Home / ಲೇಖನ / ವಿಜ್ಞಾನ / ಅಪಾಯಗಳಿಗೆ ಮುನ್ಸೂಚನೆ ನೀಡುವ ಪ್ರಾಣಿಲೋಕ!

ಅಪಾಯಗಳಿಗೆ ಮುನ್ಸೂಚನೆ ನೀಡುವ ಪ್ರಾಣಿಲೋಕ!

ಇದ್ದಕ್ಕಿದ್ದಂತೆ ನೈಸರ್‍ಗಿಕ ವಿಕೋಪಗಳಾಗಿ ಸಾವಿರಾರು ಜನ ಸತ್ತುಹೋದರು. ನೂರಾರು ಜನ ಭೂಕಂಪದಲ್ಲಿ ಮಡಿದರು, ಸಮುದ್ರ ಬಿರುಗಾಳಿಯಿಂದ ನೌಕೆಗಳು ಅಪ್ಪಳಿಸಿದವು! ಮುಂತಾದ ವರದಿಗಳನ್ನು ನೋಡುತ್ತೇವೆ. ಇದೆಲ್ಲ ಅನಿರಿಕ್ಷಿತ ಮತ್ತು ಇದ್ವಕ್ಕಿದ್ದಂತೆ ಆಕ್ರಮಿಸಿಕೊಂಡ ಆಘಾತವೆಂದು ಅಂದು ಕೊಳ್ಳುತ್ತವೆ. ಆದರೆ ಇಂಥಹ ಅಪಾಯಗಳನ್ನು ಮುಂಚಿತವಾಗಿಯೇ ಮನಗಂಡ ಅನೇಕ ಪಕ್ಷಿ ಪ್ರಾಣಿಗಳು ನಮಗೆ ಅನೇಕ ಸೂಚನೆಗಳನ್ನು ನೀಡುತ್ತವೆ. ನಾವು ಗಮನಿಸುವುದೇ ಇಲ್ಲ. ಈಗ ನೋಡಿ ಪ್ರಾಣಿ, ಪಕ್ಷಿ, ಜಲಚರಗಳು ಅಪಾಯಗಳ ಮುನ್ಸೂಚನೆಯನ್ನು ಹೀಗೆ ನೀಡುತ್ತದೆ. (ವೈಜ್ಞಾನಿಕವಾಗಿ ಕಂಡು ಹಿಡಿಯಲಾಗಿದೆ.) ಹಾವು ಮತ್ತು ಇಲಿಗಳು ತಮ್ಮ ಬಿಲಗಳನ್ನು ಬಿಟ್ಟು ದಿಕ್ಕೆಟ್ಟು ಓಡುತ್ತವೆ. ಮೀನುಗಳು ನೀರಿನಿಂದ ಹಾರುತ್ತವೆ. ಆಕ್ವೇರಿಯಂ ಮೀನುಗಳು ಡಿಕ್ಕಿ ಹೊಡೆಯುತ್ತವೆ. ಆಮೆಗಳು ಪಲ್ಟಿ ಹೊಡೆಯುತ್ತ ಧಾವಿಸುತ್ತದೆ. ದನ, ಕರು, ಕುರಿ, ಮತ್ತು ಕುದುರೆಗಳು ತಾವು ಇರುವ ಸ್ಥಳಕ್ಕೆ ಹೋಗುವದಿಲ್ಲ, ಕೋಳಿಮರಿಗಳು ಗಿಡ ಏರುತ್ತವೆ. ಬಾತು ಕೋಳಿಗಳು ನೀರಿಗೆ ಹೋಗಲು ನಿರಾಕರಿಸುತ್ತವೆ. ನಾಯಿಗಳು ವಿನಾಕಾರಣ ಬೊಗಳುತ್ತವೆ, ಹಂದಿಗಳು ಪರಸ್ಪರ ಕಚ್ಚಾಡುತ್ತವೆ. ಜಿಂಕೆಗಳು ದಿಕ್ಕೆಟ್ಟು ಓಡುತ್ತವೆ ಮತ್ತು ಜಿರಳೆಗಳು ವೃತ್ತಾಕಾರವಾಗಿ ಸುತ್ತುತ್ತವೆ. ಇದೆಲ್ಲ ಕ್ರಿಯೆ ನಡೆಯುವದು ಭೂಕಂಪದ ಮುನ್ಸೂಚನೆಯನ್ನು ತಿಳಿಸುತ್ತದೆ. ಜ್ವಾಲಾಮುಖಿ, ಬಿರುಗಾಳಿ, ಅಥವಾ ನೈಸರ್‍ಗಿಕ ವಿಕೋಪಗಳಾದರೆ, ಜೆಲ್ಲಿ ಮೀನು ೧೦-೧೫ ಗಂಟೆಗಳ ಮೊದಲೇ ಬಿರುಗಾಳಿಯ ಮುನ್ಸೂಚನ ಅರಿಯುತ್ತದೆ. ಆದ್ದರಿಂದ ಸಮುದ್ರ ದಂಡೆಯಿಂದ ಸಮುದ್ರದಾಳಕ್ಕೆ ಹೋಗುತ್ತದೆ. ಕೇಡುಗಾಲ ಬಂದಾಗ ಅದನ್ನರಿತ ಮೀನು ಸಮುದ್ರದಾಳದ ಮೀನು ನೀರಿನ ಮೇಲೆ ಬರುತ್ತದೆ. ಆರ್‍ಕ್ಟಿಕ್ ಪ್ರದೇಶದಲ್ಲಿ ವಾಸಿಸುವ ಟಾರಾಮಿಗಾನ್ ಎಂಬ ಹಕ್ಕಿಯನ್ನು ಪಕ್ಷಿ ಸಂಕುಲದ ಜೋತಿಷಿ ಎಂದೇ ಗುರುತಿಸಲಾಗುತ್ತದೆ. ಏಕೆಂದರೆ ತನ್ನ ಪರಿಸರದಲ್ಲಿ ಮುಂದೆ ಆಗಲಿರುವ ಬದಲಾವಣೆಗಳನ್ನು ಗುರುತಿಸುತ್ತದೆ. ವೈಪರಿತ್ಯವಾದ ಸೂಚನೆಗಳೆನಾದರೂ ತಿಳಿದರೆ ಅಲ್ಲಿಂದ ಜಾಗ ಖಾಲಿಮಾಡಿ ಬಿಡುತ್ತವೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...