Home / ಕವನ / ಕವಿತೆ / ನಟ್ಟಿರುಳಿನಲ್ಲೊಂದು ಸಂವಾದ

ನಟ್ಟಿರುಳಿನಲ್ಲೊಂದು ಸಂವಾದ

ಬೆಳಕು

ಬೇಡವಾದರೆ
ಇಲ್ಲ
ಇಲ್ಲಿ ಏನೂ ಆಗಿಯೇ ಇಲ್ಲ
ಆಗಿದ್ದು ಆಟವಷ್ಟೇ
ಲೆಕ್ಕವಲ್ಲ
ಜಮಾ ಆಗಿಲ್ಲ
ಎನ್ನುತ್ತಾ ಯಾವುದಕ್ಕೂ ಬದ್ಧವಾಗದೇ
ಎಲ್ಲಾ ಕೊಡವಿ
ಎದ್ದು ಹೋಗಿಬಿಡಬಹುದು
ಕತ್ತಲು

ಬೇಡದ್ದೆಲ್ಲಾ ಒಪ್ಪಿ
ತೋಳ್ತೆರೆದು ಅಪ್ಪಿ
ತುಂಬಿ ತುಂಬಿ
ಮೇಲೇರಿ ಬರುವ
ಎಲ್ಲ ಅಮಲುಗಳ
ಒಳಕದುಮಿ ಗುದ್ದಿ
ಹೇಗೆ ಬರೆಯುವುದು
ಪರಂಪರಾಗತವಲ್ಲದ
ಶಾಸ್ತ್ರೋಕ್ತವಲ್ಲದ
ಛಂದೋಬದ್ಧವಲ್ಲದ
ಆದರೂ ಅರ್ಥಪೂರ್ಣ ಕವಿತೆ!

ಬೆಳಕು

ಬಿಡು ಮನಸು ಮಾಡಿದರೆ
ಸಮುದ್ರಗಳನ್ನೇ ದಾಟಿಬಿಡಬಹುದು

ಕತ್ತಲು

ಹೌದು. ಆದರೆ ಎಲ್ಲಕ್ಕೂ ಮೊದಲು
ದಾಟಬೇಕು ಹೊಸಿಲು !
ಹೊಸಿಲಿನೊಳಗಿಂದ ಜಗ್ಗುವ
ಗೋಜಲು ಬೇರುಗಳು
ಹೊರಗಿನಿಂದ ಸೆಳೆಯುವ
ಆಕಾರವಿಲ್ಲದ ಅಸ್ಪಷ್ಟಾಕಾರಗಳು.

ಬೆಳಕು

ಇಲ್ಲಿ ಯಾವುದೂ
ಪರಿಪೂರ್ಣ ಆಕಾರವಲ್ಲ
ನಿರಾಕಾರಕ್ಕೆ ಆಕಾರ ಕೊಡುವುದೇ
ಕರಗಳ ಕೆಲಸವೆಲ್ಲ
ಇತಿಹಾಸವಾಗಿ ಬಿಡುತ್ತದೆ
ಆಕಾರವಾದದ್ದೆಲ್ಲ.

ಕತ್ತಲು

ಹೊಸಿಲು ದಾಟಿದವರಿಗೆಲ್ಲ
ಒಂದೋ ಪ್ರಪಾತ
ಇಲ್ಲವೇ ಆಕಾಶ
ಬೇರೆಲ್ಲಿದೆ ಅವಕಾಶ?
ಎರಡು ಅತಿಗಳ ನಡುವೆ
ಇದೆಯೇ ಎಲ್ಲೆ ಮೀರುವ ಮಿತಿ?

ಬೆಳಕು

ಸವಕಲಾದ ಬೊಟ್ಟಿನ
ತೂಗುವ ತಕ್ಕಡಿಯ
ಅಳತೆಗಾಗಿಯೇ
ಬದುಕಲಾಗುವುದಿಲ್ಲ
ಅತೀತರೆಲ್ಲ ಅಳತೆಗೆ ಸಿಕ್ಕುವುದಿಲ್ಲ
ಅಳತೆಗಳ ಮಿತಿಗೆ ಬಿದ್ದವರು
ಬಿಡು ಅತೀತರಾಗುವುದಿಲ್ಲ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...