ಕಾರುಗಳ್ಳೀ ವೀರಾಜಯ್ಯ

ಕಾರುಗಳ್ಳೀ ವೀರಾಜಯ್ಯ

ಹಿಂದೆ ಈ ನಮ್ಮ ಮೈಸೂರು ರಾಜ್ಯವನ್ನು ರಾಜವೊಡೆಯರು ಆಳುತ್ತಿದ್ದರು. ಆಗ ವೀರಾಜಯ್ಯನೆಂಬುವವನು ಒಬ್ಬನು ಇದ್ದನು. ಮಹಾರಾಜರು ಅವನು ಬದುಕಲೆಂದು ಕಾರುಗಳ್ಳಿಯನ್ನು ಅವನಿಗೆ ಮಾನ್ಯವಾಗಿ ಕೊಟ್ಟಿದ್ದರು.

ವೀರಾಜಯ್ಯನು ಬಹಳ ಜಂಭಗಾರನು. ಯಾರನ್ನು ಕಂಡರೂ ಲಕ್ಷ್ಯವಿರಲಿಲ್ಲ. ಒಂದು ದಿನ ಮಹಾರಾಜರ ಎದುರಿಗೆ ಪಲ್ಲಕ್ಕಿಯಲ್ಲಿ ಕುಳಿತುಕೊಂಡು ಆಟ್ಟಹಾಸದಿಂದ ಬಂದನು. ಮಹಾರಾಜರ ಮಗ್ಗುಲಲ್ಲಿ ಇದ್ದ ಇತರ ದೊಡ್ಡ ಅಧಿಕಾರಿಗಳಗಿ ಇದು ಸರಿ ಬೀಳಲಿಲ್ಲ. “ಮಹರಾಜರೆಂದರೆ ನಮಗೆಲ್ಲಾ ದೊಡ್ಡವರು. ಅವರ ಸನ್ನಿಧಿಯಲ್ಲಿ ನಯ ಭಯಗಳಂದ ನಡೆದುಕೊಳ್ಳಬೇಕು. ಇಲ್ಲವಾದರೆ ನಿನಗೆ ಒಳ್ಳೆಯದಾಗುವುದಿಲ್ಲ” ಎಂದು ಮಂತ್ರಿಯು ಹೇಳಿ ಕಳುಹಿಸಿದನು. ವೀರಾಜಯ್ಯನು ಕೇಳಲಿಲ್ಲ.

ಮತ್ತೊಂದು ಸಲವೂ ಹೀಗೆಯೇ ಆಯಿತು. ಆ ಸಲವೂ ಮಂತ್ರಿಯು ಮತ್ತೆ ಬೇಡವೆಂದು ಹೇಳಿದನು. ಇನ್ನೊಂದು ಸಲವೂ ಹೀಗೆಯೇ ಆಯಿತು. ಮಂತ್ರಿಯು ಮಹಾರಾಜರ ಬಳಿಗೆ ಹೋಗಿ “ಮಹಾಸ್ವಾಮಿಯವರು ಮನ್ನಿಸಬೇಕು. ವೀರಾಜಯ್ಯನು ಪ್ರಭುಗಳನ್ನು ಕಂಡರೆ ಅಲಕ್ಷ್ಯಮಾಡುತ್ತಿರುವನು. ಇತರರು ಇವನನ್ನು ನೋಡಿ ಕೆಟ್ಟು ಹೋದಾರು. ಅದರಿಂದ ಅವನಿಗೆ ಶಿಕ್ಷೆಯಾಗಬೇಕು” ಎಂದು ಅರಿಕೆ ಮಾಡಿದನು. ಮಹಾರಾಜರು “ಅಹುದು, ಎರಡು ಸಲ ಮನ್ನಿಸಿದರೂ ಅವನಿಗೆ ಬುದ್ಧಿ ಬರಲಿಲ್ಲ. ಅವನ ಮಾನ್ಯವನ್ನೂ ಪಲ್ಲಕ್ಕಿಯನ್ನೂ ಕಿತ್ತುಕೊಂಡು ಓಡಿಸಿ ಬಿಡಿ” ಎಂದು ಅಪ್ಪಣೆ ಮಾಡಿದರು. ಮಂತ್ರಿಯು ಹಾಗೆಯೇ ಮಾಡಿದನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುಬ್ಬಿಮರಿ
Next post ಷೇಕ್ಸ್‌ಪಿಯರ್

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…