ರತ್ನನ್ ಯೋಚ್ನೆ

ಬಯಸಿದ್ ಸಾಮಾನ್ ಬೇಕಾದಂಗೆ
ಇರಲಿ ಇಲ್ದೇನ್ ಇರಲಿ-
ತಾಪತ್ರೇಯನಕ್ ತಪ್ಪಿದ್ದಲ್ಲ!
ಸುಳ್ಳಂತ್ ಅನ್ನೌನ್ ಬರಲಿ! ೧

ಬುಂಡೇಲ್ ಒಂದ್ ತೊಟ್ ಇರೊಗಂಟ್ಲೂನೆ
ನಿದ್ದೆ ಗಿದ್ದೆ ಬರದು!
ಬುಂಡೇ ಕಾಲಿ ಆಗೋದ್ರನಕ
ನಿದ್ದೆ ಬರಲೇ ಬರದು! ೨

ಈ ತಾಪತ್ರೇನ್ ತಳ್ಳಾಕಾಕೆ
ಏನ್ ಮಾಡ್ಬೇಕೊ ಕಾಣೆ!
ಯೋಚಿಸ್ದಸ್ಟು ತಗಲ್ಕೋಂತೈತ್ ಆ
ಯೋಚ್ನೇಗ್ ಒಂದ್ ಒಸ್ ಸಾಣೆ! ೩

ಬಯಸಿದ್ ಸಾಮಾನ್ ಬೇಕಾದಂಗೆ
ಇರಲಿ ಇಲ್ದೇನ್ ಇರಲಿ-
ತಾಪತ್ರೆಯನಕ್ ತಪ್ಪಿದ್ದಲ್ಲ!
ಸುಳ್ಳಂತ್ ಅನ್ನೌನ್ ಬರಲಿ! ೪
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರುಳು
Next post ಎಚ್.ವಿ. ಸಾವಿತ್ರಮ್ಮ ಅವರ ಕತೆಗಳು

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…