Home / ಲೇಖನ / ಇತರೆ / ಮತಸಂಪಾದನೆಗೆ ರಾಮಬಾಣ ಉಪಾಯ

ಮತಸಂಪಾದನೆಗೆ ರಾಮಬಾಣ ಉಪಾಯ

ಬರ್‍ರಿ, ಬರ್‍ರಿ ಗೋಪಾಳರಾವ ನಮ್ಮನ್ನಗ್ದಿ ಮರೇತ್ರಂತ ತಿಳಕೂಂಡಿದ್ದಿವಿ. ಬರ್ರಿ ಇಲ್ಲೆ ಕೂಡಬರ್ರಿ. ಅಕಡೆ ಕೂಡಬಾಡ್ರಿ ನಿಮ್ಮ ಕೂಡುವ ಸ್ಥಾನ ಈ ಗಾದಿಯ ಮೇಲೆ ಅದೆ. ನಿಮ್ಮನ್ನ ತೆಳಗ ಕೂಡ್ರಿಸಿ ನಾವೆಲ್ಲಿ ಕೂಡ್ರ ಬೇಕು. ಗಾದಿಯ ಮ್ಕಾಲಿ ಕೂಡ್ರಿ ರಾಯರೆ.

ಎಲಾ, ಅಲ್ಲಿ ಯಾರಿದೀರಿ ಎರಡು ಕಪ್ಪು ಉತ್ತಮ ಚಹಾ ಮಾಡಂತ ಹೇಳ್ರಿ. ಗೋಪಾಳರಾಯರಿಗೆ ಸ್ಟ್ರಾಂಗ ಚಹಾ ಬೇಕು ಗೊತ್ತದ ಇಲ್ಲೊ. ತಾಜಾ ಹಾಲು ಹಾಕಲಿಕ್ಕೆ ಹೇಳು.

ಇದ್ನೋಡ್ರಿ ಆನಂದರಾವ, ಗೋಪಾಳಾರಾವ ಅಂದ್ರ ಒಂದು ವ್ಯಕ್ತಿ ಅದ, ವ್ಯಕ್ತಿ. ಒಬ್ಬ ಮನುಷ್ಯ ತಮ್ಮವ ಅಂತ ಅಂದ್ರ ಜೀವ ಹೋದರು ಅವನ ಕೈ ಬಿಡುವದಿಲ್ಲ. ಬಹಳ ದಿವಸದಾಗ ಅವರ ಭೆಟ್ಟಿಯಾಗಿದ್ದಿಲ್ಲ ಎಂದು ತಿಳಿದು ನಿನ್ನೆ ಅವರ ಮನಿಗೆ ಹೋಗಿದ್ದೆ. ಗೋಪಾಳ್ರಾಯರು ಮನೆಯಾಗದ್ದಿಲ್ಲಂತ ಅವರ ಮನ್ಯಾಗ ಹೇಳಿಬಂದೆ. ಇಂದು ಬೆಳಗಾಗುವದರೂಳಗೆ ಗೋಪಾಳಾರಾವ ಇಲ್ಲಿ ಹಜರರಿದ್ದಾರ. ಋಣಾನಬಂಧ? ಅಂದ್ರ ಹೀಂಗ ಇರಬೇಕು. ನಮ್ಮದು ಅವರದು ಗೆಳತನ ಅಂತ ಅಂದ್ರ ನಮ್ಮ ಪೂರ್‍ತೆಕ್ಕ ಇಲ್ಲ ಅದು. ವಂಶಪರಂಪರಾಗಿದ್ದು ಅದು ಅವರ ತಂದಿ ನಮ್ಮ ತಂದಿ ಮನೂಗಳಿಯೊಳಗ ಸಾಲಿ ಕಲಿಯುವ ಮುಂದೆ ಇಬ್ಬರೂ ಕೂಡಿ ಸಾಲಿ ತಪ್ಪಿಸಿ ಗಿಡ ಮಂಗ್ಯಾನ ಆಟಾ ಆಡಲಿಕ್ಕೆ ಹೋಗುತ್ತಿದ್ದರು. ಅಂದಿನಿಂದ ಅವರದು ನಮ್ಮದು ಗೆಳೆತನ.

ಯಾಕ್ರೀ ಗೋಪಾಳ ರಾವ, ಆಗಿನ ಗಿಡಮಾಗ್ಯಾನ ಆಟದ ದಿವಸ ಹೋದವು. ಈಗಿನ ಹುಡುಗರು ಖೋಡಿಗಳು ಕೆರಿಕೆಟ, ಹಾಕಿ, ಅಂತಾವ ದುಡ್ಡಿನ ಹೊರ್‍ತು ಕೆಲಸಿಲ್ಲ. ನಮ್ಮ ಆಟಗಳಿಗೆ ಒಂದು ದುಡ್ಡು ಸಹ ಖರ್‍ಚು ಹತ್ತುದಿಲ್ಲ.

ಎಲಾ, ಚಹ ಆಗಿದ್ದರ ತರ್‍ಯೋ ಸಂಗಡ ಎನರೆ ಖಾರ ತೊಗೊಂಬರ್‍ಯೋ ಆದರ ಹೊರ್‍ತಾಗಿ ಚಹಕ್ಕ ರುಚಿನೇ ಬರುವದಿಲ್ಲ. ಗೋಪಾಳ್ರಾವ ಅಂದರ ಚಹೆದ ಪಕ್ಕಾ ಸವಿಗಾರರು, ಹಳದೀ ಡಬ್ಬಿಯ ಹೊರ್‍ತು ಗೊತ್ತಿಲ್ಲ ಅವರಿಗೆ.

ನಾನು ಮ್ಯುನಿಸಿಪಾಲ್ಟಿಯ ಚುನಾವಣಿಗೆ ನಿಂತದ್ದು ಅರರಿಗೆ ಹೇಳಲಿಕ್ಕ ಬೇಡ, ನನ್ನ ಚುನಾವಣೆ ಅಂದ್ರ ಅನರ ಚುನಾವಣೆ ಇದ್ದಂಗ. ಗೋಪಾಳ್ರಾಯರಷ್ಟು ಆತ್ಮೀಯ ಭಾವನೆಯಿಂದ ಕಲಸ ಮಾಡನವರೆಂದರೆ ಕ್ವಚಿತ್‌ ಸಿಗುವರು. ಎಲಾ, ಎಲಿ ಅಡಕಿ ಡಬ್ಬಿ ತಗೊಳ್ಳಿರೋ, ವಿಳೇದೆಲಿ ಕೂಡಿಗಿವು ಅವ ಕೂಡಗಿವು, ಇನ್ನೇನು ಕೇಳಬೇಕ ನಿಮಗ, ಎಲ್ಲ ನೆನಪಿನಲ್ಲರಿಲ್ಲಿರಲಿ, ಅಂದ್ರ ಆತು ೨೮ ನೇ ತಾರೀಖು ಮಾತ್ರ ನೆನಪಿನಲ್ಲಿರಿಲಿ.

ಸ್ನಾನದ ವಾಳ್ಯಾ ಆದಂತೆ ತೋರತದ. ವಿನಾಕಾರಣ ನಿಮ್ಮ ಅನ್ಬೇಕಕ್ಕ ಯಾಕ ಹರಕತ್ತು ಮಾಡಬೇಕು ಹೋಗಿಬರ್ರಿ. ನಮಸ್ಕಾರ (ಹೊರಗೆ ಬಂದ ಮೇಲೆ ಗೋಪಾಳರಾಯರ) ೬ ತಿಂಗಳಿಗೊಮ್ಮೆ ಮ್ಯುನಸಿಪಾಲ್ಟಿಯ ಚುನಾವಣಿ ಇದ್ದರೆ ಎಷ್ಟು ಮಜಾ ಆಗುತ್ತಿತ್ತು ಎಂದರು!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...