Home / ಬಾಲ ಚಿಲುಮೆ / ಕಥೆ / ರಾಮೂ ಶ್ಯಾಮೂ

ರಾಮೂ ಶ್ಯಾಮೂ

ರಾಮೂ ಶ್ಯಾಮೂ ಇಬ್ಬರೂ ಒಳ್ಳೆಯ ಸಂಗಾತಿಗಳು. ಯಾವಾಗಲು ಅವರು ಜತೆಯಲ್ಲೇ ಇರುವರು. ಅಡುವಾಗ ಇಬ್ಬರೂ ಒಟ್ಟಿಗೆ ಆಡುವರು. ಓದುವಾಗ ಇಬ್ಬರೂ ಓದುವರು ಆದರೂ ಇವರಿಬ್ಬರಿಗೂ ಒಂದು ಭೇದವಿತ್ತು. ರಾಮು ಹೊತ್ತಿಗೆ ಸರಿಯಾಗಿ ಶಾಲೆಗೆ ಬರುವನು. ಶ್ಯಾಮು ಹೊತ್ತು ಹೋಗಿಯೇ ಬರುವನು. ಎಂಟು ಘಂಟೆಗೆ ಬರಬೇಕಾದರೆ ಎಂಟೂವರೆಗೆ ಬರುವನು.

ಮಹಾರಾಜರ ವರ್‍ಧಂತಿ ಬಂತು. ಉಪಾಧ್ಯಾಯರು ಬಂದು “ಈ ದಿನ ಎಲ್ಲರಿಗೂ ಲಾಡು ಕೊಡುತ್ತದೆ. ಎಲ್ಲರೂ ಮೂರು ಘಂಟೆಯ ವೇಳೆಗೆ ಸರಿಯಾಗಿ ಇಲ್ಲಿಗೆ ಬಂದು ಇರಬೇಕು” ಎಂದು ಹೇಳಿದರು.

ರಾಮೂಗೆ ಗೊತ್ತು ಶ್ಯಾಮು ಹೊತ್ತಾಗಿ ಬರುತ್ತಾನೆ ಎಂದು. ಆದರೆ ಶ್ಯಾಮೂಗೆ ಲಾಡು ತಪ್ಪಿ ಹೋಗುವುದು ಅವನಿಗೆ ಇಷ್ಟವಿಲ್ಲ. ಅದಕ್ಕಾಗಿ ಅವನು ಶ್ಯಾಮು ಮನೆಗೆ ಒಂದೂವರೆಗೇ ಹೋದನು, ಅವನು ಇನ್ನೂ ಊಟವೇ ಮಾಡಿರಲಿಲ್ಲ. “ಶಾಲೆಗೆ ಬರುವುದಿಲ್ಲವೇನೋ? ಲಾಡು ಕೊಡುತ್ತಾರೆ” ಎಂದನು. “ಹೌದಪ್ಪ! ಬೇಗ ಹೋಗಬೇಕು” ಎಂದು ಶ್ಯಾಮೂ ಅವಸರಪಟ್ಟು, ಬೇಗ ಬೇಗ ಊಟಮಾಡಿದನು. ಮಡಿಬಟ್ಟೆಗಳನ್ನು ಉಟ್ಟು ತೊಟ್ಟು ಕೊಂಡನು. ರಾಮೂ ಜತೆಯಲ್ಲಿ ಶಾಲೆಗೆ ಬಂದನು. ಅವನಿಗೆ, ಏನೋ ಬಹಳ ಜಾಗ್ರತೆ ಬಂದಂತೆ ಇದ್ದರೂ, ಎರಡೂ ಮುಕ್ಕಾಲು ಘಂಟೆಯಾಗಿತ್ತು. ಶ್ಯಾಮು ಹೊತ್ತಿಗೆ ಸರಿಯಾಗಿ ಬಂದುದು ಎಲ್ಲರಿಗೂ ಆಶ್ಚರ್‍ಯ. ಮೂರು ಘಂಟೆಗೆ ಸರಿಯಾಗಿ ಘಂಟೆಯು ಬಾರಿಸಿತು. ಹುಡುಗರೆಲ್ಲರೂ ಬಂದು ಶಾಲೆಯ ಅಂಗಳದಲ್ಲಿ ಸೇರಿದರು. ಉಪಾಧ್ಯಾಯರು ಬಾಗಿಲಲ್ಲಿ ನಿಂತು, ಒಬ್ಬೊಬ್ಬರಿಗೆ ಒಂದೊಂದು ಲಾಡು ಕೊಟ್ಟು ಕಳುಹಿಸಿದರು.

ರಾಮೂ ಶ್ಯಾಮೂ ಲಾಡುವನ್ನು ಈಸಿ ಕೊಂಡು ಈಚೆಗೆ ಬಂದರು. ಬಾಗಿಲಲ್ಲಿ ಭೀಮನು ಅಳುತ್ತ ನಿಂತಿದ್ದನು. ಉಪಾಧ್ಯಾಯರು “ನಿನಗೆ ಅದೇ ಶಿಕ್ಷೆ! ಕೊಡುವುದಿಲ್ಲ ಹೋಗು” ಎನ್ನುತ್ತಿದ್ದರು. ಭೀಮನು ಅಳುತ್ತಿದ್ದನು. ರಾಮುವು “ಶ್ಯಾಮೂ! ನೋಡಿದೆಯಾ? ನಿನಗೂ ಹೀಗೆ ಆಗಬೇಕಾಗಿತ್ತು. ನೀನು ನಿತ್ಯ ಬರುತ್ತಿದ್ದ ಹಾಗೆ ಇವನು ಹೊತ್ತುಮೀರಿ ಬಂದನು. ಇವನಿಗೆ ಲಾಡು ತಪ್ಪಿ ಹೋಯಿತು” ಎಂದನು.

ಆವತ್ತು ಅವನಿಗೆ ತಾನು ಮಾಡುತ್ತಿದ್ದ ತಪ್ಪು ತಿಳಿಯಿತು. “ನಿತ್ಯವೂ ಹೊತ್ತಿಗೆ ಸರಿಯಾಗಿ ಶಾಲೆಗೆ ಹೋಗು” ಎಂದು ತಂದೆ ತಾಯಿಗಳು ಹೇಳುತ್ತಿದ್ದರು ಅವನೂ ಹೂ ಎಂದುಕೊಂಡಿದ್ದನು ಅಷ್ಟೆ. ಆದರೆ ಆವತ್ತು ಅವನಿಗೆ ತಿಳಿಯಿತು. ಇನ್ನು ಮೇಲೆ ಯಾವತ್ತೂ ಹೊತ್ತುಹೋಗಿ ಶಾಲೆಗೆ ಹೋಗುವುದಿಲ್ಲ ‌ಎಂದು ಮಸ್ಸಿನಲ್ಲಿ ಗಟ್ಟಿ ಮಾಡಿದನು. ಅದೇ ಮೇರೆಗೆ ಹೊತ್ತಿಗೆ ಸರಿಯಾಗಿ ಬರಲಾರಂಭಿಸಿದನು.

ಈಗ ಅದೇ ಶ್ಯಾಮು ದೊಡ್ಡ ವ್ಯಾಪಾರಿಯಾಗಿದ್ದಾನೆ. ಈಗ ಅವನನನ್ನು ಕೇಳಿದರೆ “ಹುಡುಗರು ಯಾವಾಗಲೂ ಹೊತ್ತು ಮೀರಿ ಹೋಗಬಾರದು” ಎಂದು ತನ್ನ ಕಥೆಯನ್ನು ಹೇಳುತ್ತಾನೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...