ನೇರಿಲು ಹಣ್ಣಿನ ಕಥೆ

ನೇರಿಲು ಹಣ್ಣಿನ ಕಥೆ

ಪಾಂಡವರು ಹನ್ನೆರಡು ವರ್‍ಷ ಕಾಡಿನಲ್ಲಿ ವಾಸ ಮಾಡಿದರು. ಆಗ ಒಂದು ದಿನ ಭೀಮಸೇನನು, ಆನೆಯ ಗಾತ್ರವಿದ್ದ ಒಂದು ನೇರಿಲು ಹಣ್ಣನ್ನು ತಂದನು. ಧರ್‍ಮರಾಯನು ಅಷ್ಟು ದೊಡ್ಡ ಹಣ್ಣನ್ನು ಕಂದು ಆಶ್ಚರ್‍ಯಪಟ್ಟು, “ಇದೇನು? ಇಷ್ಟು ದೊಡ್ಡದಾಗಿರುವುದಲ್ಲ!” ಎಂದು ಅಲ್ಲಿದ್ದ ಋಷಿಗಳನ್ನು ವಿಚಾರಿಸಿದನು. ಅವರು, “ಅಯ್ಯಾ! ಇದು ಕಣ್ವಋಷಿಯ ಆಶ್ರಮದ ಹಣ್ಣು. ಆಲ್ಲಿ ವರ್‍ಷಕ್ಕೊಂದು ಸಲ ಇಂತಹುದೊಂದು ದೊಡ್ಡ ಹಣ್ಣಾಗುವುದು. ಆಗ ಋಷಿಯು ಕಣ್ಣು ಬಿಟ್ಟು ಕೈ ಚಾಚುವನು. ಹಣ್ಣು ಹೋಗಿ ಅವನ ಕೈಯ್ಯಲ್ಲಿ ಕೂಡುವುದು. ಆತನು ಇದನ್ನು ತಿಂದು, ಮತ್ತೆ ತಪಸ್ಸಿಗೆ ಕುಳಿತುಕೊಳ್ಳುವನು” ಎಂದರು.

ಇದನ್ನು ಕೇಳಿ ಧರ್‍ಮರಾಯನಿಗೆ “ಭೀಮನು ಋಷಿಯ ಹಣ್ಣನ್ನು ತಂದು ಬಿಟ್ಟನು. ಇನ್ನಾತನು ಕಣ್ಣು ತೆರೆವ ವೇಳಗೆ ಹಣ್ಣು ಇಲ್ಲದೆ ಇರಲು, ಆತನು ಎಷ್ಟುನೊಂದು ಕೊಳ್ಳುವನೋ! ಇನ್ನೇನು ಗತಿ?” ಎಂದು ದಿಗಿಲಾಯಿತು. ಕೂಡಲೆ ತನಗೆ ದಿಕ್ಕಾದ ಶ್ರೀಕೃಷ್ಣನನ್ನು ನೆನೆದನು. ಆತನೂ ಮಾಡುತ್ತಿದ್ದ ಕೆಲಸವನ್ನು ಬಿಟ್ಟುಬಂದನು. ಕೂಡಲೆ ಧರ್‍ಮರಾಯನು “ಕೃಷ್ಣಾ! ಹೀಗಾಗಿ ಹೋಯಿತು. ಭೀಮನು ಹಣ್ಣು ತಂದು ಬಿಟ್ಟನು. ಇನ್ನೇನು ಗತಿ” ಎಂದು ಅತ್ತನು. ಶ್ರೀಕೃಷ್ಣನು “ಇರಲಿ. ಬಾ” ಎಂದು ಅವರನ್ನೆಲ್ಲಾ ಆ ಮರದ ಬಳಿಗೆ ಕರೆದುಕೊಂಡು ಹೋದನು. ಅಲ್ಲಿ ಪಾಂಡವರನ್ನು ಕುರಿತು “ಅಯ್ಯಾ! ಈ ಹಣ್ಣು ಮೊದಲಿನಂತೆ ತೊಟ್ಟಿಗೆ ಸೇರಿತೊಳ್ಳಬೇಕಾದರೆ, ನಿಮ್ಮ ನಿಮ್ಮ ಮನಸ್ಸಿನಲ್ಲಿರುವುದನ್ನು ಮುಚ್ಚು ಮರೆಯಿಲ್ಲದೆ ಹೇಳಬೇಕು. ನೀವು ಹಾಗೆ ದಿಟ ಹೇಳಿದರೆ, ಅದು ತಾನೇ ಹೋಗಿ ತೊಟ್ಟಿಗೆ ಸೇರಿಕೊಳ್ಳುತ್ತದೆ. ಸುಳ್ಳು ಹೇಳಿದರೆ ಬಿದ್ದು ಹೋಗುತ್ತದೆ” ಎಂದನು.

ಎಲ್ಲರೂ “ಹಾಗೆ ಆಗಲಿ” ಎಂದರು. ಧರ್ಮರಾಯನು ತನ್ನ ಮನಸ್ಸಿನಲ್ಲಿದ್ದುದನ್ನು ಹೇಳಿದನು. ಹಣ್ಣು ಒಂದಾಳು ಎತ್ತರ ಮೇಲಕ್ಕೆ ಹೋಯಿತು. ಭೀಮನು ನಿಜವನ್ನೇ ನುಡಿದನು. ಇನ್ನೂ ಒಂದಾಳು ಎತ್ತರ ಮೇಲಕ್ಕೆ ಹೋಯಿತು. ಅರ್‍ಜುನನು ಸತ್ಯವನ್ನು ಆಡಿದನು. ಮತ್ತೂ ಒಂದಾಳು ಎತ್ತರ ಹತ್ತಿತು. ನಕುಲ ಸಹದೇವರೂ ನಿಶ್ಚಯವನ್ನೇ ನುಡಿದರು. ದ್ರೌಪದಿಯೂ ತನ್ನ ಮನಸ್ಸಿನಲ್ಲಿ ಇದ್ದುದನ್ನು ಕೊಂಚವೂ ಮುಚ್ಚದೆ ಹೇಳಿದಳು. ಹಣ್ಣು ಹೋಗಿ ತನ್ನ ಎಡೆಯನ್ನು ಸೇರಿತು.

ಪಾಂಡವರು ಬದುಕಿದೆವೆಂದು ಕೃಷ್ಣನನ್ನು ಕೊಂಡಾಡಿದರು. ಕೃಷ್ಣನು “ಅಯ್ಯಾ! ನನ್ನನ್ನು ಏಕೆ ಹೊಗಳುವಿರಿ? ಇದು ನೀವು ಆಡಿದ ದಿಟದ ಮಹಿಮೆ!” ಎಂದು ಹೇಳಿದನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೇಡತಿ
Next post ನೇಪಥ್ಯದಿಂದ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…