Home / ಬಾಲ ಚಿಲುಮೆ / ಕಥೆ / ಶಿಲಾದಿತ್ಯ

ಶಿಲಾದಿತ್ಯ

ಶಿಲಾದಿತ್ಯ ವಲ್ಲಭಿಯ ದೊರೆಯು. ಆತನ ಅರಮನೆಯಲ್ಲಿ ಒಂದು ಸರೋವರವಿತ್ತು. ಆತನು ಯುದ್ಧಕ್ಕೆ ಯೋಗಬೇಕಾದರೆ ತಾನು ಮಿಂದು ಮಡಿಯುಟ್ಟು ಶುಚಿಯಾಗಿ ಬಂದು ಆ ಕೊಳವನ್ನು ಪೂಜಿಸುವನು. ಆಗ ಅಲ್ಲಿಂದ ಏಳುಬಣ್ಣದ ಕುದುರೆಯು ಎದ್ದು ಮೇಲಕ್ಕೆ ಬರುವದು. ಆತನು ಅದನ್ನು ಹತ್ತಿ ಯುದ್ಧಕ್ಕೆ ಹೋಗುವನು. ಅಲ್ಲಿ ಯಾರ ಆಯುಧವೂ ಆತನನ್ನು ಗಾಯ ಪಡಿಸಲಾರದು. ಆತನು ಎಲ್ಲರನ್ನೂ ಗೆದ್ದು ಬಿಡುವನು. ಹೀಗೆಯೇ ಆತನು ಎಷ್ಟೋ ಯುದ್ಧಗಳನ್ನು ಗೆದ್ದು ಚಕ್ರವರ್‍ತಿಯಾಗಿದ್ದನು.

ಒಂದು ಸಲ ಅರಸನು ಅಲ್ಲಿ ಪೂಜೆಗೆ ಹೋಗುವಾಗ ಹಗೆಯವನು ಒಬ್ಬನು ಬಂದು ಕೊಳಕು ಬಟ್ಟೆಯ ಚೂರು ಒಂದನ್ನು ಇಟ್ಟುಕೊಂಡಿದ್ದು, ಅದನ್ನು ಆತನಿಗೆ ಕಾಣದಂತೆ ಉಡಿಯಲ್ಲಿ ಹಾಕಿಬಿಟ್ಟನು. ಅರಸನು ಎಂದಿನಂತೆ ಭಕ್ತಿಯಿಂದ ಪೂಜೆ ಮಾಡಿದರೂ ಏಳು ಬಣ್ಣದ ಕುದುರೆಯು ಬರಲಿಲ್ಲ. ಓಹೋ! ಏನೋ ಮೈಲಿಗೆಯಾಗಿರಬಹುದೆಂದು ನೋಡಲು, ಆತನು ಆರಿಯದಂತೆಯೇ ಆತನ ಉಡಿಯಲ್ಲಿ ಒಂದು ಚೂರು ಮೈಲಿಗೆ ಬಟ್ಟೆಯಿತ್ತು. ಅರಸನಿಗೆ ಆಗ ಕೊಳದಿಂದ ಕುದುರೆಯು ಬರದೆ ಇರಲು ಕಾರಣವೇನು ಎಂಬುದು ತಿಳಿಯಿತು. ಮತ್ತೆ ಮಿಂದು ಮಡಿಯುಟ್ಟು ಪೂಜಿಸಿದನು. ಆದರೂ ಕುದುರೆಯು ಬರಲಿಲ್ಲ. ಒಂದು ಸಲ ಮೈಲಿಗೆ ಸೋಕಿ, ಕೊಳದ ಮಹಿಮೆಯೇ ಹೋಗಿಬಿಟ್ಟಿತು.

ಅಂದಿನ ದಿನವೂ ಯುದ್ಧವಿತ್ತು. ಶಿಲಾದಿತ್ಯನೂ ಹೋದನು. ಆದರೆ ಆತನಿಗೆ ಅಂದಿನ ಯುದ್ಧವೇ ಕೊನೆಯಾಯಿತು. ಆತನು ಅಂದಿನ ರಣರಂಗದಿಂದ ಹಿಂತಿರುಗಲೇ ಇಲ್ಲ. ಆತನು ಅಲ್ಲಿಯೇ ಮಡಿದು ಹೋದನು.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...