Home / ಕವನ / ಕವಿತೆ / ತುರ್‍ಕಿಯ ಪರವಾಗಿ ದೇವರೊಡನೆ ಪ್ರಾರ್ಥನೆ

ತುರ್‍ಕಿಯ ಪರವಾಗಿ ದೇವರೊಡನೆ ಪ್ರಾರ್ಥನೆ

ಭೂಪಾಳಿ-ಝಂಪೆ

ನೋಡು ನೋಡೆಲೊ ದೇವ!
ಗತಿವಿಹೀನರ ಕಾವ,
ನೋಡು ನಿನ್ನಯ ರಾಜ್ಯದೊಳರಾಜಕತೆಯ!
ನೋಡು ಪಡುವಣ ದಿಕ್ಕ,
ನೋಡು ಇತಲಿಯ ಸೊಕ್ಕ,
ನೋಡು ದೀನ ತುರುಷ್ಕ ತ್ರಿಪಲಿಯರ ಕತೆಯ! ||೧||

ಬಡ ತ್ರಿಪಲಿಯನ್ನಿತಲಿ
ಪಿಡಿದಿರುವುದೆನ್ನುತಲಿ
ಮೊರೆಯಿಡುವ ಕ್ರಂದನಕೆ ಕಿವಿಯ ಮುಚ್ಚಿಹೆಯಾ?
ತೋಳಿನಬ್ಬರವನ್ನು
ಜಗಕೆ ತೋರುವೆನೆನ್ನು
ತಿತಲಿ ಬೊಬ್ಬಿರಿವುದನು ತಾತ ಮೆಚ್ಚುವೆಯಾ? || ೨ ||

ನೆಲವ ನುಂಗುವ ಹಸಿವೆ
ತಡೆಯದರಚುತ ಕಸಿವೆ
ನೆನುತಿತಲಿ ತುಡುಕಿಹುದು ತ್ರಿಪಲಿಯನು ದೊರೆಯೆ!
ಹೆಬ್ಬುಲಿಯ ಕಂಗೆದುರು
ಸಿಕ್ಕಿದೆಳೆವುಲ್ಲೆಗರು
ವಂದದಿಂ ತಲ್ಲಣಿಪ ತ್ರಿಪಲಿಯನು ಪೊರೆಯೈ! || ೩ ||

ಮೊನ್ನೆವರಮೀ ಇತಲಿ
ಪರವಶತೆಯಿಂದಲಿಲಿ
ಯಂತೆ ಕಂಬನಿಯಗುಳ ನೆಕ್ಕಿದುದ ಮರೆಯೆ,
ಇಂದು ಗರ್‍ಜಿಸುತಿಹುದೆ?
ಕಷ್ಟವಿನ್ನೊಂದಿಹುದೆ?
ಮಾನವರೊ? ದಾನವರೊ? ನಾನವರನರಿಯೆ! || ೪ ||

ಯಾವ ಇತಲಿಯ ವೀರ
ಮಾಝೀನಿ (Mazzini) ರಣಧೀರ
ಪರತಂತ್ರದಿಂದಲುದ್ಧರಿಸಿದನಿತಲಿಯಂ,
ಸಕಲರಿಗೆ ಸ್ವಾತಂತ್ರ್ಯ
ವೆಂದವನ ಗುರುಮಂತ್ರ
ವಿದನಿತಲಿ ಮರೆತಿಹುದೆ ಸೊಕ್ಕಡಂ ತಲೆಯಂ! || ೫ ||

ಪೂರ್‍ವದಿ ವಿಲಾಯಿತಿಯ
ಹೃದಯವಾವಳ ಗತಿಯ
ಭಾರದಿಂ ಜಗ್ಗಿದುದೊ ಆ ತುರುಕರವನೀ
ಅಬಲೆಯಾಗಿಹಳೀಗ,
ಇತಲಿಯವಳನು ಬೇಗ
ಸುಲಿಯುತಿದೆ- ಕದಕದಿಸು ತುರುಕರೆದೆ ಧಮನಿ! || ೬ ||

ಆಧುನಿಕ ರಾಜ್ಯಕಲೆ
ಯನ್ನರಿಯದವರ ಸಲೆ
ಬೆಂಬಲಿಸಿ ನೀನಿಂದು ನಡೆಸವರ ಪಡೆಯಾ!
ಅನುಕರಿಸಗತಿಕರನು,
ತೊರೆಯದಿರಪಥಿಕರನು,
ಸುಕ್ಕಿಸದಿರರ್‍ಧ ಚಂದ್ರ ಧ್ವಜವನೊಡೆಯಾ! || ೭ ||

ನವನಾಗರಿಕಳಲ್ಲ
ದೀ ತುರುಕಿಯಿರಸಲ್ಲ
ದೆಂದವಳ ರುಜೆಗೆ ನಾಗರವಿಷಮನೀಯೆ,
ಯಮವೈದ್ಯ ರೂಪಿಂದ
ನಟಸುವಿತಲಿಯ ಚಂದ-
ತ್ರಿಪಲಿಯನ್ನಪಹರಿಸಲಿದುವಲ್ತೆ ಮಾಯೆ? || ೮ ||

ಮುಸಲಮಾನರ ಧರ್‍ಮ
ಪಾಳೆಸಗುವೊಳ ಮರ್‍ಮ
ದಿಂದಿತಲಿ ಬಂದಿಹುದೆ ಕೊಳುಗುಳಕೆ ಮುಂದು?
ಪೈಗಂಬರನು (ಮಹಮ್ಮದ್) ನೀನೆ,
ಮರಿಯಾತ್ಮಜನು (ಯೇಸು) ನೀನೆ
ಎಂಬ ಸತ್ಯವನೀ ಜಗತ್ತರಿವುದೆಂದು? || ೯ ||

ಶತ್ರುವನು ಕೂರೆಂದು
ಯೇಸು ರೂಪದೊಳಂದು
ನೀನೊರೆದುದಕನರ್‍ಥವಾದಪುದೆ ಇಂದು?
ಅನಘರನು ಕಡಿಯೆಂದು,
ಗೆಳೆಯರನು ಬಡಿಯೆಂದು
ನಿನ್ನ ವಾಕ್ಯಕೆ, ಹರಿಯೆ, ತಟ್ಟುವುದೆ ಕುಂದು? || ೧೦ ||

ಧರ್‍ಮಕೆಡೆ ಬರಿದಾಯ್ತೆ?
ನೀತಿ ತೇಲುವುದಾಯ್ತೆ?
ನಿನ್ನ ತಿರೆಯೊಳಧರ್‍ಮಕಾದಪುದೆ ಗೆಲುಹು?
ಧರ್‍ಮವುಳ್ಳೆಡೆ ನೀನು
ಎಂಬರದು ಸಟೆಯೇನು?
ಧರ್‍ಮವನು ಕಾದು ಬಲಹೀನರನು ಸಲಹು! || ೧೧ ||

ಈ ಸಮರವನು ಮುಗಿಸು,
ಸೊಕ್ಕಿದವರನು ತಗಿಸು,
ಸ್ನೇಹಮಳೆಗರೆದು ಶಾಂತಿಯ ಬೆಳೆಯಿಸಿನಿಯಾ!
ನಿರಪರಾಧಿಯ ರಕ್ತ
ದಿಂದ ನೆಲ ಜಲ ಸಿಕ್ತ
ವಾಗದೊಲು ಕಾಪಾಡು ದೇವಕೀತನಯಾ! || ೧೨ ||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...