ಬಡಗಿಗಳೂ ಆನೆಯೂ

ಬಡಗಿಗಳೂ ಆನೆಯೂ

ಕಪಿಲಾನದಿಯ ತೀರದಲ್ಲಿ ಒಂದು ಕಾಡು. ಬಡಗಿಗಳು ಅಲ್ಲಿ ಮರವನ್ನು ಕುಯ್ಯುತ್ತಿದ್ದರು. ಎಲ್ಲರೂ ತಮ್ಮ ತಮ್ಮ ಪಾಡಿಗೆ ತಾವು ತಾವು ಕೆಲಸ ಮಾಡುತ್ತಿದ್ದರು. ಆಗ ಆನೆಯು ಘೀಳಿಟ್ಟಿಂತೆ ಆಗಲು ಎಲ್ಲರಿಗೂ ಹೆದರಿಕೆ ಆಯಿತು. ಮತ್ತೂ ಒಂದು ಸಲ ಹಾಗೆಯೇ ಅದೇ ಶಬ್ದ ಕೇಳಿಸಿತು. ಎಲ್ಲಿಯವರು ಅಲ್ಲಲ್ಲೇ ಅಡಗಿಕೊಂಡು ಬಿಟ್ಟರು.

ಒಂದು ದೊಡ್ಡ ಕೊಂಬಿನಾನೆ ಕುಂಟುತ್ತಾ ಬಂತು. ಅದಕ್ಕೆ ಬಲಗಡೆಯ ಮುಂಗಾಲು ಮುಂದಕ್ಕೆ ಇಡುವುದಕ್ಕೂ ಆಗದಷ್ಟು ಗಾತ್ರ ಬಾತುಕೊಂಡಿತ್ತು. ಬಲು ಕಸ್ಟದಿಂದ ಆನೆಯು ಆ ಬಡಗಿಗಳು ಇರುವ ತಾವಿಗೆ ಬಂತು. ಇನ್ನು ಮುಂದೆ ಹೋಗಲಾರದೆ ಮಲಗಿಕೊಂಡು ಬಿಟ್ಟಿತು. ಅದು ನೋವಿನಿಂದ ನರಳುತ್ತಿತ್ತು.

ಆನೆಯು ಬಾಧೆ ಪಡುತ್ತಿರುವುದು ಬಡಗಿಗಳಿಗೆ ತಿಳಿಯಿತು. ಮನಸ್ಸು ನಿಲ್ಲದೆ ಆದುದು ಆಗಲಿ ಎಂದು ಅವಿತಿದ್ದವನು ಆನೆಯ ಬಳಿಗೆ ಹೋದನು. ಅವನು ಹತ್ತಿರ ಬಂದರೂ ಆನೆಯು ಏನೂ ಮಾಡಲಿಲ್ಲ. ಅವನಿಗೆ ಧೈರ್‍ಯವಾಗಿ, ಇನ್ನೂ ಹತ್ತಿರಕ್ಕೆ ಹೋದನು. ಆನೆಯು ಅವನ ಮುಖವನ್ನು ನೋಡಿ, ಕಣ್ಣೀರು ಬಿಟ್ಟಿತು. ಅದನ್ನು ನೋಡಿದರೆ “ನೀನು ಬಂದು ಏನಾಗಿದೆ ನೋಡು” ಎಂದು ಹೇಳುವ ಹಾಗೆ ತೋರಿತು. ಅದೂ ಒಂದು ಸಲ ನರಳಿತು. ಇನ್ನು ಸೈರಿಸುವುದು ಅಸಾಧ್ಯವಾಗಿ, ಊದಿದ ಕಾಲಿನ ಬಳಿಗೆ ಹೋದನು. ಎಡಗೈಯಲ್ಲಿ ಜೀವವನ್ನು ಹಿಡಿದುಕೊಂಡು, ಆ ಕಾಲನ್ನು ಹಿಡಿದು ನೋಡಿದರೆ. ಸುಮಾರು ಒಂದು ಗೇಣುದ್ದ, ಒಂದು ಹೆಬ್ಬೆರಳು ದಪ್ಪ ಇರುವ ಸಿಬಿರು ಚುಚ್ಚಿಕೊಂಡಿರುವುದು ಕಂಡು ಬಂತು. ಆದರಿಂದ ಆನೆಗೆ ಎಷ್ಟು ನೋವಾಗಿರಬಹುದೋ ಎಂದು ಅವನಿಗೆ ಕಣ್ಣಿನಲ್ಲಿ ನೀರು ಬಂತು. ಕೂಡಲೇ ತನ್ನವರನ್ನು ಕರೆದು ಬಿಸಿ ನೀರು ಕಾಯಿಸಿ ತರಿಸಿ ಅದನ್ನು ಹಾಕಿ ತೊಳೆದನು. ಆನೆಗೂ ಕೊಂಚ ಹಿತವಾಗಿ, ಒಂದು ನಿಟ್ಟುಸಿರು ಬಿಟ್ಟಿತು. ಹಾಗೇ ಇನ್ನೂ ಸ್ವಲ್ಪ ಬಿಸಿನೀರು ಹಾಕುತ್ತಿದ್ದು, ಕೊನೆಗೆ ಆ ಸಿಬಿರನ್ನು ಕಿತ್ತುಬಿಟ್ಟಿನು. ಸಿಬಿರು ಈಚೆಗೆ ಬಂದು ಬಿಟ್ಟಿತು. ಆ ವೇಳೆಗೆ ಧೈರ್‍ಯಗೊಂಡು ಎಲ್ಲರೂ ಅಲ್ಲಿಗೆ ಬಂದರು. ಆ ಗಾಯದಲ್ಲಿದ್ದ ಕೀವು ರಕ್ತಗಳನ ಚೆನ್ನಾಗಿ ತೊಳೆದು ಅದಕ್ಕೆ ತಮ್ಮಲ್ಲಿದ್ದ ಔಷಧಿಯನ್ನು ಹಾಕಿದರು.

ಆ ಹುಣ್ಣು ಆರುವುದಕ್ಕೆ ಒಂದು ತಿಂಗಳು ಹಿಡಿಯಿತು, ಅದುವರೆಗೂ ಆನೆಯು ಅಲ್ಲಿಯೇ ಇತ್ತು. ಬಡಗಿಗಳೂ ಅದಕ್ಕೆ ಅಲ್ಲಿಗೇ ಸೊಪ್ಪು ತಂದು ಹಾಕುತ್ತಿದ್ದರು. ಜತೆಗೆ ‘ಪಾಪ!’ ಎಂದು ತಾವು ತಂದಿದ್ದ ಬುತ್ತಿಯಲ್ಲೂ ಕೊಂಚಕೊಂಚ ಕೊಡುತ್ತಿದ್ದರು. ಆನೆಗೆ ಬಡಗಿಗಳಲ್ಲಿ ಪ್ರೀತಿ ಹುಟ್ಟಿತು. ಆನೆಯು ಅವರನ್ನು ಬಿಟ್ಟು ಹೋಗಲಾರದೆ ಆಲಿಯೇ ನಿಂತು ಬಿಟ್ಟಿತು. ಅವರಿಗಾಗಿ ಏನಾದರೂ ಕೆಲಸ ಮಾಡಿಕೊಡಬೇಕೆಂದು ದಿಮ್ಮಿಗಳನ್ನು ಸಾಗಿಸುವುದು, ಮರ ಎಳೆಯುವುದು ಮೊದಲಾದ ಕೆಲಸಗಳನ್ನು ಮಾಡಿಕೊಡುತ್ತಿತ್ತು. ಬಡಗಿಗಳ ಮಕ್ಕಳು ಯಾವತ್ತಾದರೂ ಬಂದರೆ ಅವರನ್ನು ಬೆನ್ನಿನ ಮೇಲೆ ಕೂಡಿಸಿಕೊಂಡು ಓಡಾಡಿಸುತ್ತಿತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಡಗಿ
Next post ನೀ ಮುದುಕಿಯಾದಾಗ

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…