ಅಕ್ಷಯ ಪಾತ್ರೆ

ಹನಿಹನಿಸೋ ಮುತ್ತ ಮಳೆಗೆ
ಇಳೆಯ ಕಣ್ಣೊಳೆನಿತೊ ಕಾತುರ
ಬಾನ ಇನಿಯನೊಲವಿಗಾಗಿ
ಧರೆಗೆ ನಿತ್ಯ ಸಡಗರ ||

ಬಿರಿದ ಕುಸುಮ ಅರಳು ಸುಮವು
ಒಲಿದ ಹೃದಯದ ಪ್ರೀತಿಗೆ
ಕೆರೆ-ತೊರೆ ಸರೋವರ ನದನದಿಗಳಲ್ಲೂ
ಜೊನ್ನ ಕಿರಣದ ಅಂದುಗೆ ||

ಪ್ರೇಮ ಸಂದೇಶ ಹೊತ್ತ ಹಕ್ಕಿ
ಸಾಲು ನೀಲ ನಭದಲಿ
ಕೊರಳ ಕೊಳಲಿನ ಕೂಗಿನಲ್ಲೂ
ಕವಿಯ ಕಾವ್ಯದ ಚೆಂದುಲಿ ||

ನನ್ನ ಮಿಲನ ನಿನ್ನ ಚಲನ
ಬಾಳ ನಿತ್ಯ ಯಾತ್ರೆಗೆ
ಸ್ವಾರ್ಥವಿರದ ಅಮೃತ ಸಿಂಚನ
ಭಾವದಕ್ಷಯ ಪಾತ್ರೆಗೆ. ||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಂಗಾಳಿ
Next post ಕಾಣದೆ ನೀ ಬೊಗಳಬ್ಯಾಡ

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…