ಯೆಂಡ

ಯಂಗೀಸ್ಗ್ ಎಂಗೆ ಅರಸ್ನ ಕುಂಕ್ಮ-
ಗಂಡೀಗ್ಗ್ ಅಂಗೆ ಯೆಂಡ.
ವುಟ್ಟದ್ ಮನ್ಸ ರುಂಡಾಂತ್ ಅಂದ್ರೆ
ಯೆಂಡದ್ ಬುಂಡೆ ಮುಂಡ. ೧

ಬೂಮೀ ಜನಗೊಳ್ ಯೆಂಡದ್ ಮರಕೆ
ಊವು ಕಾಯ್ ಇದ್ದಂಗೆ.
ಯೆಂಡದ್ ಮರಕೇ ಬತ್ತಿ ಕೊಟ್ರೆ
ಮನ್ಸ ಬದಕೊದ್ ಎಂಗೆ? ೨

ಮನ್ಸಾಂತ್ ಅನ್ನೋ ಮೀನ್ ಬದಕೊದ್ಕೆ
ಯೆಂಡದ್ ನೀರೇ ಮುಕ್ಯ!
ಅನಬೋವಸ್ತನ್ ಮಾತ್ ಸುಳ್ಳಾಗ್ದು-
ಸತ್ಯ ರತ್ನನ್ ವಾಕ್ಯ! ೩

ಮನ್ಸನ್ ಜನ್ಮ ಬಂದಿದ್ರೂನೆ
ಯೀರ್‍ದೆ ವೋದ್ರೆ ಯೆಂಡ-
ಅಂತಾ ಮನ್ಸ ಬೂಮೀಗ್ ಬಾರ!
ಬದಕಿರೋದು ದಂಡ! ೪
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಳಯ ಸೃಷ್ಟಿ
Next post ತೊಣ್ಣೂರಿನ ಸೊಬಗು

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…