ತಾಯೆ ಕನ್ನಡಾಂಬೆಗೆ

ಮೊಂಜಾವಿನಂದದಿ ಬೆಳಕಾಗಿ ಮೂಡಣದಾ
ಇಬ್ಬನಿ ಹನಿಗಳೇ ಮಣಿಮುತ್ತಾಗಿ ಸಿಂಗರಿಸೆ ತಾಯೆ

ಹಸಿರ ಹೊನಲಿಗೆ ತಳಿರು ತೋರಣ ನಾಚಿ
ತಾಯ ಗುಡಿ ಬಾಗಿಲತೆರೆಯೆ ಮುತ್ತೈದೆಯರು
ಪಂಚಮುಖಿ ಆರತಿ ಎತ್ತಿ ನುಡಿದಿಹರು
ಚವತಿ ಚುಕ್ಕೆಗಳ ಹರಸಿ ||

ಸಪ್ತವರ್‍ಣಗಳಿಂದ ಮೂರ್‍ತವಾಗಿರಿಸಿ
ಸಪ್ತಪದಿಯಂಗಳದಿ ಷಡಕ್ಷರ ಶೃತಿಯಾಗಿ
ಅಷ್ಟ ಮಂಗಳಗಳಿಂದ ಅಲಂಕೃತಳಾಗಿ
ಸಪ್ತಮಾತೃಕೆಯರಿಗೆ ಇಪ್ಪತ್ತೊಂದಾರತಿ ||

ನವರಾತ್ರಿಗಳ ಪೂಜಾನಿಧಿಯಾಗಿ
ಅಷ್ಟ ಒಡತಿಯರ ಸಮಾಗಮ ನವಭಾರತೀಯ
ಜನಮನದಿ ತನುಜಾತೆಯ ಗುಣಗಾನ
ದಾನವ ಶಕ್ತಿಗಳ ಸಂಹರಿಸಿದಾ ದೇವಿಯೇ ||

ಶಿಷ್ಟ ರಕ್ಷಣೆಯ ಮಾನವಿಜಯ ಪತಾಕೆಯ
ರಥವೇರಿದ ನಿನಗೆ ವಿಜಯೋತ್ಸವವು ತಾಯೆ
ಹೂಮಳೆಗೆರೆಯ ತಾಳ ಮೃದಂಗ ಸ್ವರ
ಜಯಘೋಷವು ನಿನಗೆ ತಾಯೆ ಕನ್ನಡಾಂಬೆಯೇ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡ್ ಪದಗೊಳು
Next post ಜಯ ಭಾರತ!

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…