Home / ಬಾಲ ಚಿಲುಮೆ / ಕಥೆ / ಹುಲಿಯೂ ಬೆಕ್ಕೂ

ಹುಲಿಯೂ ಬೆಕ್ಕೂ

ಹುಲಿಯು ಚೆಕ್ಕಿನ ಹತ್ತಿರ ವಿದ್ಯೆಯನ್ನು ಕಲಿಯುವುದಕ್ಕೆ ಹೋಯಿತು. ಬೆಕ್ಕು “ಅಯ್ಯಾ! ನಿನಗೆ ಸಿಟ್ಟು ಬಹಳ, ನೀನು ಆ ಸಿಟ್ಟು! ಬಿಟ್ಟರೆ ಆಗಬಹುದು” ಎಂದಿತು. ಹುಲಿಯು “ಹಾಗೇ ಆಗಲಿ” ಎಂದು ಒಪ್ಪಿ ಕೊಂಡಿತು. ಬೆಕ್ಕು ಅಕ್ಕರೆಯಿಂದ ಕಲಿಸಲು ಮೊದಲು ಮಾಡಿತು.

ಆದರೆ ಬೆಕ್ಕಿಗೆ ಬಹಳ ಬುದ್ಧಿ. ತನಗಿಂತ ಗಾತ್ರದಲ್ಲಿ ದೊಡ್ಡದಾದ ಹುಲಿಯು ಮೇಲೆ ಬಿದ್ದರೆ ತಾನು ಉಳಿಯುವುದು ಅನುಮಾನವೆಂದು, ದೂರದಲ್ಲಿಯೇ ಇರುತ್ತಿತ್ತು. ಗುಟ್ಟರೆ ಹಾಕುವುದು, ಸದ್ದಾಗದಂತೆ ನಡೆಯುವುದು, ಪೊದೆಗಳಲ್ಲಿ ಅವಿತುಕೊಳ್ಳುವುದು, ಗುರಿಯಿಟ್ಟು ಹಾರುವುದು ಮೊದಲಾದ ವಿದ್ಯೆಗಳನ್ನು ಹೇಳಿಕೊಟ್ಟಿತು. ಹುಲಿಯು ಬಹಳ ವಿಧೇಯನಾಗಿ ಎಲ್ಲವನ್ನೂ ಕಲಿತುಕೊಂಡಿತು. ಅಲ್ಲಿಗೆ ಒಂದು ವರುಷವಾಯಿತು.

ಎರಡನೆಯ ವರುಷ ಕೊಂಚ ಕಷ್ಟದ ಪಾಠಗಳಿಗೆ ಆರಂಭವಾಯಿತು. ಕತ್ತಲಲ್ಲಿ ನೋಡುವುದು, ಹೊಂಚು ಹಾಕುವುದು, ಬಾಲವನ್ನು ನೆಲಕ್ಕಪ್ಪಳಿಸುವುದು, ಇವೆಲ್ಲವನ್ನೂ ಕಲಿತುಕೊಂಡಿತು.

ಮೂರನೆಯ ವರುಷ ಇನ್ನೂ ಕಷ್ಟದ ಪಾಠಗಳು. ಆದರೆ ಆಲ್ಲಿ ಕಲಿಯುವುದು ಹೆಚ್ಚಾಗಿರಲಿಲ್ಲ. ಆ ವರ್‍ಷ, ಉಗುರುಗಳನ್ನು ಬೇಕಾದಾಗ ಈಚೆಗೆ ಬಿಡುವುದು, ಬೇಡವಾದಾಗ ಒಳಗೆ ಎಳೆದುಕೊಳ್ಳುವುದು ಇದೊಂದು, ಮರ ಹತ್ತುವುದೊಂದು, ಹೀಗೆ ಎರಡೇ ಕಲಿಯಬೇಕಾಗಿದ್ದುದು. ಹುಲಿಯು ಉಗುರನ್ನು ಬಿಟ್ಟು ಎಳೆದುಕೊಳ್ಳುವುದನ್ನು ಕಲಿತುಕೊಂಡಿತು. ಬೆಕ್ಕು ಮರವನ್ನು ಹತ್ತುವುದನ್ನು ಹೇಳಿಕೊಡುತ್ತದೆ. ಎಷ್ಟುಸಲ ಹೇಳಿದರೂ ಹುಲಿಯು ಎಲ್ಲೋ ನೋಡಿಕೊಂಡಿತ್ತು. ಅದಕ್ಕೆ ತಿಳಿಯಲಿಲ್ಲ. ಅದಕ್ಕಾಗಿ ಬೆಕ್ಕು ಅದನ್ನು ಬೆತ್ತದಿಂದ ಹಾಗೆಂದಿತು, ಹುಲಿಯು ತಿರುಗಿ ತಟ್ಟನೆ ಮೇಲೆ ಬಿತ್ತು. ಆದರೆ ಬೆಕ್ಕು ಬಹಳ ಎಚ್ಚರಿಕೆಯಿಂದಿತ್ತು. ಹುಲಿಗೆ ಸಿಕ್ಕಲಿಲ್ಲ. ತಟ್ಟನೆ ಮರವನ್ನು ಹತ್ತಿ ಕೊಂಡಿತು. ಹುಲಿಗೆ ಮರ ಹತ್ತಲು ಆಗಲಿಲ್ಲ. ಆಗ ಅದಕ್ಕೆ “ನನಗೆ ಮರವನ್ನು ಹತ್ತುವುದು ಬರುವುದಿಲ್ಲ” ಎಂಬುದು ನೆನಪಿಗೆ ಬಂತು.

ಮತ್ತೆ ಬೆಕ್ಕು ಅವಿಧೇಯನಾದ ಹುಲಿಯನ್ನು ನಂಬಲಿಲ್ಲ. ತನ್ನ ಕೆಟ್ಟ ನಡತೆಗಾಗಿ ಹುಲಿಯು ಬಹಳ ನೊಂದುಕೊಂಡಿತು. ತಾನು ವಿಧೇಯನಾಗಿರುವೆನೆಂದು ಹೇಳಿಕೊಂಡಿತು. ಬೆಕ್ಕು “ನೀನು ಅವಿಧೇಯ. ಹೇಳಿದ ಹಾಗೆ ಕೇಳುವವನಲ್ಲ. ನಿನಗೆ ನಾನು ಪಾಠ ವನ್ನು ಹೇಳುವುದಿಲ್ಲ” ಎಂದು ಹೇಳಿಬಿಟ್ಟಿತು. ಹುಲಿಯು ಅತ್ತು, ಕಣ್ಣೀರು, ಕರೆಯಿತು. ಆದರೂ ಬೆಕ್ಕು ಮರ ಹತ್ತುವುದನ್ನು ಅದಕ್ಕೆ ಕಲಿಸಿ ಕೊಡಲಿಲ್ಲ. “ನನಗೆ ಮರ ಹತ್ತುವುದು ಬರುನುದಿಲ್ಲ” ಎಂದು ಹುಲಿಯು ಈಗಲೂ ಅಳುವುದಂತೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...