Home / ಕವನ / ಕವಿತೆ / ನಟ್ಟಿರುಳಿನಲ್ಲೊಂದು ಸಂವಾದ

ನಟ್ಟಿರುಳಿನಲ್ಲೊಂದು ಸಂವಾದ

ಬೆಳಕು

ಬೇಡವಾದರೆ
ಇಲ್ಲ
ಇಲ್ಲಿ ಏನೂ ಆಗಿಯೇ ಇಲ್ಲ
ಆಗಿದ್ದು ಆಟವಷ್ಟೇ
ಲೆಕ್ಕವಲ್ಲ
ಜಮಾ ಆಗಿಲ್ಲ
ಎನ್ನುತ್ತಾ ಯಾವುದಕ್ಕೂ ಬದ್ಧವಾಗದೇ
ಎಲ್ಲಾ ಕೊಡವಿ
ಎದ್ದು ಹೋಗಿಬಿಡಬಹುದು
ಕತ್ತಲು

ಬೇಡದ್ದೆಲ್ಲಾ ಒಪ್ಪಿ
ತೋಳ್ತೆರೆದು ಅಪ್ಪಿ
ತುಂಬಿ ತುಂಬಿ
ಮೇಲೇರಿ ಬರುವ
ಎಲ್ಲ ಅಮಲುಗಳ
ಒಳಕದುಮಿ ಗುದ್ದಿ
ಹೇಗೆ ಬರೆಯುವುದು
ಪರಂಪರಾಗತವಲ್ಲದ
ಶಾಸ್ತ್ರೋಕ್ತವಲ್ಲದ
ಛಂದೋಬದ್ಧವಲ್ಲದ
ಆದರೂ ಅರ್ಥಪೂರ್ಣ ಕವಿತೆ!

ಬೆಳಕು

ಬಿಡು ಮನಸು ಮಾಡಿದರೆ
ಸಮುದ್ರಗಳನ್ನೇ ದಾಟಿಬಿಡಬಹುದು

ಕತ್ತಲು

ಹೌದು. ಆದರೆ ಎಲ್ಲಕ್ಕೂ ಮೊದಲು
ದಾಟಬೇಕು ಹೊಸಿಲು !
ಹೊಸಿಲಿನೊಳಗಿಂದ ಜಗ್ಗುವ
ಗೋಜಲು ಬೇರುಗಳು
ಹೊರಗಿನಿಂದ ಸೆಳೆಯುವ
ಆಕಾರವಿಲ್ಲದ ಅಸ್ಪಷ್ಟಾಕಾರಗಳು.

ಬೆಳಕು

ಇಲ್ಲಿ ಯಾವುದೂ
ಪರಿಪೂರ್ಣ ಆಕಾರವಲ್ಲ
ನಿರಾಕಾರಕ್ಕೆ ಆಕಾರ ಕೊಡುವುದೇ
ಕರಗಳ ಕೆಲಸವೆಲ್ಲ
ಇತಿಹಾಸವಾಗಿ ಬಿಡುತ್ತದೆ
ಆಕಾರವಾದದ್ದೆಲ್ಲ.

ಕತ್ತಲು

ಹೊಸಿಲು ದಾಟಿದವರಿಗೆಲ್ಲ
ಒಂದೋ ಪ್ರಪಾತ
ಇಲ್ಲವೇ ಆಕಾಶ
ಬೇರೆಲ್ಲಿದೆ ಅವಕಾಶ?
ಎರಡು ಅತಿಗಳ ನಡುವೆ
ಇದೆಯೇ ಎಲ್ಲೆ ಮೀರುವ ಮಿತಿ?

ಬೆಳಕು

ಸವಕಲಾದ ಬೊಟ್ಟಿನ
ತೂಗುವ ತಕ್ಕಡಿಯ
ಅಳತೆಗಾಗಿಯೇ
ಬದುಕಲಾಗುವುದಿಲ್ಲ
ಅತೀತರೆಲ್ಲ ಅಳತೆಗೆ ಸಿಕ್ಕುವುದಿಲ್ಲ
ಅಳತೆಗಳ ಮಿತಿಗೆ ಬಿದ್ದವರು
ಬಿಡು ಅತೀತರಾಗುವುದಿಲ್ಲ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...