ತ್ಯಾಗವೆ ಒಲುಮೆ

ಮೇಜಿನ ಮೇಲೊಂದು ರೋಜದ ಹೂವು,
ಹಿಂದೆಂದು ಕಾಣದ ಸೊಗಸಿನ ಹೂವು,
ಅಂದೆ ಅರಳಿದ ಹೂವು,
ಸಂಜೆಗೆಂಪಿನ ಹೂವು,
ಕಂಗಳು ತಂಗುವ ಸೊಗಸಿನ ರೇವು.

ಬಾಲಸೂರ್‍ಯನ ಕಿರಣ ರಂಧ್ರದಿ ತೂರಿ,
ಮಲರನ್ನು ಮುತ್ತಿಡಲು ಹೊಸ ಚೆಲುವ ತೋರಿ,
ಜೀವಗೂಡಿರುವಂತೆ
ಒಲವೆರೆದು ನಗುವಂತೆ
ಕಳಕಳಿಸಿ ಮೆರೆದುದು ಸೋಜಿಗವ ಬೀರಿ.

ಕಣ್ಮುಚ್ಚಿ ಮೆಲ್ಲನೆ ಹೂವ ತುಟಿಗೆತ್ತಿ
“ನನ್ನೊಲವೆ” ಎನ್ನುತ್ತ ಮುತ್ತಿಟ್ಟಿನೊತ್ತಿ;
ಅದರ ಸೊಂಪಿನ ಕಂಪು,
ಸ್ಪರ್‍ಶದ ಸುಖ, ತಂಪು,
ಮುದದ ಮೋರೆಯ ತೋರೆ ಸ್ವರ್‍ಗಕೆ ಎತ್ತಿ,

ಬಾನಿನ ನೆತ್ತಿಯನೇರಿತು ಹೊತ್ತು;
ಚೆಂದದ ಹೂವನ್ನು ತುಟಿಮೇಲೆ ಇತ್ತು.
ರೋಜದ ರೂಪು,
ಪ್ರಾಯದ ಹುರುಪು,
ಆಸೆಯಾವೇಶಕ್ಕೆ ಕಂದಿಹೋಗಿತ್ತು,

ತುಟಿಯಿಂದ ತೆಗೆದೆನು ಸೊರಗಿದ ಹೂವ,
ದುಂಡನೆ ದಳವೆಲ್ಲ ಸುರುಟಿಕೊಂಡಿರುವ,
ಪ್ರೇಮಕೆ ಬಿಂಕವ-
ನೀಯಲು ಸುಂಕವ,
ಹೆಚ್ಚಿದ ಕಂಪಿಗೆ ಸೋತುದು ಜೀವ.

“ಒಲುಮೆಯ ಸಲುವಾಗಿ ಎಲ್ಲವ ತೆತ್ತೆ,
ಚೆಂದವ, ಪ್ರಾಯವ, ಜೀವವ ತೆತ್ತೆ;
ಒಲಿಯಲು ತೆತ್ತೆ,
ಒಲಿದುದಕೇ ತೆತ್ತೆ;
ಸಾಯುವೆ; ತುಸಹೊತ್ತು ಮುತ್ತಿಡು ಮತ್ತೆ.”

ಎನ್ನಲು ಹೂವಿನ ದಳಗಳು ಅಲುಗಿ,
ಎನ್ನಯ ಕ್ರೂರತೆಗೆ ದೈನ್ಯದಿ ಕೊರಗಿ,
ನುಡಿಯೆನ್ನ ಚುಚ್ಚಿತು,
ಹೃದಯವ ಕೊಚ್ಚಿತು,
ತುಟಿಗೆತ್ತಿ ಮುತ್ತಿಟ್ಟೆ ರೋಜವ ತಿರುಗಿ.

ಹೂವಂದು ಸತ್ತಿತು ಮುತ್ತನು ಕೊಟ್ಟು,
ಮುತ್ತಿನ ನೆನಪಿಗೆ ಕಂಪನು ಬಿಟ್ಟು;
“ತ್ಯಾಗವೆ ಒಲುಮೆ
ಬಾಳ್ವೆಯ ಕುಲುಮೆ”
ಎನ್ನುವ ನುಡಿಯನ್ನು ಎದೆಯೊಳಗೆ ನೆಟ್ಟು,
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೂಲು ಸುತ್ತುವ ಹಾಡು
Next post ಲಿಂಗತ್ವ ಅಸಮಾನತೆ ಮತ್ತು ಭಾರತೀಯ ಸಮಾಜ

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys