Home / ಬಾಲ ಚಿಲುಮೆ / ಕಥೆ / ರಾಮೂ ಶ್ಯಾಮೂ

ರಾಮೂ ಶ್ಯಾಮೂ

ರಾಮೂ ಶ್ಯಾಮೂ ಇಬ್ಬರೂ ಒಳ್ಳೆಯ ಸಂಗಾತಿಗಳು. ಯಾವಾಗಲು ಅವರು ಜತೆಯಲ್ಲೇ ಇರುವರು. ಅಡುವಾಗ ಇಬ್ಬರೂ ಒಟ್ಟಿಗೆ ಆಡುವರು. ಓದುವಾಗ ಇಬ್ಬರೂ ಓದುವರು ಆದರೂ ಇವರಿಬ್ಬರಿಗೂ ಒಂದು ಭೇದವಿತ್ತು. ರಾಮು ಹೊತ್ತಿಗೆ ಸರಿಯಾಗಿ ಶಾಲೆಗೆ ಬರುವನು. ಶ್ಯಾಮು ಹೊತ್ತು ಹೋಗಿಯೇ ಬರುವನು. ಎಂಟು ಘಂಟೆಗೆ ಬರಬೇಕಾದರೆ ಎಂಟೂವರೆಗೆ ಬರುವನು.

ಮಹಾರಾಜರ ವರ್‍ಧಂತಿ ಬಂತು. ಉಪಾಧ್ಯಾಯರು ಬಂದು “ಈ ದಿನ ಎಲ್ಲರಿಗೂ ಲಾಡು ಕೊಡುತ್ತದೆ. ಎಲ್ಲರೂ ಮೂರು ಘಂಟೆಯ ವೇಳೆಗೆ ಸರಿಯಾಗಿ ಇಲ್ಲಿಗೆ ಬಂದು ಇರಬೇಕು” ಎಂದು ಹೇಳಿದರು.

ರಾಮೂಗೆ ಗೊತ್ತು ಶ್ಯಾಮು ಹೊತ್ತಾಗಿ ಬರುತ್ತಾನೆ ಎಂದು. ಆದರೆ ಶ್ಯಾಮೂಗೆ ಲಾಡು ತಪ್ಪಿ ಹೋಗುವುದು ಅವನಿಗೆ ಇಷ್ಟವಿಲ್ಲ. ಅದಕ್ಕಾಗಿ ಅವನು ಶ್ಯಾಮು ಮನೆಗೆ ಒಂದೂವರೆಗೇ ಹೋದನು, ಅವನು ಇನ್ನೂ ಊಟವೇ ಮಾಡಿರಲಿಲ್ಲ. “ಶಾಲೆಗೆ ಬರುವುದಿಲ್ಲವೇನೋ? ಲಾಡು ಕೊಡುತ್ತಾರೆ” ಎಂದನು. “ಹೌದಪ್ಪ! ಬೇಗ ಹೋಗಬೇಕು” ಎಂದು ಶ್ಯಾಮೂ ಅವಸರಪಟ್ಟು, ಬೇಗ ಬೇಗ ಊಟಮಾಡಿದನು. ಮಡಿಬಟ್ಟೆಗಳನ್ನು ಉಟ್ಟು ತೊಟ್ಟು ಕೊಂಡನು. ರಾಮೂ ಜತೆಯಲ್ಲಿ ಶಾಲೆಗೆ ಬಂದನು. ಅವನಿಗೆ, ಏನೋ ಬಹಳ ಜಾಗ್ರತೆ ಬಂದಂತೆ ಇದ್ದರೂ, ಎರಡೂ ಮುಕ್ಕಾಲು ಘಂಟೆಯಾಗಿತ್ತು. ಶ್ಯಾಮು ಹೊತ್ತಿಗೆ ಸರಿಯಾಗಿ ಬಂದುದು ಎಲ್ಲರಿಗೂ ಆಶ್ಚರ್‍ಯ. ಮೂರು ಘಂಟೆಗೆ ಸರಿಯಾಗಿ ಘಂಟೆಯು ಬಾರಿಸಿತು. ಹುಡುಗರೆಲ್ಲರೂ ಬಂದು ಶಾಲೆಯ ಅಂಗಳದಲ್ಲಿ ಸೇರಿದರು. ಉಪಾಧ್ಯಾಯರು ಬಾಗಿಲಲ್ಲಿ ನಿಂತು, ಒಬ್ಬೊಬ್ಬರಿಗೆ ಒಂದೊಂದು ಲಾಡು ಕೊಟ್ಟು ಕಳುಹಿಸಿದರು.

ರಾಮೂ ಶ್ಯಾಮೂ ಲಾಡುವನ್ನು ಈಸಿ ಕೊಂಡು ಈಚೆಗೆ ಬಂದರು. ಬಾಗಿಲಲ್ಲಿ ಭೀಮನು ಅಳುತ್ತ ನಿಂತಿದ್ದನು. ಉಪಾಧ್ಯಾಯರು “ನಿನಗೆ ಅದೇ ಶಿಕ್ಷೆ! ಕೊಡುವುದಿಲ್ಲ ಹೋಗು” ಎನ್ನುತ್ತಿದ್ದರು. ಭೀಮನು ಅಳುತ್ತಿದ್ದನು. ರಾಮುವು “ಶ್ಯಾಮೂ! ನೋಡಿದೆಯಾ? ನಿನಗೂ ಹೀಗೆ ಆಗಬೇಕಾಗಿತ್ತು. ನೀನು ನಿತ್ಯ ಬರುತ್ತಿದ್ದ ಹಾಗೆ ಇವನು ಹೊತ್ತುಮೀರಿ ಬಂದನು. ಇವನಿಗೆ ಲಾಡು ತಪ್ಪಿ ಹೋಯಿತು” ಎಂದನು.

ಆವತ್ತು ಅವನಿಗೆ ತಾನು ಮಾಡುತ್ತಿದ್ದ ತಪ್ಪು ತಿಳಿಯಿತು. “ನಿತ್ಯವೂ ಹೊತ್ತಿಗೆ ಸರಿಯಾಗಿ ಶಾಲೆಗೆ ಹೋಗು” ಎಂದು ತಂದೆ ತಾಯಿಗಳು ಹೇಳುತ್ತಿದ್ದರು ಅವನೂ ಹೂ ಎಂದುಕೊಂಡಿದ್ದನು ಅಷ್ಟೆ. ಆದರೆ ಆವತ್ತು ಅವನಿಗೆ ತಿಳಿಯಿತು. ಇನ್ನು ಮೇಲೆ ಯಾವತ್ತೂ ಹೊತ್ತುಹೋಗಿ ಶಾಲೆಗೆ ಹೋಗುವುದಿಲ್ಲ ‌ಎಂದು ಮಸ್ಸಿನಲ್ಲಿ ಗಟ್ಟಿ ಮಾಡಿದನು. ಅದೇ ಮೇರೆಗೆ ಹೊತ್ತಿಗೆ ಸರಿಯಾಗಿ ಬರಲಾರಂಭಿಸಿದನು.

ಈಗ ಅದೇ ಶ್ಯಾಮು ದೊಡ್ಡ ವ್ಯಾಪಾರಿಯಾಗಿದ್ದಾನೆ. ಈಗ ಅವನನನ್ನು ಕೇಳಿದರೆ “ಹುಡುಗರು ಯಾವಾಗಲೂ ಹೊತ್ತು ಮೀರಿ ಹೋಗಬಾರದು” ಎಂದು ತನ್ನ ಕಥೆಯನ್ನು ಹೇಳುತ್ತಾನೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...