Home / ಬಾಲ ಚಿಲುಮೆ / ಕಥೆ / ಹುಲಿಯೂ ಬೆಕ್ಕೂ

ಹುಲಿಯೂ ಬೆಕ್ಕೂ

ಹುಲಿಯು ಚೆಕ್ಕಿನ ಹತ್ತಿರ ವಿದ್ಯೆಯನ್ನು ಕಲಿಯುವುದಕ್ಕೆ ಹೋಯಿತು. ಬೆಕ್ಕು “ಅಯ್ಯಾ! ನಿನಗೆ ಸಿಟ್ಟು ಬಹಳ, ನೀನು ಆ ಸಿಟ್ಟು! ಬಿಟ್ಟರೆ ಆಗಬಹುದು” ಎಂದಿತು. ಹುಲಿಯು “ಹಾಗೇ ಆಗಲಿ” ಎಂದು ಒಪ್ಪಿ ಕೊಂಡಿತು. ಬೆಕ್ಕು ಅಕ್ಕರೆಯಿಂದ ಕಲಿಸಲು ಮೊದಲು ಮಾಡಿತು.

ಆದರೆ ಬೆಕ್ಕಿಗೆ ಬಹಳ ಬುದ್ಧಿ. ತನಗಿಂತ ಗಾತ್ರದಲ್ಲಿ ದೊಡ್ಡದಾದ ಹುಲಿಯು ಮೇಲೆ ಬಿದ್ದರೆ ತಾನು ಉಳಿಯುವುದು ಅನುಮಾನವೆಂದು, ದೂರದಲ್ಲಿಯೇ ಇರುತ್ತಿತ್ತು. ಗುಟ್ಟರೆ ಹಾಕುವುದು, ಸದ್ದಾಗದಂತೆ ನಡೆಯುವುದು, ಪೊದೆಗಳಲ್ಲಿ ಅವಿತುಕೊಳ್ಳುವುದು, ಗುರಿಯಿಟ್ಟು ಹಾರುವುದು ಮೊದಲಾದ ವಿದ್ಯೆಗಳನ್ನು ಹೇಳಿಕೊಟ್ಟಿತು. ಹುಲಿಯು ಬಹಳ ವಿಧೇಯನಾಗಿ ಎಲ್ಲವನ್ನೂ ಕಲಿತುಕೊಂಡಿತು. ಅಲ್ಲಿಗೆ ಒಂದು ವರುಷವಾಯಿತು.

ಎರಡನೆಯ ವರುಷ ಕೊಂಚ ಕಷ್ಟದ ಪಾಠಗಳಿಗೆ ಆರಂಭವಾಯಿತು. ಕತ್ತಲಲ್ಲಿ ನೋಡುವುದು, ಹೊಂಚು ಹಾಕುವುದು, ಬಾಲವನ್ನು ನೆಲಕ್ಕಪ್ಪಳಿಸುವುದು, ಇವೆಲ್ಲವನ್ನೂ ಕಲಿತುಕೊಂಡಿತು.

ಮೂರನೆಯ ವರುಷ ಇನ್ನೂ ಕಷ್ಟದ ಪಾಠಗಳು. ಆದರೆ ಆಲ್ಲಿ ಕಲಿಯುವುದು ಹೆಚ್ಚಾಗಿರಲಿಲ್ಲ. ಆ ವರ್‍ಷ, ಉಗುರುಗಳನ್ನು ಬೇಕಾದಾಗ ಈಚೆಗೆ ಬಿಡುವುದು, ಬೇಡವಾದಾಗ ಒಳಗೆ ಎಳೆದುಕೊಳ್ಳುವುದು ಇದೊಂದು, ಮರ ಹತ್ತುವುದೊಂದು, ಹೀಗೆ ಎರಡೇ ಕಲಿಯಬೇಕಾಗಿದ್ದುದು. ಹುಲಿಯು ಉಗುರನ್ನು ಬಿಟ್ಟು ಎಳೆದುಕೊಳ್ಳುವುದನ್ನು ಕಲಿತುಕೊಂಡಿತು. ಬೆಕ್ಕು ಮರವನ್ನು ಹತ್ತುವುದನ್ನು ಹೇಳಿಕೊಡುತ್ತದೆ. ಎಷ್ಟುಸಲ ಹೇಳಿದರೂ ಹುಲಿಯು ಎಲ್ಲೋ ನೋಡಿಕೊಂಡಿತ್ತು. ಅದಕ್ಕೆ ತಿಳಿಯಲಿಲ್ಲ. ಅದಕ್ಕಾಗಿ ಬೆಕ್ಕು ಅದನ್ನು ಬೆತ್ತದಿಂದ ಹಾಗೆಂದಿತು, ಹುಲಿಯು ತಿರುಗಿ ತಟ್ಟನೆ ಮೇಲೆ ಬಿತ್ತು. ಆದರೆ ಬೆಕ್ಕು ಬಹಳ ಎಚ್ಚರಿಕೆಯಿಂದಿತ್ತು. ಹುಲಿಗೆ ಸಿಕ್ಕಲಿಲ್ಲ. ತಟ್ಟನೆ ಮರವನ್ನು ಹತ್ತಿ ಕೊಂಡಿತು. ಹುಲಿಗೆ ಮರ ಹತ್ತಲು ಆಗಲಿಲ್ಲ. ಆಗ ಅದಕ್ಕೆ “ನನಗೆ ಮರವನ್ನು ಹತ್ತುವುದು ಬರುವುದಿಲ್ಲ” ಎಂಬುದು ನೆನಪಿಗೆ ಬಂತು.

ಮತ್ತೆ ಬೆಕ್ಕು ಅವಿಧೇಯನಾದ ಹುಲಿಯನ್ನು ನಂಬಲಿಲ್ಲ. ತನ್ನ ಕೆಟ್ಟ ನಡತೆಗಾಗಿ ಹುಲಿಯು ಬಹಳ ನೊಂದುಕೊಂಡಿತು. ತಾನು ವಿಧೇಯನಾಗಿರುವೆನೆಂದು ಹೇಳಿಕೊಂಡಿತು. ಬೆಕ್ಕು “ನೀನು ಅವಿಧೇಯ. ಹೇಳಿದ ಹಾಗೆ ಕೇಳುವವನಲ್ಲ. ನಿನಗೆ ನಾನು ಪಾಠ ವನ್ನು ಹೇಳುವುದಿಲ್ಲ” ಎಂದು ಹೇಳಿಬಿಟ್ಟಿತು. ಹುಲಿಯು ಅತ್ತು, ಕಣ್ಣೀರು, ಕರೆಯಿತು. ಆದರೂ ಬೆಕ್ಕು ಮರ ಹತ್ತುವುದನ್ನು ಅದಕ್ಕೆ ಕಲಿಸಿ ಕೊಡಲಿಲ್ಲ. “ನನಗೆ ಮರ ಹತ್ತುವುದು ಬರುನುದಿಲ್ಲ” ಎಂದು ಹುಲಿಯು ಈಗಲೂ ಅಳುವುದಂತೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...