್ಬುಟ್ಟಾಂದ್ರೆ-
ತಕ್ಕೊ! ಪದಗೊಳ್ ಬಾಣ! ೧

ಬಗವಂತ್ ಏನ ಬೂಮೀಗ್ ಇಳದು
ನನ್ ತಾಕ್ ಬಂದಾಂತ್ ಅನ್ನು;
ಪರ್ ಗಿರೀಕ್ಸೆ ಮಾಡ್ತಾನ್ ಔನು-
ಬಕ್ತನ್ ಮೇಲ್ ಔನ್ ಕಣ್ಣು! ೨

‘ಯೆಂಡ ಕುಡಿಯಾದ್ ಬುಟ್ ಬುಡ್ ರತ್ನ!’
ಅಂತ್ ಔನ್ ಏನಾರ್ ಅಂದ್ರೆ-
ಮೂಗ್ ಮೂರ್ ಚೂರಾಗ್ ಮುರಸ್ಕೋಂತೀನಿ
ದೇವರ್ ಮಾತ್ಗ್ ಅಡ್ಬಂದ್ರೆ! ೩

‘ಯೆಂಡ ಬುಟ್ಟೆ. ಯೆಡ್ತೀನ್ ಬುಟ್ ಬುಡ್!’
ಅಂತ್ ಔನ್ ಏನಾರ್ ಅಂದ್ರೆ-
ಕಳದೋಯ್ತ್ ಅಂತ ಕುಣದಾಡ್ತೀನಿ
ದೊಡ್ದ್ ಒಂದ್ ಕಾಟ! ತೊಂದ್ರೆ! ೪

‘ಕನ್ನಡ್ ಪದಗೋಳ್ ಆಡೋದ್ನೆಲ್ಲ
ನಿಲ್ಲಿಸ್ ಬುಡಬೇಕ್ ರತ್ನ!’
ಅಂತ್ ಔನ್ ಅಂದ್ರೆ- ದೇವ್ರ್, ಅದ್ರ್ ಏನು!
ಮಾಡ್ತಿನ್ ಔನ್ಗೆ ಖತ್ನ! ೫

ಆಗ್ನೆ ಮಾಡೋ ಐಗೋಳ್ ಎಲ್ಲಾ
ದೇವ್ರ ಆಗ್ಲಿ-ಎಲ್ಲ!
ಕನ್ನಡ್ ಸುದ್ದಿಗ್ ಏನ್ರ ಬಂದ್ರೆ
ಮಾನಾ ಉಳಸಾಕಿಲ್ಲ! ೬

ನರಕಕ್ಕೇ ಇಳ್ಸಿ ನಾಲ್ಗೆ ಸೀಳ್ಸಿ
ಬಾಯ್ ಒಲಿಸಾಕಿದ್ರೂನೆ-
ಮೂಗ್ನಲ್ ಕನ್ನಡ್ ಪದವಾಡ್ತೀನಿ!
ನನ್ ಮನಸನ್ನ್ ನೀ ಕಾಣೆ! ೭

ಯೆಂಡ ವೋಗ್ಲಿ! ಯೆಡ್ತಿ ವೋಗ್ಲಿ!
ಎಲ್ಲಾ ಕೊಚ್ಕೊಂಡ್ ವೋಗ್ಲಿ!
ಪರ್‍ಪಂಚ್ ಇರೋ ತನಕ ಮುಂದೆ
ಕನ್ನಡ್ ಪದಗೊಳ್ ನುಗ್ಲಿ! ೮
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...