Home / ಬಾಲ ಚಿಲುಮೆ / ಕಥೆ / ಹುಲಿಯೂ ಬೆಕ್ಕೂ

ಹುಲಿಯೂ ಬೆಕ್ಕೂ

ಹುಲಿಯು ಚೆಕ್ಕಿನ ಹತ್ತಿರ ವಿದ್ಯೆಯನ್ನು ಕಲಿಯುವುದಕ್ಕೆ ಹೋಯಿತು. ಬೆಕ್ಕು “ಅಯ್ಯಾ! ನಿನಗೆ ಸಿಟ್ಟು ಬಹಳ, ನೀನು ಆ ಸಿಟ್ಟು! ಬಿಟ್ಟರೆ ಆಗಬಹುದು” ಎಂದಿತು. ಹುಲಿಯು “ಹಾಗೇ ಆಗಲಿ” ಎಂದು ಒಪ್ಪಿ ಕೊಂಡಿತು. ಬೆಕ್ಕು ಅಕ್ಕರೆಯಿಂದ ಕಲಿಸಲು ಮೊದಲು ಮಾಡಿತು.

ಆದರೆ ಬೆಕ್ಕಿಗೆ ಬಹಳ ಬುದ್ಧಿ. ತನಗಿಂತ ಗಾತ್ರದಲ್ಲಿ ದೊಡ್ಡದಾದ ಹುಲಿಯು ಮೇಲೆ ಬಿದ್ದರೆ ತಾನು ಉಳಿಯುವುದು ಅನುಮಾನವೆಂದು, ದೂರದಲ್ಲಿಯೇ ಇರುತ್ತಿತ್ತು. ಗುಟ್ಟರೆ ಹಾಕುವುದು, ಸದ್ದಾಗದಂತೆ ನಡೆಯುವುದು, ಪೊದೆಗಳಲ್ಲಿ ಅವಿತುಕೊಳ್ಳುವುದು, ಗುರಿಯಿಟ್ಟು ಹಾರುವುದು ಮೊದಲಾದ ವಿದ್ಯೆಗಳನ್ನು ಹೇಳಿಕೊಟ್ಟಿತು. ಹುಲಿಯು ಬಹಳ ವಿಧೇಯನಾಗಿ ಎಲ್ಲವನ್ನೂ ಕಲಿತುಕೊಂಡಿತು. ಅಲ್ಲಿಗೆ ಒಂದು ವರುಷವಾಯಿತು.

ಎರಡನೆಯ ವರುಷ ಕೊಂಚ ಕಷ್ಟದ ಪಾಠಗಳಿಗೆ ಆರಂಭವಾಯಿತು. ಕತ್ತಲಲ್ಲಿ ನೋಡುವುದು, ಹೊಂಚು ಹಾಕುವುದು, ಬಾಲವನ್ನು ನೆಲಕ್ಕಪ್ಪಳಿಸುವುದು, ಇವೆಲ್ಲವನ್ನೂ ಕಲಿತುಕೊಂಡಿತು.

ಮೂರನೆಯ ವರುಷ ಇನ್ನೂ ಕಷ್ಟದ ಪಾಠಗಳು. ಆದರೆ ಆಲ್ಲಿ ಕಲಿಯುವುದು ಹೆಚ್ಚಾಗಿರಲಿಲ್ಲ. ಆ ವರ್‍ಷ, ಉಗುರುಗಳನ್ನು ಬೇಕಾದಾಗ ಈಚೆಗೆ ಬಿಡುವುದು, ಬೇಡವಾದಾಗ ಒಳಗೆ ಎಳೆದುಕೊಳ್ಳುವುದು ಇದೊಂದು, ಮರ ಹತ್ತುವುದೊಂದು, ಹೀಗೆ ಎರಡೇ ಕಲಿಯಬೇಕಾಗಿದ್ದುದು. ಹುಲಿಯು ಉಗುರನ್ನು ಬಿಟ್ಟು ಎಳೆದುಕೊಳ್ಳುವುದನ್ನು ಕಲಿತುಕೊಂಡಿತು. ಬೆಕ್ಕು ಮರವನ್ನು ಹತ್ತುವುದನ್ನು ಹೇಳಿಕೊಡುತ್ತದೆ. ಎಷ್ಟುಸಲ ಹೇಳಿದರೂ ಹುಲಿಯು ಎಲ್ಲೋ ನೋಡಿಕೊಂಡಿತ್ತು. ಅದಕ್ಕೆ ತಿಳಿಯಲಿಲ್ಲ. ಅದಕ್ಕಾಗಿ ಬೆಕ್ಕು ಅದನ್ನು ಬೆತ್ತದಿಂದ ಹಾಗೆಂದಿತು, ಹುಲಿಯು ತಿರುಗಿ ತಟ್ಟನೆ ಮೇಲೆ ಬಿತ್ತು. ಆದರೆ ಬೆಕ್ಕು ಬಹಳ ಎಚ್ಚರಿಕೆಯಿಂದಿತ್ತು. ಹುಲಿಗೆ ಸಿಕ್ಕಲಿಲ್ಲ. ತಟ್ಟನೆ ಮರವನ್ನು ಹತ್ತಿ ಕೊಂಡಿತು. ಹುಲಿಗೆ ಮರ ಹತ್ತಲು ಆಗಲಿಲ್ಲ. ಆಗ ಅದಕ್ಕೆ “ನನಗೆ ಮರವನ್ನು ಹತ್ತುವುದು ಬರುವುದಿಲ್ಲ” ಎಂಬುದು ನೆನಪಿಗೆ ಬಂತು.

ಮತ್ತೆ ಬೆಕ್ಕು ಅವಿಧೇಯನಾದ ಹುಲಿಯನ್ನು ನಂಬಲಿಲ್ಲ. ತನ್ನ ಕೆಟ್ಟ ನಡತೆಗಾಗಿ ಹುಲಿಯು ಬಹಳ ನೊಂದುಕೊಂಡಿತು. ತಾನು ವಿಧೇಯನಾಗಿರುವೆನೆಂದು ಹೇಳಿಕೊಂಡಿತು. ಬೆಕ್ಕು “ನೀನು ಅವಿಧೇಯ. ಹೇಳಿದ ಹಾಗೆ ಕೇಳುವವನಲ್ಲ. ನಿನಗೆ ನಾನು ಪಾಠ ವನ್ನು ಹೇಳುವುದಿಲ್ಲ” ಎಂದು ಹೇಳಿಬಿಟ್ಟಿತು. ಹುಲಿಯು ಅತ್ತು, ಕಣ್ಣೀರು, ಕರೆಯಿತು. ಆದರೂ ಬೆಕ್ಕು ಮರ ಹತ್ತುವುದನ್ನು ಅದಕ್ಕೆ ಕಲಿಸಿ ಕೊಡಲಿಲ್ಲ. “ನನಗೆ ಮರ ಹತ್ತುವುದು ಬರುನುದಿಲ್ಲ” ಎಂದು ಹುಲಿಯು ಈಗಲೂ ಅಳುವುದಂತೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...