Home / ಕವನ / ಕವಿತೆ / ಉಷಃಕಾಲದಲ್ಲಿ

ಉಷಃಕಾಲದಲ್ಲಿ

ಉಷೆಯ ಕಾಲ ಸೋಂಕಿನಿಂದ
ಬಾನು ತಳಿತಿದೆ;
ನಿಶೆಯ ಮಡಿಲನುಳಿದು ಜಗವು
ಜೀವಗೊಳುತಿದೆ;
ಕತ್ತಲಂಜುತೋಡುತಿಹುದು,
ಬೆಳಕು ತಿರೆಯ ತುಂಬುತಿಹುದು;
ನಾಡು ಮೇಡು ಕಾಡೊಳೆಲ್ಲು
ಸೊಗವು ಮೂಡಿ ಬರುತಿದೆ.

ತರುಗಳಿನಗೆ ಮಂಜುಹನಿಗ-
ಳರ್‍ಘ್ಯ ಹಿಡಿದಿವೆ;
ಅಲರ ಸುರಿದು ಸ್ವಾಗತವನು
ಬಾಗಿ ಬಯಸಿವೆ;
ಪಿಕದ ತೂರ್‍ಯ ಮೊಳಗುತಿಹುದು,
ಪದ್ಮಗಂಧ ಪಸರಿಸಿಹುದು,
ಖಗಗಳುಲಿವ ವಿವಿಧ ಸ್ವನದ
ಮೇಳ ತೋಪ ತುಂಬಿದೆ.

ಗರಿಯ ತಿದ್ದೆ ಬೆಡಗಿ ಶುಕಿಯು
ಕೊರಲ ಕೊಂಕಿದೆ;
ಇನಿಯಳೊಡನೆ ಪಾರಿವಾಳ
ಬೇಟ ಹೂಡಿದೆ ;
ಮೀಂಗಳೆದ್ದು ನೆಗೆಯುತಿಹುವು,
ತೆರೆಗಳೆದ್ದು ಕುಣಿಯುತಿಹುವು,
ವಿಶ್ವಶಿವದ ಪಥದೊಳಡಿಯ-
ನಿಟ್ಟು ಸೃಷ್ಟಿ ನಗುತಿದೆ.

ಮನುಜ?- ಮನುಜನೇನುಗೈವ-
ನಿಂಥ ಸಮಯದಿ?
ಜಗವು ಜೀವಗೊಳುತಲಿಂತು
ನಲಿವ ಉದಯದಿ?
ಬೆಳಕು ಬಾಳ ಬಿಚ್ಚುತಿರಲು,
ಜೀವ ಕರ್‍ಮಕೇಳುತಿರಲು,
ಆತ್ಮವಂತ, ಕರಣಪಟುವು-
ಏನ ಗೈವನುದಯದಿ?

ಹಕ್ಕಿ ಹೂಗಳಂತೆ ತಾನೂ
ಎದ್ದು ನಲಿವನೊ?
ಮಿಕ್ಕ ಸೃಷ್ಟಿಯಂತೆ ತಾನೂ
ನಲವಿಗೇಳ್ವನೊ?
ವಿಶ್ವಶಿವದ ಮರ್‍ಮವರಿತು,
ಆತ್ಮಕರ್‍ಮ ಧರ್‍ಮವರಿತು,
ಬಾಳ ಬಟ್ಟೆ ಕಂಡು, ದೃಢದಿ
ಹಾದಿ ನಡೆಯಲೇಳ್ವನೊ ?

ಇರುಳಿನತಿಗೆ ಬಳಲಿ ಬೆಳಗ
ಮಲಗಿ ಕಳೆವನೊ?
ಮಾಗದಳಲಿಗೆದ್ದು ಕಣ್ಣ-
ನೀರ ಮಿಡಿವನೊ ?
ಶಿವವ ಜರೆವ ಸ್ವಾರ್‍ಥಗಳನು
ಪಾಪಕೊಯ್ವ, ಮೋದಗಳನು
ಅರಸಿ, ಕರ್‍ಮತುಮುಲದೊಳಗೆ
ಸಿಲುಕಿ, ಅಂಜಿ, ಸುಯ್ವನೊ?

ದೀನ ಮನುಜನೇನು ಬಲ್ಲ
ಕರ್‍ಮ ಧರ್‍ಮವ?
ಕರಣದಾಳು ಬಲ್ಲನೇನು
ಶಿವದ ಮರ್‍ಮವ?
ಸೊಗದ ಹೊನ್ನಿನುದಯದಲ್ಲಿ
ಸೃಷ್ಟಿ ನಲಿವ ವೇಳೆಯಲ್ಲಿ
ಮನುಜಗೊಬ್ಬಗಲ್ತೆ ಶರಣು-
ಹೊಂದಿ ನುತಿಪ ಕಜ್ಜವು!

ವಿಶ್ವದೊಡೆಯ ದುರಿತಗಳನು
ದೂರ ಮಾಡಿಸೈ.
ಆವುದೆಮ್ಮ ಶಿವವೊ, ತಂದೆ,
ಅದನು ಕರುಣಿಸೈ.
ಜ್ಞಾನದೀಪ ಹೊತ್ತಿಸೈ,
ಬಾಳ ಬಟ್ಟೆ ಕಾಣಿಸ್ಯೆ,
ಆತ್ಮಶಿವಕೆ – ನಿನ್ನ ಇಚ್ಛೆ-
ಗೆನ್ನ ಬಾಳ ಹೊಂದಿಸೈ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...