Home / ಬಾಲ ಚಿಲುಮೆ / ಕಥೆ / ನೇರಿಲು ಹಣ್ಣಿನ ಕಥೆ

ನೇರಿಲು ಹಣ್ಣಿನ ಕಥೆ

ಪಾಂಡವರು ಹನ್ನೆರಡು ವರ್‍ಷ ಕಾಡಿನಲ್ಲಿ ವಾಸ ಮಾಡಿದರು. ಆಗ ಒಂದು ದಿನ ಭೀಮಸೇನನು, ಆನೆಯ ಗಾತ್ರವಿದ್ದ ಒಂದು ನೇರಿಲು ಹಣ್ಣನ್ನು ತಂದನು. ಧರ್‍ಮರಾಯನು ಅಷ್ಟು ದೊಡ್ಡ ಹಣ್ಣನ್ನು ಕಂದು ಆಶ್ಚರ್‍ಯಪಟ್ಟು, “ಇದೇನು? ಇಷ್ಟು ದೊಡ್ಡದಾಗಿರುವುದಲ್ಲ!” ಎಂದು ಅಲ್ಲಿದ್ದ ಋಷಿಗಳನ್ನು ವಿಚಾರಿಸಿದನು. ಅವರು, “ಅಯ್ಯಾ! ಇದು ಕಣ್ವಋಷಿಯ ಆಶ್ರಮದ ಹಣ್ಣು. ಆಲ್ಲಿ ವರ್‍ಷಕ್ಕೊಂದು ಸಲ ಇಂತಹುದೊಂದು ದೊಡ್ಡ ಹಣ್ಣಾಗುವುದು. ಆಗ ಋಷಿಯು ಕಣ್ಣು ಬಿಟ್ಟು ಕೈ ಚಾಚುವನು. ಹಣ್ಣು ಹೋಗಿ ಅವನ ಕೈಯ್ಯಲ್ಲಿ ಕೂಡುವುದು. ಆತನು ಇದನ್ನು ತಿಂದು, ಮತ್ತೆ ತಪಸ್ಸಿಗೆ ಕುಳಿತುಕೊಳ್ಳುವನು” ಎಂದರು.

ಇದನ್ನು ಕೇಳಿ ಧರ್‍ಮರಾಯನಿಗೆ “ಭೀಮನು ಋಷಿಯ ಹಣ್ಣನ್ನು ತಂದು ಬಿಟ್ಟನು. ಇನ್ನಾತನು ಕಣ್ಣು ತೆರೆವ ವೇಳಗೆ ಹಣ್ಣು ಇಲ್ಲದೆ ಇರಲು, ಆತನು ಎಷ್ಟುನೊಂದು ಕೊಳ್ಳುವನೋ! ಇನ್ನೇನು ಗತಿ?” ಎಂದು ದಿಗಿಲಾಯಿತು. ಕೂಡಲೆ ತನಗೆ ದಿಕ್ಕಾದ ಶ್ರೀಕೃಷ್ಣನನ್ನು ನೆನೆದನು. ಆತನೂ ಮಾಡುತ್ತಿದ್ದ ಕೆಲಸವನ್ನು ಬಿಟ್ಟುಬಂದನು. ಕೂಡಲೆ ಧರ್‍ಮರಾಯನು “ಕೃಷ್ಣಾ! ಹೀಗಾಗಿ ಹೋಯಿತು. ಭೀಮನು ಹಣ್ಣು ತಂದು ಬಿಟ್ಟನು. ಇನ್ನೇನು ಗತಿ” ಎಂದು ಅತ್ತನು. ಶ್ರೀಕೃಷ್ಣನು “ಇರಲಿ. ಬಾ” ಎಂದು ಅವರನ್ನೆಲ್ಲಾ ಆ ಮರದ ಬಳಿಗೆ ಕರೆದುಕೊಂಡು ಹೋದನು. ಅಲ್ಲಿ ಪಾಂಡವರನ್ನು ಕುರಿತು “ಅಯ್ಯಾ! ಈ ಹಣ್ಣು ಮೊದಲಿನಂತೆ ತೊಟ್ಟಿಗೆ ಸೇರಿತೊಳ್ಳಬೇಕಾದರೆ, ನಿಮ್ಮ ನಿಮ್ಮ ಮನಸ್ಸಿನಲ್ಲಿರುವುದನ್ನು ಮುಚ್ಚು ಮರೆಯಿಲ್ಲದೆ ಹೇಳಬೇಕು. ನೀವು ಹಾಗೆ ದಿಟ ಹೇಳಿದರೆ, ಅದು ತಾನೇ ಹೋಗಿ ತೊಟ್ಟಿಗೆ ಸೇರಿಕೊಳ್ಳುತ್ತದೆ. ಸುಳ್ಳು ಹೇಳಿದರೆ ಬಿದ್ದು ಹೋಗುತ್ತದೆ” ಎಂದನು.

ಎಲ್ಲರೂ “ಹಾಗೆ ಆಗಲಿ” ಎಂದರು. ಧರ್ಮರಾಯನು ತನ್ನ ಮನಸ್ಸಿನಲ್ಲಿದ್ದುದನ್ನು ಹೇಳಿದನು. ಹಣ್ಣು ಒಂದಾಳು ಎತ್ತರ ಮೇಲಕ್ಕೆ ಹೋಯಿತು. ಭೀಮನು ನಿಜವನ್ನೇ ನುಡಿದನು. ಇನ್ನೂ ಒಂದಾಳು ಎತ್ತರ ಮೇಲಕ್ಕೆ ಹೋಯಿತು. ಅರ್‍ಜುನನು ಸತ್ಯವನ್ನು ಆಡಿದನು. ಮತ್ತೂ ಒಂದಾಳು ಎತ್ತರ ಹತ್ತಿತು. ನಕುಲ ಸಹದೇವರೂ ನಿಶ್ಚಯವನ್ನೇ ನುಡಿದರು. ದ್ರೌಪದಿಯೂ ತನ್ನ ಮನಸ್ಸಿನಲ್ಲಿ ಇದ್ದುದನ್ನು ಕೊಂಚವೂ ಮುಚ್ಚದೆ ಹೇಳಿದಳು. ಹಣ್ಣು ಹೋಗಿ ತನ್ನ ಎಡೆಯನ್ನು ಸೇರಿತು.

ಪಾಂಡವರು ಬದುಕಿದೆವೆಂದು ಕೃಷ್ಣನನ್ನು ಕೊಂಡಾಡಿದರು. ಕೃಷ್ಣನು “ಅಯ್ಯಾ! ನನ್ನನ್ನು ಏಕೆ ಹೊಗಳುವಿರಿ? ಇದು ನೀವು ಆಡಿದ ದಿಟದ ಮಹಿಮೆ!” ಎಂದು ಹೇಳಿದನು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...