Home / ಬಾಲ ಚಿಲುಮೆ / ಕಥೆ / ಕಾರುಗಳ್ಳೀ ವೀರಾಜಯ್ಯ

ಕಾರುಗಳ್ಳೀ ವೀರಾಜಯ್ಯ

ಹಿಂದೆ ಈ ನಮ್ಮ ಮೈಸೂರು ರಾಜ್ಯವನ್ನು ರಾಜವೊಡೆಯರು ಆಳುತ್ತಿದ್ದರು. ಆಗ ವೀರಾಜಯ್ಯನೆಂಬುವವನು ಒಬ್ಬನು ಇದ್ದನು. ಮಹಾರಾಜರು ಅವನು ಬದುಕಲೆಂದು ಕಾರುಗಳ್ಳಿಯನ್ನು ಅವನಿಗೆ ಮಾನ್ಯವಾಗಿ ಕೊಟ್ಟಿದ್ದರು.

ವೀರಾಜಯ್ಯನು ಬಹಳ ಜಂಭಗಾರನು. ಯಾರನ್ನು ಕಂಡರೂ ಲಕ್ಷ್ಯವಿರಲಿಲ್ಲ. ಒಂದು ದಿನ ಮಹಾರಾಜರ ಎದುರಿಗೆ ಪಲ್ಲಕ್ಕಿಯಲ್ಲಿ ಕುಳಿತುಕೊಂಡು ಆಟ್ಟಹಾಸದಿಂದ ಬಂದನು. ಮಹಾರಾಜರ ಮಗ್ಗುಲಲ್ಲಿ ಇದ್ದ ಇತರ ದೊಡ್ಡ ಅಧಿಕಾರಿಗಳಗಿ ಇದು ಸರಿ ಬೀಳಲಿಲ್ಲ. “ಮಹರಾಜರೆಂದರೆ ನಮಗೆಲ್ಲಾ ದೊಡ್ಡವರು. ಅವರ ಸನ್ನಿಧಿಯಲ್ಲಿ ನಯ ಭಯಗಳಂದ ನಡೆದುಕೊಳ್ಳಬೇಕು. ಇಲ್ಲವಾದರೆ ನಿನಗೆ ಒಳ್ಳೆಯದಾಗುವುದಿಲ್ಲ” ಎಂದು ಮಂತ್ರಿಯು ಹೇಳಿ ಕಳುಹಿಸಿದನು. ವೀರಾಜಯ್ಯನು ಕೇಳಲಿಲ್ಲ.

ಮತ್ತೊಂದು ಸಲವೂ ಹೀಗೆಯೇ ಆಯಿತು. ಆ ಸಲವೂ ಮಂತ್ರಿಯು ಮತ್ತೆ ಬೇಡವೆಂದು ಹೇಳಿದನು. ಇನ್ನೊಂದು ಸಲವೂ ಹೀಗೆಯೇ ಆಯಿತು. ಮಂತ್ರಿಯು ಮಹಾರಾಜರ ಬಳಿಗೆ ಹೋಗಿ “ಮಹಾಸ್ವಾಮಿಯವರು ಮನ್ನಿಸಬೇಕು. ವೀರಾಜಯ್ಯನು ಪ್ರಭುಗಳನ್ನು ಕಂಡರೆ ಅಲಕ್ಷ್ಯಮಾಡುತ್ತಿರುವನು. ಇತರರು ಇವನನ್ನು ನೋಡಿ ಕೆಟ್ಟು ಹೋದಾರು. ಅದರಿಂದ ಅವನಿಗೆ ಶಿಕ್ಷೆಯಾಗಬೇಕು” ಎಂದು ಅರಿಕೆ ಮಾಡಿದನು. ಮಹಾರಾಜರು “ಅಹುದು, ಎರಡು ಸಲ ಮನ್ನಿಸಿದರೂ ಅವನಿಗೆ ಬುದ್ಧಿ ಬರಲಿಲ್ಲ. ಅವನ ಮಾನ್ಯವನ್ನೂ ಪಲ್ಲಕ್ಕಿಯನ್ನೂ ಕಿತ್ತುಕೊಂಡು ಓಡಿಸಿ ಬಿಡಿ” ಎಂದು ಅಪ್ಪಣೆ ಮಾಡಿದರು. ಮಂತ್ರಿಯು ಹಾಗೆಯೇ ಮಾಡಿದನು.
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...