Home / ಬಾಲ ಚಿಲುಮೆ / ಕಥೆ / ನೇರಿಲು ಹಣ್ಣಿನ ಕಥೆ

ನೇರಿಲು ಹಣ್ಣಿನ ಕಥೆ

ಪಾಂಡವರು ಹನ್ನೆರಡು ವರ್‍ಷ ಕಾಡಿನಲ್ಲಿ ವಾಸ ಮಾಡಿದರು. ಆಗ ಒಂದು ದಿನ ಭೀಮಸೇನನು, ಆನೆಯ ಗಾತ್ರವಿದ್ದ ಒಂದು ನೇರಿಲು ಹಣ್ಣನ್ನು ತಂದನು. ಧರ್‍ಮರಾಯನು ಅಷ್ಟು ದೊಡ್ಡ ಹಣ್ಣನ್ನು ಕಂದು ಆಶ್ಚರ್‍ಯಪಟ್ಟು, “ಇದೇನು? ಇಷ್ಟು ದೊಡ್ಡದಾಗಿರುವುದಲ್ಲ!” ಎಂದು ಅಲ್ಲಿದ್ದ ಋಷಿಗಳನ್ನು ವಿಚಾರಿಸಿದನು. ಅವರು, “ಅಯ್ಯಾ! ಇದು ಕಣ್ವಋಷಿಯ ಆಶ್ರಮದ ಹಣ್ಣು. ಆಲ್ಲಿ ವರ್‍ಷಕ್ಕೊಂದು ಸಲ ಇಂತಹುದೊಂದು ದೊಡ್ಡ ಹಣ್ಣಾಗುವುದು. ಆಗ ಋಷಿಯು ಕಣ್ಣು ಬಿಟ್ಟು ಕೈ ಚಾಚುವನು. ಹಣ್ಣು ಹೋಗಿ ಅವನ ಕೈಯ್ಯಲ್ಲಿ ಕೂಡುವುದು. ಆತನು ಇದನ್ನು ತಿಂದು, ಮತ್ತೆ ತಪಸ್ಸಿಗೆ ಕುಳಿತುಕೊಳ್ಳುವನು” ಎಂದರು.

ಇದನ್ನು ಕೇಳಿ ಧರ್‍ಮರಾಯನಿಗೆ “ಭೀಮನು ಋಷಿಯ ಹಣ್ಣನ್ನು ತಂದು ಬಿಟ್ಟನು. ಇನ್ನಾತನು ಕಣ್ಣು ತೆರೆವ ವೇಳಗೆ ಹಣ್ಣು ಇಲ್ಲದೆ ಇರಲು, ಆತನು ಎಷ್ಟುನೊಂದು ಕೊಳ್ಳುವನೋ! ಇನ್ನೇನು ಗತಿ?” ಎಂದು ದಿಗಿಲಾಯಿತು. ಕೂಡಲೆ ತನಗೆ ದಿಕ್ಕಾದ ಶ್ರೀಕೃಷ್ಣನನ್ನು ನೆನೆದನು. ಆತನೂ ಮಾಡುತ್ತಿದ್ದ ಕೆಲಸವನ್ನು ಬಿಟ್ಟುಬಂದನು. ಕೂಡಲೆ ಧರ್‍ಮರಾಯನು “ಕೃಷ್ಣಾ! ಹೀಗಾಗಿ ಹೋಯಿತು. ಭೀಮನು ಹಣ್ಣು ತಂದು ಬಿಟ್ಟನು. ಇನ್ನೇನು ಗತಿ” ಎಂದು ಅತ್ತನು. ಶ್ರೀಕೃಷ್ಣನು “ಇರಲಿ. ಬಾ” ಎಂದು ಅವರನ್ನೆಲ್ಲಾ ಆ ಮರದ ಬಳಿಗೆ ಕರೆದುಕೊಂಡು ಹೋದನು. ಅಲ್ಲಿ ಪಾಂಡವರನ್ನು ಕುರಿತು “ಅಯ್ಯಾ! ಈ ಹಣ್ಣು ಮೊದಲಿನಂತೆ ತೊಟ್ಟಿಗೆ ಸೇರಿತೊಳ್ಳಬೇಕಾದರೆ, ನಿಮ್ಮ ನಿಮ್ಮ ಮನಸ್ಸಿನಲ್ಲಿರುವುದನ್ನು ಮುಚ್ಚು ಮರೆಯಿಲ್ಲದೆ ಹೇಳಬೇಕು. ನೀವು ಹಾಗೆ ದಿಟ ಹೇಳಿದರೆ, ಅದು ತಾನೇ ಹೋಗಿ ತೊಟ್ಟಿಗೆ ಸೇರಿಕೊಳ್ಳುತ್ತದೆ. ಸುಳ್ಳು ಹೇಳಿದರೆ ಬಿದ್ದು ಹೋಗುತ್ತದೆ” ಎಂದನು.

ಎಲ್ಲರೂ “ಹಾಗೆ ಆಗಲಿ” ಎಂದರು. ಧರ್ಮರಾಯನು ತನ್ನ ಮನಸ್ಸಿನಲ್ಲಿದ್ದುದನ್ನು ಹೇಳಿದನು. ಹಣ್ಣು ಒಂದಾಳು ಎತ್ತರ ಮೇಲಕ್ಕೆ ಹೋಯಿತು. ಭೀಮನು ನಿಜವನ್ನೇ ನುಡಿದನು. ಇನ್ನೂ ಒಂದಾಳು ಎತ್ತರ ಮೇಲಕ್ಕೆ ಹೋಯಿತು. ಅರ್‍ಜುನನು ಸತ್ಯವನ್ನು ಆಡಿದನು. ಮತ್ತೂ ಒಂದಾಳು ಎತ್ತರ ಹತ್ತಿತು. ನಕುಲ ಸಹದೇವರೂ ನಿಶ್ಚಯವನ್ನೇ ನುಡಿದರು. ದ್ರೌಪದಿಯೂ ತನ್ನ ಮನಸ್ಸಿನಲ್ಲಿ ಇದ್ದುದನ್ನು ಕೊಂಚವೂ ಮುಚ್ಚದೆ ಹೇಳಿದಳು. ಹಣ್ಣು ಹೋಗಿ ತನ್ನ ಎಡೆಯನ್ನು ಸೇರಿತು.

ಪಾಂಡವರು ಬದುಕಿದೆವೆಂದು ಕೃಷ್ಣನನ್ನು ಕೊಂಡಾಡಿದರು. ಕೃಷ್ಣನು “ಅಯ್ಯಾ! ನನ್ನನ್ನು ಏಕೆ ಹೊಗಳುವಿರಿ? ಇದು ನೀವು ಆಡಿದ ದಿಟದ ಮಹಿಮೆ!” ಎಂದು ಹೇಳಿದನು.
*****

Tagged:

Leave a Reply

Your email address will not be published. Required fields are marked *

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...