Home / ಕವನ / ಕವಿತೆ / ನಟ್ಟಿರುಳಿನಲ್ಲೊಂದು ಸಂವಾದ

ನಟ್ಟಿರುಳಿನಲ್ಲೊಂದು ಸಂವಾದ

ಬೆಳಕು

ಬೇಡವಾದರೆ
ಇಲ್ಲ
ಇಲ್ಲಿ ಏನೂ ಆಗಿಯೇ ಇಲ್ಲ
ಆಗಿದ್ದು ಆಟವಷ್ಟೇ
ಲೆಕ್ಕವಲ್ಲ
ಜಮಾ ಆಗಿಲ್ಲ
ಎನ್ನುತ್ತಾ ಯಾವುದಕ್ಕೂ ಬದ್ಧವಾಗದೇ
ಎಲ್ಲಾ ಕೊಡವಿ
ಎದ್ದು ಹೋಗಿಬಿಡಬಹುದು
ಕತ್ತಲು

ಬೇಡದ್ದೆಲ್ಲಾ ಒಪ್ಪಿ
ತೋಳ್ತೆರೆದು ಅಪ್ಪಿ
ತುಂಬಿ ತುಂಬಿ
ಮೇಲೇರಿ ಬರುವ
ಎಲ್ಲ ಅಮಲುಗಳ
ಒಳಕದುಮಿ ಗುದ್ದಿ
ಹೇಗೆ ಬರೆಯುವುದು
ಪರಂಪರಾಗತವಲ್ಲದ
ಶಾಸ್ತ್ರೋಕ್ತವಲ್ಲದ
ಛಂದೋಬದ್ಧವಲ್ಲದ
ಆದರೂ ಅರ್ಥಪೂರ್ಣ ಕವಿತೆ!

ಬೆಳಕು

ಬಿಡು ಮನಸು ಮಾಡಿದರೆ
ಸಮುದ್ರಗಳನ್ನೇ ದಾಟಿಬಿಡಬಹುದು

ಕತ್ತಲು

ಹೌದು. ಆದರೆ ಎಲ್ಲಕ್ಕೂ ಮೊದಲು
ದಾಟಬೇಕು ಹೊಸಿಲು !
ಹೊಸಿಲಿನೊಳಗಿಂದ ಜಗ್ಗುವ
ಗೋಜಲು ಬೇರುಗಳು
ಹೊರಗಿನಿಂದ ಸೆಳೆಯುವ
ಆಕಾರವಿಲ್ಲದ ಅಸ್ಪಷ್ಟಾಕಾರಗಳು.

ಬೆಳಕು

ಇಲ್ಲಿ ಯಾವುದೂ
ಪರಿಪೂರ್ಣ ಆಕಾರವಲ್ಲ
ನಿರಾಕಾರಕ್ಕೆ ಆಕಾರ ಕೊಡುವುದೇ
ಕರಗಳ ಕೆಲಸವೆಲ್ಲ
ಇತಿಹಾಸವಾಗಿ ಬಿಡುತ್ತದೆ
ಆಕಾರವಾದದ್ದೆಲ್ಲ.

ಕತ್ತಲು

ಹೊಸಿಲು ದಾಟಿದವರಿಗೆಲ್ಲ
ಒಂದೋ ಪ್ರಪಾತ
ಇಲ್ಲವೇ ಆಕಾಶ
ಬೇರೆಲ್ಲಿದೆ ಅವಕಾಶ?
ಎರಡು ಅತಿಗಳ ನಡುವೆ
ಇದೆಯೇ ಎಲ್ಲೆ ಮೀರುವ ಮಿತಿ?

ಬೆಳಕು

ಸವಕಲಾದ ಬೊಟ್ಟಿನ
ತೂಗುವ ತಕ್ಕಡಿಯ
ಅಳತೆಗಾಗಿಯೇ
ಬದುಕಲಾಗುವುದಿಲ್ಲ
ಅತೀತರೆಲ್ಲ ಅಳತೆಗೆ ಸಿಕ್ಕುವುದಿಲ್ಲ
ಅಳತೆಗಳ ಮಿತಿಗೆ ಬಿದ್ದವರು
ಬಿಡು ಅತೀತರಾಗುವುದಿಲ್ಲ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...