Home / ಬಾಲ ಚಿಲುಮೆ / ಕಥೆ / ಶಿಲಾದಿತ್ಯ

ಶಿಲಾದಿತ್ಯ

ಶಿಲಾದಿತ್ಯ ವಲ್ಲಭಿಯ ದೊರೆಯು. ಆತನ ಅರಮನೆಯಲ್ಲಿ ಒಂದು ಸರೋವರವಿತ್ತು. ಆತನು ಯುದ್ಧಕ್ಕೆ ಯೋಗಬೇಕಾದರೆ ತಾನು ಮಿಂದು ಮಡಿಯುಟ್ಟು ಶುಚಿಯಾಗಿ ಬಂದು ಆ ಕೊಳವನ್ನು ಪೂಜಿಸುವನು. ಆಗ ಅಲ್ಲಿಂದ ಏಳುಬಣ್ಣದ ಕುದುರೆಯು ಎದ್ದು ಮೇಲಕ್ಕೆ ಬರುವದು. ಆತನು ಅದನ್ನು ಹತ್ತಿ ಯುದ್ಧಕ್ಕೆ ಹೋಗುವನು. ಅಲ್ಲಿ ಯಾರ ಆಯುಧವೂ ಆತನನ್ನು ಗಾಯ ಪಡಿಸಲಾರದು. ಆತನು ಎಲ್ಲರನ್ನೂ ಗೆದ್ದು ಬಿಡುವನು. ಹೀಗೆಯೇ ಆತನು ಎಷ್ಟೋ ಯುದ್ಧಗಳನ್ನು ಗೆದ್ದು ಚಕ್ರವರ್‍ತಿಯಾಗಿದ್ದನು.

ಒಂದು ಸಲ ಅರಸನು ಅಲ್ಲಿ ಪೂಜೆಗೆ ಹೋಗುವಾಗ ಹಗೆಯವನು ಒಬ್ಬನು ಬಂದು ಕೊಳಕು ಬಟ್ಟೆಯ ಚೂರು ಒಂದನ್ನು ಇಟ್ಟುಕೊಂಡಿದ್ದು, ಅದನ್ನು ಆತನಿಗೆ ಕಾಣದಂತೆ ಉಡಿಯಲ್ಲಿ ಹಾಕಿಬಿಟ್ಟನು. ಅರಸನು ಎಂದಿನಂತೆ ಭಕ್ತಿಯಿಂದ ಪೂಜೆ ಮಾಡಿದರೂ ಏಳು ಬಣ್ಣದ ಕುದುರೆಯು ಬರಲಿಲ್ಲ. ಓಹೋ! ಏನೋ ಮೈಲಿಗೆಯಾಗಿರಬಹುದೆಂದು ನೋಡಲು, ಆತನು ಆರಿಯದಂತೆಯೇ ಆತನ ಉಡಿಯಲ್ಲಿ ಒಂದು ಚೂರು ಮೈಲಿಗೆ ಬಟ್ಟೆಯಿತ್ತು. ಅರಸನಿಗೆ ಆಗ ಕೊಳದಿಂದ ಕುದುರೆಯು ಬರದೆ ಇರಲು ಕಾರಣವೇನು ಎಂಬುದು ತಿಳಿಯಿತು. ಮತ್ತೆ ಮಿಂದು ಮಡಿಯುಟ್ಟು ಪೂಜಿಸಿದನು. ಆದರೂ ಕುದುರೆಯು ಬರಲಿಲ್ಲ. ಒಂದು ಸಲ ಮೈಲಿಗೆ ಸೋಕಿ, ಕೊಳದ ಮಹಿಮೆಯೇ ಹೋಗಿಬಿಟ್ಟಿತು.

ಅಂದಿನ ದಿನವೂ ಯುದ್ಧವಿತ್ತು. ಶಿಲಾದಿತ್ಯನೂ ಹೋದನು. ಆದರೆ ಆತನಿಗೆ ಅಂದಿನ ಯುದ್ಧವೇ ಕೊನೆಯಾಯಿತು. ಆತನು ಅಂದಿನ ರಣರಂಗದಿಂದ ಹಿಂತಿರುಗಲೇ ಇಲ್ಲ. ಆತನು ಅಲ್ಲಿಯೇ ಮಡಿದು ಹೋದನು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...