Home / ಬಾಲ ಚಿಲುಮೆ / ಕಥೆ / ಕಾರುಗಳ್ಳೀ ವೀರಾಜಯ್ಯ

ಕಾರುಗಳ್ಳೀ ವೀರಾಜಯ್ಯ

ಹಿಂದೆ ಈ ನಮ್ಮ ಮೈಸೂರು ರಾಜ್ಯವನ್ನು ರಾಜವೊಡೆಯರು ಆಳುತ್ತಿದ್ದರು. ಆಗ ವೀರಾಜಯ್ಯನೆಂಬುವವನು ಒಬ್ಬನು ಇದ್ದನು. ಮಹಾರಾಜರು ಅವನು ಬದುಕಲೆಂದು ಕಾರುಗಳ್ಳಿಯನ್ನು ಅವನಿಗೆ ಮಾನ್ಯವಾಗಿ ಕೊಟ್ಟಿದ್ದರು.

ವೀರಾಜಯ್ಯನು ಬಹಳ ಜಂಭಗಾರನು. ಯಾರನ್ನು ಕಂಡರೂ ಲಕ್ಷ್ಯವಿರಲಿಲ್ಲ. ಒಂದು ದಿನ ಮಹಾರಾಜರ ಎದುರಿಗೆ ಪಲ್ಲಕ್ಕಿಯಲ್ಲಿ ಕುಳಿತುಕೊಂಡು ಆಟ್ಟಹಾಸದಿಂದ ಬಂದನು. ಮಹಾರಾಜರ ಮಗ್ಗುಲಲ್ಲಿ ಇದ್ದ ಇತರ ದೊಡ್ಡ ಅಧಿಕಾರಿಗಳಗಿ ಇದು ಸರಿ ಬೀಳಲಿಲ್ಲ. “ಮಹರಾಜರೆಂದರೆ ನಮಗೆಲ್ಲಾ ದೊಡ್ಡವರು. ಅವರ ಸನ್ನಿಧಿಯಲ್ಲಿ ನಯ ಭಯಗಳಂದ ನಡೆದುಕೊಳ್ಳಬೇಕು. ಇಲ್ಲವಾದರೆ ನಿನಗೆ ಒಳ್ಳೆಯದಾಗುವುದಿಲ್ಲ” ಎಂದು ಮಂತ್ರಿಯು ಹೇಳಿ ಕಳುಹಿಸಿದನು. ವೀರಾಜಯ್ಯನು ಕೇಳಲಿಲ್ಲ.

ಮತ್ತೊಂದು ಸಲವೂ ಹೀಗೆಯೇ ಆಯಿತು. ಆ ಸಲವೂ ಮಂತ್ರಿಯು ಮತ್ತೆ ಬೇಡವೆಂದು ಹೇಳಿದನು. ಇನ್ನೊಂದು ಸಲವೂ ಹೀಗೆಯೇ ಆಯಿತು. ಮಂತ್ರಿಯು ಮಹಾರಾಜರ ಬಳಿಗೆ ಹೋಗಿ “ಮಹಾಸ್ವಾಮಿಯವರು ಮನ್ನಿಸಬೇಕು. ವೀರಾಜಯ್ಯನು ಪ್ರಭುಗಳನ್ನು ಕಂಡರೆ ಅಲಕ್ಷ್ಯಮಾಡುತ್ತಿರುವನು. ಇತರರು ಇವನನ್ನು ನೋಡಿ ಕೆಟ್ಟು ಹೋದಾರು. ಅದರಿಂದ ಅವನಿಗೆ ಶಿಕ್ಷೆಯಾಗಬೇಕು” ಎಂದು ಅರಿಕೆ ಮಾಡಿದನು. ಮಹಾರಾಜರು “ಅಹುದು, ಎರಡು ಸಲ ಮನ್ನಿಸಿದರೂ ಅವನಿಗೆ ಬುದ್ಧಿ ಬರಲಿಲ್ಲ. ಅವನ ಮಾನ್ಯವನ್ನೂ ಪಲ್ಲಕ್ಕಿಯನ್ನೂ ಕಿತ್ತುಕೊಂಡು ಓಡಿಸಿ ಬಿಡಿ” ಎಂದು ಅಪ್ಪಣೆ ಮಾಡಿದರು. ಮಂತ್ರಿಯು ಹಾಗೆಯೇ ಮಾಡಿದನು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...