Home / ಬಾಲ ಚಿಲುಮೆ / ಕಥೆ / ಕಾರುಗಳ್ಳೀ ವೀರಾಜಯ್ಯ

ಕಾರುಗಳ್ಳೀ ವೀರಾಜಯ್ಯ

ಹಿಂದೆ ಈ ನಮ್ಮ ಮೈಸೂರು ರಾಜ್ಯವನ್ನು ರಾಜವೊಡೆಯರು ಆಳುತ್ತಿದ್ದರು. ಆಗ ವೀರಾಜಯ್ಯನೆಂಬುವವನು ಒಬ್ಬನು ಇದ್ದನು. ಮಹಾರಾಜರು ಅವನು ಬದುಕಲೆಂದು ಕಾರುಗಳ್ಳಿಯನ್ನು ಅವನಿಗೆ ಮಾನ್ಯವಾಗಿ ಕೊಟ್ಟಿದ್ದರು.

ವೀರಾಜಯ್ಯನು ಬಹಳ ಜಂಭಗಾರನು. ಯಾರನ್ನು ಕಂಡರೂ ಲಕ್ಷ್ಯವಿರಲಿಲ್ಲ. ಒಂದು ದಿನ ಮಹಾರಾಜರ ಎದುರಿಗೆ ಪಲ್ಲಕ್ಕಿಯಲ್ಲಿ ಕುಳಿತುಕೊಂಡು ಆಟ್ಟಹಾಸದಿಂದ ಬಂದನು. ಮಹಾರಾಜರ ಮಗ್ಗುಲಲ್ಲಿ ಇದ್ದ ಇತರ ದೊಡ್ಡ ಅಧಿಕಾರಿಗಳಗಿ ಇದು ಸರಿ ಬೀಳಲಿಲ್ಲ. “ಮಹರಾಜರೆಂದರೆ ನಮಗೆಲ್ಲಾ ದೊಡ್ಡವರು. ಅವರ ಸನ್ನಿಧಿಯಲ್ಲಿ ನಯ ಭಯಗಳಂದ ನಡೆದುಕೊಳ್ಳಬೇಕು. ಇಲ್ಲವಾದರೆ ನಿನಗೆ ಒಳ್ಳೆಯದಾಗುವುದಿಲ್ಲ” ಎಂದು ಮಂತ್ರಿಯು ಹೇಳಿ ಕಳುಹಿಸಿದನು. ವೀರಾಜಯ್ಯನು ಕೇಳಲಿಲ್ಲ.

ಮತ್ತೊಂದು ಸಲವೂ ಹೀಗೆಯೇ ಆಯಿತು. ಆ ಸಲವೂ ಮಂತ್ರಿಯು ಮತ್ತೆ ಬೇಡವೆಂದು ಹೇಳಿದನು. ಇನ್ನೊಂದು ಸಲವೂ ಹೀಗೆಯೇ ಆಯಿತು. ಮಂತ್ರಿಯು ಮಹಾರಾಜರ ಬಳಿಗೆ ಹೋಗಿ “ಮಹಾಸ್ವಾಮಿಯವರು ಮನ್ನಿಸಬೇಕು. ವೀರಾಜಯ್ಯನು ಪ್ರಭುಗಳನ್ನು ಕಂಡರೆ ಅಲಕ್ಷ್ಯಮಾಡುತ್ತಿರುವನು. ಇತರರು ಇವನನ್ನು ನೋಡಿ ಕೆಟ್ಟು ಹೋದಾರು. ಅದರಿಂದ ಅವನಿಗೆ ಶಿಕ್ಷೆಯಾಗಬೇಕು” ಎಂದು ಅರಿಕೆ ಮಾಡಿದನು. ಮಹಾರಾಜರು “ಅಹುದು, ಎರಡು ಸಲ ಮನ್ನಿಸಿದರೂ ಅವನಿಗೆ ಬುದ್ಧಿ ಬರಲಿಲ್ಲ. ಅವನ ಮಾನ್ಯವನ್ನೂ ಪಲ್ಲಕ್ಕಿಯನ್ನೂ ಕಿತ್ತುಕೊಂಡು ಓಡಿಸಿ ಬಿಡಿ” ಎಂದು ಅಪ್ಪಣೆ ಮಾಡಿದರು. ಮಂತ್ರಿಯು ಹಾಗೆಯೇ ಮಾಡಿದನು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...