ತಂದೆಯೂ ಮಕ್ಕಳೂ

ತಂದೆಯೂ ಮಕ್ಕಳೂ

ಆಶ್ರಮದಲ್ಲಿ ಅರಳಿಯ ಮರದ ಕೆಳಗೆ ಒಂದು ಜಿಂಕೆಯ ಚರ್‍ಮದ ಮೇಲೆ ವಿಶ್ವಾಮಿತ್ರರು ಕುಳಿತಿದ್ದರು. ಆಗ ಒಬ್ಬ ಹುಡುಗನು ಏದುತ್ತಾ ಓಡಿಬಂದು ಅವರ ಕಾಲಿಗೆ ಬಿದ್ದನು. ಅವರೂ “ಯಾರು? ಶುನಶ್ಶೇಫನೇನೋ? ಎಲಾ! ಕೊನೆಗೆ ಬದುಕಿಕೂಂಡೆಯಾ? ಭಲೆ! ಸಂತೋಷ! ಬಾ! ಕುಳಿತುಕೋ” ಎಂದರು. ಅವನೂ ಕೈ ಮುಗಿದು ಗುರುಗಳೇ! ತಮ್ಮ ಕೃಪೆಯಿಂದ ನಾನು ಉಳಿದುಕೊಂಡೆನು. ಇನ್ನು ಮುಂದಕ್ಕೆ ತಾಯಿ, ತಂದೆ, ಬಂಧು, ಬಳಗಗಳೆಲ್ಲವೂ ತಾವೇ! ನಾನೂ ತಮ್ಮ ಮಕ್ಕಳಲ್ಲಿ ಒಬ್ಬನಾಗಿ ಸೇವೆ ಮಾಡಿಕೊಂಡು ಇರುತ್ತೇನೆ. ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು. ಅವನ ಕಣ್ಣುಗಳಿಂದ ನೀರು ಹರಿಯುತ್ತ ಇತ್ತು. ಅದನ್ನು ನೋಡಿ ವಿಶ್ವಾಮಿತ್ರರಿಗೆ ಮನಸ್ಸು ಕರಗಿ ಹೋಯಿತು. “ಹೂ! ಹಾಗೆಯೇ ಆಗಲಿ ಇರು!” ಎಂದರು. ಅವನನ್ನು ಕೊಲ್ಲಬೇಕೆಂದು ಯಾರೋ ಹಿಡಿದುಕೊಂಡು ಹೋಗಿದ್ದರು. ವಿಶ್ವಾಮಿತ್ರರ ಕೃಪೆಯಿಂದ ಅವನು ಅವರ ಕಯ್ಯಿಂದ ತಪ್ಪಿಸಿಕೊಂಡು ಬದುಕಿ ಬಂದಿದ್ದನು.

ಅವರಿಗೆ ಆವೇಳೆಗಾಗಲೆ ಆರು ಜನ ಮಕ್ಕಳಿದ್ದರು. ಮೊದಲಿನ ಮೂವರು ಯಾವಾಗಲೂ ತಂದೆಯು ಹೇಳಿದಕ್ಕೆ ಪ್ರತಿಯನ್ನೇ ಹೇಳುವರು. ಕೊನೆಯ ಮೂವರು ತಂದೆಯ ಮಾತು ಎಂದರೆ, ಏನೇ ಆಗಲಿ ಎರಡು ಮಾತು ಆಡುತ್ತಿರಲಿಲ್ಲ. ಆರು ಜನರನ್ನೂ ಕರೆಸಿ “ಅಯ್ಯಾ! ಈ ಶುನಶ್ಶೇಫನು ಗುರುಹಿರಿಯರಲ್ಲಿ ಭಕ್ತಿಯುಳ್ಳವನು. ಇವನು ನಿಮ್ಮೆಲ್ಲರಿಗಿಂತಲೂ ವಿದ್ಯೆಯಲ್ಲಿಯೂ, ತಪಸ್ಸಿನಲ್ಲಿಯೂ ಹಿರಿಯನು. ಇವನೂ ನಿಮ್ಮಲ್ಲಿ ಒಬ್ಬನಾಗಿ ಇದ್ದು ಕೊಂಡಿರಲಿ” ಎಂದು ಹೇಳಿದರು.

ಮೊದಲ ಮೂವರು ಎಂದಿನಂತೆ ಎದುರು ಆಡಿದರು. ವಿಶ್ವಾಮಿತ್ರರೂ ಒಂದು ಸಲ ಹೇಳಿದರು. ಎರಡು ಸಲ ಹೇಳಿದರು. ಮೂರನೆಯ ಸಲವೂ ಹೇಳಿದರು. ಅವರು ಕೇಳಲಿಲ್ಲ. “ನಿಮ್ಮ ಮನೆಯೇ ಬೇಡ” ಎಂದು ಎಲ್ಲಿಗೋ ಹೊರಟು ಹೋದರು.

ಕೊನೆಯ ಮೂವರು “ತಂದೆಯೇ! ನೀನೇ ನಮಗೆ ದೇವರು. ನೀನು ಹೇಳಿದುದೇ ನಮಗೆ ವೇದವಾಕ್ಯವು. ನಿನ್ನ ಇಷ್ಟದಂತೆಯೇ ಆಗಲಿ. ಶುನಶ್ಶೇಫನೇ ನಮಗೆಲ್ಲ ಹಿರಿಯವನಾಗಲಿ” ಎಂದು ಒಪ್ಪಿಕೊಂಡರು. ವಿಶ್ವಾಮಿತ್ರರಿಗೆ ಸಂತೋಷವಾಯಿತು. ಆ ನಾಲ್ವರಿಗೂ ಸಕಲ ವಿದ್ಯೆಗಳನ್ನೂ ಉಪದೇಶಿಸಿ, ಸಿದ್ಧಿಯಾಗುವಂತೆ ಅನುಗ್ರಹಿಸಿದರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಣ್ಣದ ಚಿಟ್ಟೆ
Next post ನಿನ್ನ ಪ್ರೀತಿಸಿ ನಾನು ನಿನಗಿತ್ತ ಮಾತನ್ನು

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…