ಕಾರುಗಳ್ಳೀ ವೀರಾಜಯ್ಯ

ಕಾರುಗಳ್ಳೀ ವೀರಾಜಯ್ಯ

ಹಿಂದೆ ಈ ನಮ್ಮ ಮೈಸೂರು ರಾಜ್ಯವನ್ನು ರಾಜವೊಡೆಯರು ಆಳುತ್ತಿದ್ದರು. ಆಗ ವೀರಾಜಯ್ಯನೆಂಬುವವನು ಒಬ್ಬನು ಇದ್ದನು. ಮಹಾರಾಜರು ಅವನು ಬದುಕಲೆಂದು ಕಾರುಗಳ್ಳಿಯನ್ನು ಅವನಿಗೆ ಮಾನ್ಯವಾಗಿ ಕೊಟ್ಟಿದ್ದರು.

ವೀರಾಜಯ್ಯನು ಬಹಳ ಜಂಭಗಾರನು. ಯಾರನ್ನು ಕಂಡರೂ ಲಕ್ಷ್ಯವಿರಲಿಲ್ಲ. ಒಂದು ದಿನ ಮಹಾರಾಜರ ಎದುರಿಗೆ ಪಲ್ಲಕ್ಕಿಯಲ್ಲಿ ಕುಳಿತುಕೊಂಡು ಆಟ್ಟಹಾಸದಿಂದ ಬಂದನು. ಮಹಾರಾಜರ ಮಗ್ಗುಲಲ್ಲಿ ಇದ್ದ ಇತರ ದೊಡ್ಡ ಅಧಿಕಾರಿಗಳಗಿ ಇದು ಸರಿ ಬೀಳಲಿಲ್ಲ. “ಮಹರಾಜರೆಂದರೆ ನಮಗೆಲ್ಲಾ ದೊಡ್ಡವರು. ಅವರ ಸನ್ನಿಧಿಯಲ್ಲಿ ನಯ ಭಯಗಳಂದ ನಡೆದುಕೊಳ್ಳಬೇಕು. ಇಲ್ಲವಾದರೆ ನಿನಗೆ ಒಳ್ಳೆಯದಾಗುವುದಿಲ್ಲ” ಎಂದು ಮಂತ್ರಿಯು ಹೇಳಿ ಕಳುಹಿಸಿದನು. ವೀರಾಜಯ್ಯನು ಕೇಳಲಿಲ್ಲ.

ಮತ್ತೊಂದು ಸಲವೂ ಹೀಗೆಯೇ ಆಯಿತು. ಆ ಸಲವೂ ಮಂತ್ರಿಯು ಮತ್ತೆ ಬೇಡವೆಂದು ಹೇಳಿದನು. ಇನ್ನೊಂದು ಸಲವೂ ಹೀಗೆಯೇ ಆಯಿತು. ಮಂತ್ರಿಯು ಮಹಾರಾಜರ ಬಳಿಗೆ ಹೋಗಿ “ಮಹಾಸ್ವಾಮಿಯವರು ಮನ್ನಿಸಬೇಕು. ವೀರಾಜಯ್ಯನು ಪ್ರಭುಗಳನ್ನು ಕಂಡರೆ ಅಲಕ್ಷ್ಯಮಾಡುತ್ತಿರುವನು. ಇತರರು ಇವನನ್ನು ನೋಡಿ ಕೆಟ್ಟು ಹೋದಾರು. ಅದರಿಂದ ಅವನಿಗೆ ಶಿಕ್ಷೆಯಾಗಬೇಕು” ಎಂದು ಅರಿಕೆ ಮಾಡಿದನು. ಮಹಾರಾಜರು “ಅಹುದು, ಎರಡು ಸಲ ಮನ್ನಿಸಿದರೂ ಅವನಿಗೆ ಬುದ್ಧಿ ಬರಲಿಲ್ಲ. ಅವನ ಮಾನ್ಯವನ್ನೂ ಪಲ್ಲಕ್ಕಿಯನ್ನೂ ಕಿತ್ತುಕೊಂಡು ಓಡಿಸಿ ಬಿಡಿ” ಎಂದು ಅಪ್ಪಣೆ ಮಾಡಿದರು. ಮಂತ್ರಿಯು ಹಾಗೆಯೇ ಮಾಡಿದನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುಬ್ಬಿಮರಿ
Next post ಷೇಕ್ಸ್‌ಪಿಯರ್

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

cheap jordans|wholesale air max|wholesale jordans|wholesale jewelry|wholesale jerseys