ತಾಯೆ ಕನ್ನಡಾಂಬೆಗೆ

ಮೊಂಜಾವಿನಂದದಿ ಬೆಳಕಾಗಿ ಮೂಡಣದಾ
ಇಬ್ಬನಿ ಹನಿಗಳೇ ಮಣಿಮುತ್ತಾಗಿ ಸಿಂಗರಿಸೆ ತಾಯೆ

ಹಸಿರ ಹೊನಲಿಗೆ ತಳಿರು ತೋರಣ ನಾಚಿ
ತಾಯ ಗುಡಿ ಬಾಗಿಲತೆರೆಯೆ ಮುತ್ತೈದೆಯರು
ಪಂಚಮುಖಿ ಆರತಿ ಎತ್ತಿ ನುಡಿದಿಹರು
ಚವತಿ ಚುಕ್ಕೆಗಳ ಹರಸಿ ||

ಸಪ್ತವರ್‍ಣಗಳಿಂದ ಮೂರ್‍ತವಾಗಿರಿಸಿ
ಸಪ್ತಪದಿಯಂಗಳದಿ ಷಡಕ್ಷರ ಶೃತಿಯಾಗಿ
ಅಷ್ಟ ಮಂಗಳಗಳಿಂದ ಅಲಂಕೃತಳಾಗಿ
ಸಪ್ತಮಾತೃಕೆಯರಿಗೆ ಇಪ್ಪತ್ತೊಂದಾರತಿ ||

ನವರಾತ್ರಿಗಳ ಪೂಜಾನಿಧಿಯಾಗಿ
ಅಷ್ಟ ಒಡತಿಯರ ಸಮಾಗಮ ನವಭಾರತೀಯ
ಜನಮನದಿ ತನುಜಾತೆಯ ಗುಣಗಾನ
ದಾನವ ಶಕ್ತಿಗಳ ಸಂಹರಿಸಿದಾ ದೇವಿಯೇ ||

ಶಿಷ್ಟ ರಕ್ಷಣೆಯ ಮಾನವಿಜಯ ಪತಾಕೆಯ
ರಥವೇರಿದ ನಿನಗೆ ವಿಜಯೋತ್ಸವವು ತಾಯೆ
ಹೂಮಳೆಗೆರೆಯ ತಾಳ ಮೃದಂಗ ಸ್ವರ
ಜಯಘೋಷವು ನಿನಗೆ ತಾಯೆ ಕನ್ನಡಾಂಬೆಯೇ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡ್ ಪದಗೊಳು
Next post ಜಯ ಭಾರತ!

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys