Home / ಬಾಲ ಚಿಲುಮೆ / ಕಥೆ / ತಂದೆಯೂ ಮಕ್ಕಳೂ

ತಂದೆಯೂ ಮಕ್ಕಳೂ

ಆಶ್ರಮದಲ್ಲಿ ಅರಳಿಯ ಮರದ ಕೆಳಗೆ ಒಂದು ಜಿಂಕೆಯ ಚರ್‍ಮದ ಮೇಲೆ ವಿಶ್ವಾಮಿತ್ರರು ಕುಳಿತಿದ್ದರು. ಆಗ ಒಬ್ಬ ಹುಡುಗನು ಏದುತ್ತಾ ಓಡಿಬಂದು ಅವರ ಕಾಲಿಗೆ ಬಿದ್ದನು. ಅವರೂ “ಯಾರು? ಶುನಶ್ಶೇಫನೇನೋ? ಎಲಾ! ಕೊನೆಗೆ ಬದುಕಿಕೂಂಡೆಯಾ? ಭಲೆ! ಸಂತೋಷ! ಬಾ! ಕುಳಿತುಕೋ” ಎಂದರು. ಅವನೂ ಕೈ ಮುಗಿದು ಗುರುಗಳೇ! ತಮ್ಮ ಕೃಪೆಯಿಂದ ನಾನು ಉಳಿದುಕೊಂಡೆನು. ಇನ್ನು ಮುಂದಕ್ಕೆ ತಾಯಿ, ತಂದೆ, ಬಂಧು, ಬಳಗಗಳೆಲ್ಲವೂ ತಾವೇ! ನಾನೂ ತಮ್ಮ ಮಕ್ಕಳಲ್ಲಿ ಒಬ್ಬನಾಗಿ ಸೇವೆ ಮಾಡಿಕೊಂಡು ಇರುತ್ತೇನೆ. ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು. ಅವನ ಕಣ್ಣುಗಳಿಂದ ನೀರು ಹರಿಯುತ್ತ ಇತ್ತು. ಅದನ್ನು ನೋಡಿ ವಿಶ್ವಾಮಿತ್ರರಿಗೆ ಮನಸ್ಸು ಕರಗಿ ಹೋಯಿತು. “ಹೂ! ಹಾಗೆಯೇ ಆಗಲಿ ಇರು!” ಎಂದರು. ಅವನನ್ನು ಕೊಲ್ಲಬೇಕೆಂದು ಯಾರೋ ಹಿಡಿದುಕೊಂಡು ಹೋಗಿದ್ದರು. ವಿಶ್ವಾಮಿತ್ರರ ಕೃಪೆಯಿಂದ ಅವನು ಅವರ ಕಯ್ಯಿಂದ ತಪ್ಪಿಸಿಕೊಂಡು ಬದುಕಿ ಬಂದಿದ್ದನು.

ಅವರಿಗೆ ಆವೇಳೆಗಾಗಲೆ ಆರು ಜನ ಮಕ್ಕಳಿದ್ದರು. ಮೊದಲಿನ ಮೂವರು ಯಾವಾಗಲೂ ತಂದೆಯು ಹೇಳಿದಕ್ಕೆ ಪ್ರತಿಯನ್ನೇ ಹೇಳುವರು. ಕೊನೆಯ ಮೂವರು ತಂದೆಯ ಮಾತು ಎಂದರೆ, ಏನೇ ಆಗಲಿ ಎರಡು ಮಾತು ಆಡುತ್ತಿರಲಿಲ್ಲ. ಆರು ಜನರನ್ನೂ ಕರೆಸಿ “ಅಯ್ಯಾ! ಈ ಶುನಶ್ಶೇಫನು ಗುರುಹಿರಿಯರಲ್ಲಿ ಭಕ್ತಿಯುಳ್ಳವನು. ಇವನು ನಿಮ್ಮೆಲ್ಲರಿಗಿಂತಲೂ ವಿದ್ಯೆಯಲ್ಲಿಯೂ, ತಪಸ್ಸಿನಲ್ಲಿಯೂ ಹಿರಿಯನು. ಇವನೂ ನಿಮ್ಮಲ್ಲಿ ಒಬ್ಬನಾಗಿ ಇದ್ದು ಕೊಂಡಿರಲಿ” ಎಂದು ಹೇಳಿದರು.

ಮೊದಲ ಮೂವರು ಎಂದಿನಂತೆ ಎದುರು ಆಡಿದರು. ವಿಶ್ವಾಮಿತ್ರರೂ ಒಂದು ಸಲ ಹೇಳಿದರು. ಎರಡು ಸಲ ಹೇಳಿದರು. ಮೂರನೆಯ ಸಲವೂ ಹೇಳಿದರು. ಅವರು ಕೇಳಲಿಲ್ಲ. “ನಿಮ್ಮ ಮನೆಯೇ ಬೇಡ” ಎಂದು ಎಲ್ಲಿಗೋ ಹೊರಟು ಹೋದರು.

ಕೊನೆಯ ಮೂವರು “ತಂದೆಯೇ! ನೀನೇ ನಮಗೆ ದೇವರು. ನೀನು ಹೇಳಿದುದೇ ನಮಗೆ ವೇದವಾಕ್ಯವು. ನಿನ್ನ ಇಷ್ಟದಂತೆಯೇ ಆಗಲಿ. ಶುನಶ್ಶೇಫನೇ ನಮಗೆಲ್ಲ ಹಿರಿಯವನಾಗಲಿ” ಎಂದು ಒಪ್ಪಿಕೊಂಡರು. ವಿಶ್ವಾಮಿತ್ರರಿಗೆ ಸಂತೋಷವಾಯಿತು. ಆ ನಾಲ್ವರಿಗೂ ಸಕಲ ವಿದ್ಯೆಗಳನ್ನೂ ಉಪದೇಶಿಸಿ, ಸಿದ್ಧಿಯಾಗುವಂತೆ ಅನುಗ್ರಹಿಸಿದರು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...