ಕವಿತಾವತಾರ

‘ಎಲವೊ ದುರುಳ ನಿಷಾದ, ಕೊಂಚೆಯೆಣೆಯಿಂದಂ
ಕಾಮಮೋಹಿತನಿನೆಯನನ್ನೆಸೆದೆ ಎಂದು,
ನೀಂ ಪ್ರತಿಷ್ಠೆಯನೊಂದದಿರು ಧರೆಯೊಳೆಂದುಂ!೧
ಕನಿಕರಂ ಕನಲಲಿಂತಾದಿಕವಿ ಎಂದಂ.   ೪
ಗದ್ಗದಿಸಿತೊಡನೆ ವಾಣಿಯ ವೀಣೆ, ಮುಂತೇ
ಲಿತು ಬಾಷ್ಪಗಾನ! ವಲಮದರ ಮಧುರಿಮೆಯಿಂ
ನಿಮ್ಮುಸಿರ ಸೌಸವಂ! ರಜನಿಯಿಮೆಯಿಮೆಯಿಂ೨
ಮಧುದಿನಾಂಶದ ಶಾಂತಿ ಕನವರಿಯುವಂತೆ೩   ೮
ನಿಮ್ಮ ನಾನಾ ನಿನಾದದ ವಿಪಂಚಿಗಳ
ನಂತ ತಂತಿಯೊಳೊಂದು ತಂತಿಗುಲಿಯೊಂದೇ!
ಆದೊಡಂ, ಕವಿಗಳಿರ, ಎಲ್ಲ ತಂತಿಗಳ
ಸಂಗಡಿಸಿ ನುಡಿಸೆ ಕರುಣಾಧ್ವನಿಯನೊಂದೇ   ೧೨
ಸೂಸುವುದು ಮೇಳವಂ! ಸುಯ್ಯೊಂದು, ನರುಕಂ
ಬನಿಯೊಂದು, ಬಿಕ್ಕೊಂದು-ಕವಿತೆ ಗಡ ಮರುಕಂ!
*****
೧ ‘ಮಾ ನಿಷಾದ ಪ್ರತಿಷ್ಠಾಂ ತ್ವ ಮಗಮ ಶಾಶ್ವತೀ ಸಮಾ |
ಯತ್ಕ್ರೌಂಚಮಿಥುನಾದೇಕಮವಧೀ  ಕಾಮಮೋಹಿತಮ್||’ (ವಾಲ್ಮೀಕಿ ರಾಮಾಯಣ)
೨ ರಾತ್ರಿಯ ಎವೆ ಎಂದರೆ ನಕ್ಷತ್ರ
೩ ಕನಸಿನಿಂದ ಎಚ್ಚರವಾಗು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಕು ತಾಯಿ, ಹಾಲು
Next post ಜೀವನದಲ್ಲಿ ಯಾವುದು ಶ್ರೇಷ್ಠ?

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…