Home / ಬಾಲ ಚಿಲುಮೆ / ಕಥೆ / ನೇರಿಲು ಹಣ್ಣಿನ ಕಥೆ

ನೇರಿಲು ಹಣ್ಣಿನ ಕಥೆ

ಪಾಂಡವರು ಹನ್ನೆರಡು ವರ್‍ಷ ಕಾಡಿನಲ್ಲಿ ವಾಸ ಮಾಡಿದರು. ಆಗ ಒಂದು ದಿನ ಭೀಮಸೇನನು, ಆನೆಯ ಗಾತ್ರವಿದ್ದ ಒಂದು ನೇರಿಲು ಹಣ್ಣನ್ನು ತಂದನು. ಧರ್‍ಮರಾಯನು ಅಷ್ಟು ದೊಡ್ಡ ಹಣ್ಣನ್ನು ಕಂದು ಆಶ್ಚರ್‍ಯಪಟ್ಟು, “ಇದೇನು? ಇಷ್ಟು ದೊಡ್ಡದಾಗಿರುವುದಲ್ಲ!” ಎಂದು ಅಲ್ಲಿದ್ದ ಋಷಿಗಳನ್ನು ವಿಚಾರಿಸಿದನು. ಅವರು, “ಅಯ್ಯಾ! ಇದು ಕಣ್ವಋಷಿಯ ಆಶ್ರಮದ ಹಣ್ಣು. ಆಲ್ಲಿ ವರ್‍ಷಕ್ಕೊಂದು ಸಲ ಇಂತಹುದೊಂದು ದೊಡ್ಡ ಹಣ್ಣಾಗುವುದು. ಆಗ ಋಷಿಯು ಕಣ್ಣು ಬಿಟ್ಟು ಕೈ ಚಾಚುವನು. ಹಣ್ಣು ಹೋಗಿ ಅವನ ಕೈಯ್ಯಲ್ಲಿ ಕೂಡುವುದು. ಆತನು ಇದನ್ನು ತಿಂದು, ಮತ್ತೆ ತಪಸ್ಸಿಗೆ ಕುಳಿತುಕೊಳ್ಳುವನು” ಎಂದರು.

ಇದನ್ನು ಕೇಳಿ ಧರ್‍ಮರಾಯನಿಗೆ “ಭೀಮನು ಋಷಿಯ ಹಣ್ಣನ್ನು ತಂದು ಬಿಟ್ಟನು. ಇನ್ನಾತನು ಕಣ್ಣು ತೆರೆವ ವೇಳಗೆ ಹಣ್ಣು ಇಲ್ಲದೆ ಇರಲು, ಆತನು ಎಷ್ಟುನೊಂದು ಕೊಳ್ಳುವನೋ! ಇನ್ನೇನು ಗತಿ?” ಎಂದು ದಿಗಿಲಾಯಿತು. ಕೂಡಲೆ ತನಗೆ ದಿಕ್ಕಾದ ಶ್ರೀಕೃಷ್ಣನನ್ನು ನೆನೆದನು. ಆತನೂ ಮಾಡುತ್ತಿದ್ದ ಕೆಲಸವನ್ನು ಬಿಟ್ಟುಬಂದನು. ಕೂಡಲೆ ಧರ್‍ಮರಾಯನು “ಕೃಷ್ಣಾ! ಹೀಗಾಗಿ ಹೋಯಿತು. ಭೀಮನು ಹಣ್ಣು ತಂದು ಬಿಟ್ಟನು. ಇನ್ನೇನು ಗತಿ” ಎಂದು ಅತ್ತನು. ಶ್ರೀಕೃಷ್ಣನು “ಇರಲಿ. ಬಾ” ಎಂದು ಅವರನ್ನೆಲ್ಲಾ ಆ ಮರದ ಬಳಿಗೆ ಕರೆದುಕೊಂಡು ಹೋದನು. ಅಲ್ಲಿ ಪಾಂಡವರನ್ನು ಕುರಿತು “ಅಯ್ಯಾ! ಈ ಹಣ್ಣು ಮೊದಲಿನಂತೆ ತೊಟ್ಟಿಗೆ ಸೇರಿತೊಳ್ಳಬೇಕಾದರೆ, ನಿಮ್ಮ ನಿಮ್ಮ ಮನಸ್ಸಿನಲ್ಲಿರುವುದನ್ನು ಮುಚ್ಚು ಮರೆಯಿಲ್ಲದೆ ಹೇಳಬೇಕು. ನೀವು ಹಾಗೆ ದಿಟ ಹೇಳಿದರೆ, ಅದು ತಾನೇ ಹೋಗಿ ತೊಟ್ಟಿಗೆ ಸೇರಿಕೊಳ್ಳುತ್ತದೆ. ಸುಳ್ಳು ಹೇಳಿದರೆ ಬಿದ್ದು ಹೋಗುತ್ತದೆ” ಎಂದನು.

ಎಲ್ಲರೂ “ಹಾಗೆ ಆಗಲಿ” ಎಂದರು. ಧರ್ಮರಾಯನು ತನ್ನ ಮನಸ್ಸಿನಲ್ಲಿದ್ದುದನ್ನು ಹೇಳಿದನು. ಹಣ್ಣು ಒಂದಾಳು ಎತ್ತರ ಮೇಲಕ್ಕೆ ಹೋಯಿತು. ಭೀಮನು ನಿಜವನ್ನೇ ನುಡಿದನು. ಇನ್ನೂ ಒಂದಾಳು ಎತ್ತರ ಮೇಲಕ್ಕೆ ಹೋಯಿತು. ಅರ್‍ಜುನನು ಸತ್ಯವನ್ನು ಆಡಿದನು. ಮತ್ತೂ ಒಂದಾಳು ಎತ್ತರ ಹತ್ತಿತು. ನಕುಲ ಸಹದೇವರೂ ನಿಶ್ಚಯವನ್ನೇ ನುಡಿದರು. ದ್ರೌಪದಿಯೂ ತನ್ನ ಮನಸ್ಸಿನಲ್ಲಿ ಇದ್ದುದನ್ನು ಕೊಂಚವೂ ಮುಚ್ಚದೆ ಹೇಳಿದಳು. ಹಣ್ಣು ಹೋಗಿ ತನ್ನ ಎಡೆಯನ್ನು ಸೇರಿತು.

ಪಾಂಡವರು ಬದುಕಿದೆವೆಂದು ಕೃಷ್ಣನನ್ನು ಕೊಂಡಾಡಿದರು. ಕೃಷ್ಣನು “ಅಯ್ಯಾ! ನನ್ನನ್ನು ಏಕೆ ಹೊಗಳುವಿರಿ? ಇದು ನೀವು ಆಡಿದ ದಿಟದ ಮಹಿಮೆ!” ಎಂದು ಹೇಳಿದನು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...